ಸುಳ್ಯ ತಾಲೂಕಿನ ಗ್ರಾಮೀಣ ಭಾಗದಲ್ಲಿ ಭಾರೀ ಮಳೆಯಾಗಿದೆ. ಮೆಟ್ಟಿನಡ್ಕ, ಕಂದ್ರಪ್ಪಾಡಿ, ಗುತ್ತಿಗಾರು, ಕಮಿಲ, ಬಳ್ಪ, ಸಂಪಾಜೆ, ಕಲ್ಲುಗುಂಡಿ, ಮಡಪ್ಪಾಡಿ ಮೊದಲಾದ ಕಡೆಗಳಲ್ಲಿ ಭೀಕರ ಮಳೆಯಾಗಿದೆ. ಭಾರೀ ಮಳೆಗೆ ವಳಲಂಬೆ ದೇವಸ್ಥಾನದ ಹೊರಾಂಗಣ ಮುಳುಗಿದೆ. ಅನೇಕ ವರ್ಷಗಳಿಂದ ಈ ಮಾದರಿಯ ಮಳೆ ಕಂಡಿರಲಿಲ್ಲ ಎಂದು ಜನರು ಹೇಳುತ್ತಾರೆ. ಚಿಲ್ತಡ್ಕ. ಮೆಟ್ಟಿನಡ್ಕ ಮೊದಲಾದ ಕಡೆಗಳಲ್ಲೂ ಹೊಳೆ ಉಕ್ಕಿ ಹರಿದಿದೆ. ಸದ್ಯ ಮಳೆ ಕಡಿಮೆಗೊಂಡಿದೆ.
ಭಾರೀ ಮಳೆಗೆ ಬಳ್ಪದ ಬೋಗಾಯನಕೆರೆ ತುಂಬಿ ರಸ್ತೆಗೆ ನೀರು ಉಕ್ಕಿದರೆ, ಪಂಜ ಹೊಳೆ ತುಂಬಿ ಹರಿದು ಪಂಜ-ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತಗೊಂಡಿದೆ. ಕಲ್ಲುಗುಂಡಿ ಸಂಪಾಜೆಯಲ್ಲೂ ಸತತ ಮೂರನೇ ದಿನವೂ ಭಾರೀ ಮಳೆಯಾಗಿದೆ. ಪಯಸ್ವಿನಿ ನದಿ ಉಕ್ಕಿ ಹರಿಯುತ್ತಿದೆ. ಕಲ್ಲುಗುಂಡಿ ಪ್ರದೇಶದಲ್ಲಿ ರಸ್ತೆಯಲ್ಲಿ ಭಾರೀ ನೀರು ಹರಿಯುತ್ತಿದೆ. ಕೆಲವು ಹೆದ್ದಾರಿಯಲ್ಲಿ ಹೊಳೆಯ ನೀರು ಹಿನ್ನೀರಿನಂತೆ ನಿಂತಿದೆ. ವಾಹನ ಸಂವಾರ ಸ್ಥಗಿತಗೊಂಡಿದೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…