ಸುಳ್ಯ ತಾಲೂಕಿನ ಗ್ರಾಮೀಣ ಭಾಗದಲ್ಲಿ ಭಾರೀ ಮಳೆಯಾಗಿದೆ. ಮೆಟ್ಟಿನಡ್ಕ, ಕಂದ್ರಪ್ಪಾಡಿ, ಗುತ್ತಿಗಾರು, ಕಮಿಲ, ಬಳ್ಪ, ಸಂಪಾಜೆ, ಕಲ್ಲುಗುಂಡಿ, ಮಡಪ್ಪಾಡಿ ಮೊದಲಾದ ಕಡೆಗಳಲ್ಲಿ ಭೀಕರ ಮಳೆಯಾಗಿದೆ. ಭಾರೀ ಮಳೆಗೆ ವಳಲಂಬೆ ದೇವಸ್ಥಾನದ ಹೊರಾಂಗಣ ಮುಳುಗಿದೆ. ಅನೇಕ ವರ್ಷಗಳಿಂದ ಈ ಮಾದರಿಯ ಮಳೆ ಕಂಡಿರಲಿಲ್ಲ ಎಂದು ಜನರು ಹೇಳುತ್ತಾರೆ. ಚಿಲ್ತಡ್ಕ. ಮೆಟ್ಟಿನಡ್ಕ ಮೊದಲಾದ ಕಡೆಗಳಲ್ಲೂ ಹೊಳೆ ಉಕ್ಕಿ ಹರಿದಿದೆ. ಸದ್ಯ ಮಳೆ ಕಡಿಮೆಗೊಂಡಿದೆ.
ಭಾರೀ ಮಳೆಗೆ ಬಳ್ಪದ ಬೋಗಾಯನಕೆರೆ ತುಂಬಿ ರಸ್ತೆಗೆ ನೀರು ಉಕ್ಕಿದರೆ, ಪಂಜ ಹೊಳೆ ತುಂಬಿ ಹರಿದು ಪಂಜ-ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತಗೊಂಡಿದೆ. ಕಲ್ಲುಗುಂಡಿ ಸಂಪಾಜೆಯಲ್ಲೂ ಸತತ ಮೂರನೇ ದಿನವೂ ಭಾರೀ ಮಳೆಯಾಗಿದೆ. ಪಯಸ್ವಿನಿ ನದಿ ಉಕ್ಕಿ ಹರಿಯುತ್ತಿದೆ. ಕಲ್ಲುಗುಂಡಿ ಪ್ರದೇಶದಲ್ಲಿ ರಸ್ತೆಯಲ್ಲಿ ಭಾರೀ ನೀರು ಹರಿಯುತ್ತಿದೆ. ಕೆಲವು ಹೆದ್ದಾರಿಯಲ್ಲಿ ಹೊಳೆಯ ನೀರು ಹಿನ್ನೀರಿನಂತೆ ನಿಂತಿದೆ. ವಾಹನ ಸಂವಾರ ಸ್ಥಗಿತಗೊಂಡಿದೆ.
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…