ತಾಪಮಾನ ಏರಿಕೆಯಾಗುತ್ತಿದ್ದಂತೆಯೇ ಇದೀಗ ಕೆಲವು ಕಡೆ ಮಳೆ ಸಾಧ್ಯತೆಯ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಸಿದೆ. ಇಂದು ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು ತಿಳಿಸಿದೆ. ಕರಾವಳಿ ಜಿಲ್ಲೆಯಲ್ಲಿ ಸೋಮವಾರ ಹಾಗೂ ಮಂಗಳವಾರ ಕೂಡಾ ಹೀಟ್ ವೇವ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚಾಗುತ್ತಿದೆ.ರಾಜ್ಯದ ಹಲವೆಡೆ ಒಣಹವೆ ಮುಂದುವರಿಯಲಿದೆ. ಈ ನಡುವೆ ಕೇರಳದ ಕ್ಯಾಲಿಕಟ್ನಲ್ಲಿ ಮಳೆಯಾಗಿದೆ. ತಮಿಳುನಾಡಿನ ಕೆಲವು ಕಡೆ ಮಳೆಯ ನಿರೀಕ್ಷೆ ಇತ್ತು. ಆದರೆ ಈಗ ಪರಿಸ್ಥಿತಿ ಅಲ್ಲಿ ಬದಲಾಗಿದೆ.
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…