ಸುಳ್ಯ ತಾಲೂಕಿನ ಗ್ರಾಮೀಣ ಭಾಗದಲ್ಲಿ ಭಾರೀ ಮಳೆಯಾಗಿದೆ. ಮೆಟ್ಟಿನಡ್ಕ, ಕಂದ್ರಪ್ಪಾಡಿ, ಗುತ್ತಿಗಾರು, ಕಮಿಲ, ಬಳ್ಪ, ಸಂಪಾಜೆ, ಕಲ್ಲುಗುಂಡಿ, ಮಡಪ್ಪಾಡಿ ಮೊದಲಾದ ಕಡೆಗಳಲ್ಲಿ ಭೀಕರ ಮಳೆಯಾಗಿದೆ. ಭಾರೀ ಮಳೆಗೆ ವಳಲಂಬೆ ದೇವಸ್ಥಾನದ ಹೊರಾಂಗಣ ಮುಳುಗಿದೆ. ಅನೇಕ ವರ್ಷಗಳಿಂದ ಈ ಮಾದರಿಯ ಮಳೆ ಕಂಡಿರಲಿಲ್ಲ ಎಂದು ಜನರು ಹೇಳುತ್ತಾರೆ. ಚಿಲ್ತಡ್ಕ. ಮೆಟ್ಟಿನಡ್ಕ ಮೊದಲಾದ ಕಡೆಗಳಲ್ಲೂ ಹೊಳೆ ಉಕ್ಕಿ ಹರಿದಿದೆ. ಸದ್ಯ ಮಳೆ ಕಡಿಮೆಗೊಂಡಿದೆ.
ಭಾರೀ ಮಳೆಗೆ ಬಳ್ಪದ ಬೋಗಾಯನಕೆರೆ ತುಂಬಿ ರಸ್ತೆಗೆ ನೀರು ಉಕ್ಕಿದರೆ, ಪಂಜ ಹೊಳೆ ತುಂಬಿ ಹರಿದು ಪಂಜ-ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತಗೊಂಡಿದೆ. ಕಲ್ಲುಗುಂಡಿ ಸಂಪಾಜೆಯಲ್ಲೂ ಸತತ ಮೂರನೇ ದಿನವೂ ಭಾರೀ ಮಳೆಯಾಗಿದೆ. ಪಯಸ್ವಿನಿ ನದಿ ಉಕ್ಕಿ ಹರಿಯುತ್ತಿದೆ. ಕಲ್ಲುಗುಂಡಿ ಪ್ರದೇಶದಲ್ಲಿ ರಸ್ತೆಯಲ್ಲಿ ಭಾರೀ ನೀರು ಹರಿಯುತ್ತಿದೆ. ಕೆಲವು ಹೆದ್ದಾರಿಯಲ್ಲಿ ಹೊಳೆಯ ನೀರು ಹಿನ್ನೀರಿನಂತೆ ನಿಂತಿದೆ. ವಾಹನ ಸಂವಾರ ಸ್ಥಗಿತಗೊಂಡಿದೆ.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…