ಸುಳ್ಯ ತಾಲೂಕಿನ ಗ್ರಾಮೀಣ ಭಾಗದಲ್ಲಿ ಭಾರೀ ಮಳೆಯಾಗಿದೆ. ಮೆಟ್ಟಿನಡ್ಕ, ಕಂದ್ರಪ್ಪಾಡಿ, ಗುತ್ತಿಗಾರು, ಕಮಿಲ, ಬಳ್ಪ, ಸಂಪಾಜೆ, ಕಲ್ಲುಗುಂಡಿ, ಮಡಪ್ಪಾಡಿ ಮೊದಲಾದ ಕಡೆಗಳಲ್ಲಿ ಭೀಕರ ಮಳೆಯಾಗಿದೆ. ಭಾರೀ ಮಳೆಗೆ ವಳಲಂಬೆ ದೇವಸ್ಥಾನದ ಹೊರಾಂಗಣ ಮುಳುಗಿದೆ. ಅನೇಕ ವರ್ಷಗಳಿಂದ ಈ ಮಾದರಿಯ ಮಳೆ ಕಂಡಿರಲಿಲ್ಲ ಎಂದು ಜನರು ಹೇಳುತ್ತಾರೆ. ಚಿಲ್ತಡ್ಕ. ಮೆಟ್ಟಿನಡ್ಕ ಮೊದಲಾದ ಕಡೆಗಳಲ್ಲೂ ಹೊಳೆ ಉಕ್ಕಿ ಹರಿದಿದೆ. ಸದ್ಯ ಮಳೆ ಕಡಿಮೆಗೊಂಡಿದೆ.
ಭಾರೀ ಮಳೆಗೆ ಬಳ್ಪದ ಬೋಗಾಯನಕೆರೆ ತುಂಬಿ ರಸ್ತೆಗೆ ನೀರು ಉಕ್ಕಿದರೆ, ಪಂಜ ಹೊಳೆ ತುಂಬಿ ಹರಿದು ಪಂಜ-ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತಗೊಂಡಿದೆ. ಕಲ್ಲುಗುಂಡಿ ಸಂಪಾಜೆಯಲ್ಲೂ ಸತತ ಮೂರನೇ ದಿನವೂ ಭಾರೀ ಮಳೆಯಾಗಿದೆ. ಪಯಸ್ವಿನಿ ನದಿ ಉಕ್ಕಿ ಹರಿಯುತ್ತಿದೆ. ಕಲ್ಲುಗುಂಡಿ ಪ್ರದೇಶದಲ್ಲಿ ರಸ್ತೆಯಲ್ಲಿ ಭಾರೀ ನೀರು ಹರಿಯುತ್ತಿದೆ. ಕೆಲವು ಹೆದ್ದಾರಿಯಲ್ಲಿ ಹೊಳೆಯ ನೀರು ಹಿನ್ನೀರಿನಂತೆ ನಿಂತಿದೆ. ವಾಹನ ಸಂವಾರ ಸ್ಥಗಿತಗೊಂಡಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…