Opinion

ಬೇರೆ ಬೇರೆ ದೇಶಗಳಿಗೆ ಇರುವಂತೆ ಸ್ವರ್ಗಕ್ಕೂ ಇದೆ ವಿಶೇಷ ಕರೆನ್ಸಿ..! | ಯಾವುದು ಅದು..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಒಬ್ಬ ಅತಿಯಾದ ಶ್ರಿಮಂತ(Rich man) ಇದ್ದ. ಅವನು ಧರ್ಮದ(Dharma) ಮೇಲೆ ನಂಬಿಕೆಯನ್ನೂ ಇಟ್ಟಿದ್ದ. ಅವನಿಗೆ 10-15 ಕಂಪೆನಿ(Company)ಹಾಗೂ ಬೇರೆ ಬೇರೆ ವ್ಯವಹಾರ(Business) ಇತ್ತು. ಸಾವಿರಾರು ಜನರು, ಅವನ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಒಂದು ದಿನ ಕಾರಿನಲ್ಲಿ ಹೋಗುವಾಗ, ರೇಡಿಯೋದಲ್ಲಿ(Radio) ಯಾರೋ ಸ್ವಾಮಿಗಳು, “ಸತ್ತಾಗ, ಮೇಲೆ ಹೋಗುವಾಗ, ಮನುಷ್ಯ(Human), ಅವನ ಸಂಪತ್ತನ್ನು(Wealth) ಮೇಲೆ ಕೊಂಡು ಹೋಗಲು ಸಾಧ್ಯ ಇಲ್ಲ” ಹೇಳುವುದನ್ನು ಕೇಳಿದ. ಹಾಗೆ, ಅವನ ಕಚೇರಿ(Office) ತಲುಪುತ್ತಲೇ, ಅವನಿಗೆ ಒಂದು ಉಪಾಯ ಹೊಳೆಯಿತು.

Advertisement
Advertisement

ತನ್ನ ಎಲ್ಲಾ ಕಂಪೆನಿಯ ನೋಟೀಸ್ ಬೋರ್ಡ್ ನಲ್ಲಿ, ಹೀಗೆ ಬರೆದು ಹಾಕಿದ “ನನಗೆ ಯಾರಾದರೂ, ನನ್ನ ಸಂಪತ್ತನ್ನು, ಸತ್ತಾಗ, ಮೇಲೆ ಸ್ವರ್ಗಕ್ಕೆ ಕೊಂಡು ಹೋಗುವ ಉಪಾಯ ತಿಳಿಸಿದರೆ, ಅವರಿಗೆ 5 ಕೋಟಿ ರುಪಾಯಿ ಬಹುಮಾನ ಕೊಡುವೆನು.” ತಿಂಗಳು ಕಳೆದರೂ, ಯಾರೂ ಉಪಾಯ ಹೇಳಲು ಬರಲಿಲ್ಲ. ಶ್ರೀಮಂತನಿಗೆ ನಿರಾಶೆ ಆಯಿತು. ಆದರೆ, ಒಂದು ದಿನ, ಒಬ್ಬ ಭಿಕ್ಷುಕ(Bugger), ಅವನ ಕಚೇರಿಗೆ ಬಂದು, ತಾನು ಉಪಾಯ ತಿಳಿಸುತ್ತೇನೆ ಎಂದು ಹೇಳಿದ. ಶ್ರೀಮಂತನಿಗೆ ತುಂಬಾ ಆತುರ ಆಯಿತು. ಭಿಕ್ಷುಕ, ಶ್ರೀಮಂತನಿಗೆ ಕೇಳಿದ, ಒಡೆಯಾ, ನೀವು ಅಮೇರಿಕಾ, ಇಂಗ್ಲೆಂಡ್ ಅಥವಾ ಜಪಾನಿಗೆ ಹೋದಾಗ, ಅಲ್ಲಿ, ಭಾರತದ ರುಪಾಯಿ ಉಪಯೋಗಿಸುವಿರಾ ? ಶ್ರಿಮಂತ ಉತ್ತರಿಸಿದ, ಇಲ್ಲ. ಅಮೇರಿಕಾದಲ್ಲಿ ಡಾಲರ್, ಇಂಗ್ಲೆಂಡ್ನಲ್ಲಿ ಪೌಂಡ್, ಜಪಾನಿನಲ್ಲಿ ಯೆನ್ನ್ ಉಪಯೋಗ ಮಾಡ ಬೇಕಾಗುವುದು. ಅಲ್ಲಿಯ ಹಣ(ಕರೆನ್ಸಿ) ಬೇರೆ.

ಭಿಕ್ಷುಕ ಹೇಳಿದ, ಹಾಗಾದರೆ, ಭಾರತದಲ್ಲಿ ಉಪಯೋಗಿಸಿದ ರೂಪಾಯಿಯನ್ನು , ಸ್ವರ್ಗ ಲೋಕದಲ್ಲಿ ಉಪಯೋಗಿಸಲು ಸಾಧ್ಯವೇ ? ಅದು ಕೂಡಾ, ಬೇರೆಯೇ ಲೋಕ. ಸ್ವರ್ಗದ ಕರೆನ್ಸಿಯೇ ಬೇರೆ. ನಿಮ್ಮ ಸಂಪತ್ತನ್ನು, ಆ ಕರೆನ್ಸಿಯಲ್ಲಿ ಬದಲಾವಣೆ ಮಾಡಿ, ಸಾಯುವಾಗ, ತೆಗೆದು ಕೊಂಡು ಹೋಗ ಬೇಕಲ್ಲವೇ ? ಶ್ರೀಮಂತನಿಗೆ, ಕುತೂಹಲ ಇನ್ನೂ ಹೆಚ್ಚಾಯಿತು. ಅವನು ಭಿಕ್ಷುಕನಿಗೆ ಹೇಳಿದ, ಸುಮ್ಮನೆ ಸಮಯ ವ್ಯರ್ಥ ಮಾಡಬೇಡ, ಬೇಗ, ಸ್ವರ್ಗದ ಕರೆನ್ಸಿ ಏನು ಎಂದು ಹೇಳು.

ಭಿಕ್ಷುಕ ಹೇಳಿದ, ಸ್ವರ್ಗದಲ್ಲಿ, “ಪುಣ್ಯ” ಎಂಬ ಕರೆನ್ಸಿ ನಡೆಯುವುದು. ಭೂಮಿಯಲ್ಲಿ, ನಿನ್ನ ಸಂಪತ್ತಿನಿಂದ ಪುಣ್ಯವನ್ನು ಸಂಪಾದಿಸು, ಅದರಿಂದ ನೀನು ಸ್ವರ್ಗದಲ್ಲಿ ಸಂತೋಷವಾಗಿ ವ್ಯವಹರಿಸಬಹುದು. ನಿನ್ನ ಸಂಪತ್ತನ್ನು “ಪುಣ್ಯ” ಆಗಿ ಬದಲಾವಣೆ ಮಾಡಿಕೊಳ್ಳು. ಶ್ರೀಮಂತನ ಮನಸ್ಸು ಹಾಗು ಆತ್ಮ ಎರಡೂ ಬಾಗಿಲು ತೆಗೆಯಿತು. ಭೀಕ್ಷುಕನಿಗೆ ಹೇಳಿದ ಬಹುಮಾನ ಕೊಟ್ಟು ಕಳುಹಿಸಿದ. ಆ ದಿನದಿಂದಲೇ, ತನ್ನ ಸಂಪತ್ತನ್ನು ಬಡವರಿಗೆ, ಕಷ್ಟದಲ್ಲಿರುವವರಿಗೆ ಧಾನ ಮಾಡಲು ಪ್ರಾರಂಭ ಮಾಡಿದ. ಅವನ ಸಂಪತ್ತು “ಪುಣ್ಯ”ಎಂಬ ಕರೆನ್ಸಿ ಗೆ ಬದಲಾವಣೆ ಆಗಲು ಪ್ರಾರಂಭ ಆಯಿತು.

ಪುಣ್ಯವೇ ಸ್ವರ್ಗದ ಕರೆನ್ಸಿ…

Advertisement

(ಸಂಗ್ರಹ : ಡಿಜಿಟಲ್‌ ಮೀಡಿಯಾ )

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ

ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…

3 hours ago

ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ

ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…

3 hours ago

ರಾಮನ ಆದರ್ಶ ಸರ್ವಕಾಲಿಕ : ರಾಘವೇಶ್ವರ ಶ್ರೀ

ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…

5 hours ago

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು

ಕ್ಯಾನ್ಸರ್‌ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ…

5 hours ago

ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ

ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ…

5 hours ago

2025ರ ನಾಗರಪಂಚಮಿಯಲ್ಲಿ ಈ ರಾಶಿಗಳಿಗೆ ಅದೃಷ್ಟ! :ನಾಗದೇವರ ಕೃಪೆಗಾಗಿ ಹೀಗೆ ಮಾಡಿ…

ನಾಗರಪಂಚಮಿ, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುವ ಪವಿತ್ರ ಹಬ್ಬವಾಗಿದೆ.…

10 hours ago