ಸುಳ್ಯ ತಾಲೂಕಿನ ಗ್ರಾಮೀಣ ಭಾಗದಲ್ಲಿ ಭಾರೀ ಮಳೆಯಾಗಿದೆ. ಮೆಟ್ಟಿನಡ್ಕ, ಕಂದ್ರಪ್ಪಾಡಿ, ಗುತ್ತಿಗಾರು, ಕಮಿಲ, ಬಳ್ಪ, ಸಂಪಾಜೆ, ಕಲ್ಲುಗುಂಡಿ, ಮಡಪ್ಪಾಡಿ ಮೊದಲಾದ ಕಡೆಗಳಲ್ಲಿ ಭೀಕರ ಮಳೆಯಾಗಿದೆ. ಭಾರೀ ಮಳೆಗೆ ವಳಲಂಬೆ ದೇವಸ್ಥಾನದ ಹೊರಾಂಗಣ ಮುಳುಗಿದೆ. ಅನೇಕ ವರ್ಷಗಳಿಂದ ಈ ಮಾದರಿಯ ಮಳೆ ಕಂಡಿರಲಿಲ್ಲ ಎಂದು ಜನರು ಹೇಳುತ್ತಾರೆ. ಚಿಲ್ತಡ್ಕ. ಮೆಟ್ಟಿನಡ್ಕ ಮೊದಲಾದ ಕಡೆಗಳಲ್ಲೂ ಹೊಳೆ ಉಕ್ಕಿ ಹರಿದಿದೆ. ಸದ್ಯ ಮಳೆ ಕಡಿಮೆಗೊಂಡಿದೆ.
ಭಾರೀ ಮಳೆಗೆ ಬಳ್ಪದ ಬೋಗಾಯನಕೆರೆ ತುಂಬಿ ರಸ್ತೆಗೆ ನೀರು ಉಕ್ಕಿದರೆ, ಪಂಜ ಹೊಳೆ ತುಂಬಿ ಹರಿದು ಪಂಜ-ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತಗೊಂಡಿದೆ. ಕಲ್ಲುಗುಂಡಿ ಸಂಪಾಜೆಯಲ್ಲೂ ಸತತ ಮೂರನೇ ದಿನವೂ ಭಾರೀ ಮಳೆಯಾಗಿದೆ. ಪಯಸ್ವಿನಿ ನದಿ ಉಕ್ಕಿ ಹರಿಯುತ್ತಿದೆ. ಕಲ್ಲುಗುಂಡಿ ಪ್ರದೇಶದಲ್ಲಿ ರಸ್ತೆಯಲ್ಲಿ ಭಾರೀ ನೀರು ಹರಿಯುತ್ತಿದೆ. ಕೆಲವು ಹೆದ್ದಾರಿಯಲ್ಲಿ ಹೊಳೆಯ ನೀರು ಹಿನ್ನೀರಿನಂತೆ ನಿಂತಿದೆ. ವಾಹನ ಸಂವಾರ ಸ್ಥಗಿತಗೊಂಡಿದೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…