ಸುಳ್ಯ ತಾಲೂಕಿನ ಗ್ರಾಮೀಣ ಭಾಗದಲ್ಲಿ ಭಾರೀ ಮಳೆಯಾಗಿದೆ. ಮೆಟ್ಟಿನಡ್ಕ, ಕಂದ್ರಪ್ಪಾಡಿ, ಗುತ್ತಿಗಾರು, ಕಮಿಲ, ಬಳ್ಪ, ಸಂಪಾಜೆ, ಕಲ್ಲುಗುಂಡಿ, ಮಡಪ್ಪಾಡಿ ಮೊದಲಾದ ಕಡೆಗಳಲ್ಲಿ ಭೀಕರ ಮಳೆಯಾಗಿದೆ. ಭಾರೀ ಮಳೆಗೆ ವಳಲಂಬೆ ದೇವಸ್ಥಾನದ ಹೊರಾಂಗಣ ಮುಳುಗಿದೆ. ಅನೇಕ ವರ್ಷಗಳಿಂದ ಈ ಮಾದರಿಯ ಮಳೆ ಕಂಡಿರಲಿಲ್ಲ ಎಂದು ಜನರು ಹೇಳುತ್ತಾರೆ. ಚಿಲ್ತಡ್ಕ. ಮೆಟ್ಟಿನಡ್ಕ ಮೊದಲಾದ ಕಡೆಗಳಲ್ಲೂ ಹೊಳೆ ಉಕ್ಕಿ ಹರಿದಿದೆ. ಸದ್ಯ ಮಳೆ ಕಡಿಮೆಗೊಂಡಿದೆ.
ಭಾರೀ ಮಳೆಗೆ ಬಳ್ಪದ ಬೋಗಾಯನಕೆರೆ ತುಂಬಿ ರಸ್ತೆಗೆ ನೀರು ಉಕ್ಕಿದರೆ, ಪಂಜ ಹೊಳೆ ತುಂಬಿ ಹರಿದು ಪಂಜ-ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತಗೊಂಡಿದೆ. ಕಲ್ಲುಗುಂಡಿ ಸಂಪಾಜೆಯಲ್ಲೂ ಸತತ ಮೂರನೇ ದಿನವೂ ಭಾರೀ ಮಳೆಯಾಗಿದೆ. ಪಯಸ್ವಿನಿ ನದಿ ಉಕ್ಕಿ ಹರಿಯುತ್ತಿದೆ. ಕಲ್ಲುಗುಂಡಿ ಪ್ರದೇಶದಲ್ಲಿ ರಸ್ತೆಯಲ್ಲಿ ಭಾರೀ ನೀರು ಹರಿಯುತ್ತಿದೆ. ಕೆಲವು ಹೆದ್ದಾರಿಯಲ್ಲಿ ಹೊಳೆಯ ನೀರು ಹಿನ್ನೀರಿನಂತೆ ನಿಂತಿದೆ. ವಾಹನ ಸಂವಾರ ಸ್ಥಗಿತಗೊಂಡಿದೆ.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…