ಸುಳ್ಯ ತಾಲೂಕಿನ ಗ್ರಾಮೀಣ ಭಾಗದಲ್ಲಿ ಭಾರೀ ಮಳೆಯಾಗಿದೆ. ಮೆಟ್ಟಿನಡ್ಕ, ಕಂದ್ರಪ್ಪಾಡಿ, ಗುತ್ತಿಗಾರು, ಕಮಿಲ, ಬಳ್ಪ, ಸಂಪಾಜೆ, ಕಲ್ಲುಗುಂಡಿ, ಮಡಪ್ಪಾಡಿ ಮೊದಲಾದ ಕಡೆಗಳಲ್ಲಿ ಭೀಕರ ಮಳೆಯಾಗಿದೆ. ಭಾರೀ ಮಳೆಗೆ ವಳಲಂಬೆ ದೇವಸ್ಥಾನದ ಹೊರಾಂಗಣ ಮುಳುಗಿದೆ. ಅನೇಕ ವರ್ಷಗಳಿಂದ ಈ ಮಾದರಿಯ ಮಳೆ ಕಂಡಿರಲಿಲ್ಲ ಎಂದು ಜನರು ಹೇಳುತ್ತಾರೆ. ಚಿಲ್ತಡ್ಕ. ಮೆಟ್ಟಿನಡ್ಕ ಮೊದಲಾದ ಕಡೆಗಳಲ್ಲೂ ಹೊಳೆ ಉಕ್ಕಿ ಹರಿದಿದೆ. ಸದ್ಯ ಮಳೆ ಕಡಿಮೆಗೊಂಡಿದೆ.
ಭಾರೀ ಮಳೆಗೆ ಬಳ್ಪದ ಬೋಗಾಯನಕೆರೆ ತುಂಬಿ ರಸ್ತೆಗೆ ನೀರು ಉಕ್ಕಿದರೆ, ಪಂಜ ಹೊಳೆ ತುಂಬಿ ಹರಿದು ಪಂಜ-ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತಗೊಂಡಿದೆ. ಕಲ್ಲುಗುಂಡಿ ಸಂಪಾಜೆಯಲ್ಲೂ ಸತತ ಮೂರನೇ ದಿನವೂ ಭಾರೀ ಮಳೆಯಾಗಿದೆ. ಪಯಸ್ವಿನಿ ನದಿ ಉಕ್ಕಿ ಹರಿಯುತ್ತಿದೆ. ಕಲ್ಲುಗುಂಡಿ ಪ್ರದೇಶದಲ್ಲಿ ರಸ್ತೆಯಲ್ಲಿ ಭಾರೀ ನೀರು ಹರಿಯುತ್ತಿದೆ. ಕೆಲವು ಹೆದ್ದಾರಿಯಲ್ಲಿ ಹೊಳೆಯ ನೀರು ಹಿನ್ನೀರಿನಂತೆ ನಿಂತಿದೆ. ವಾಹನ ಸಂವಾರ ಸ್ಥಗಿತಗೊಂಡಿದೆ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…