ಸುಳ್ಯ ತಾಲೂಕಿನ ಗ್ರಾಮೀಣ ಭಾಗದಲ್ಲಿ ಭಾರೀ ಮಳೆಯಾಗಿದೆ. ಮೆಟ್ಟಿನಡ್ಕ, ಕಂದ್ರಪ್ಪಾಡಿ, ಗುತ್ತಿಗಾರು, ಕಮಿಲ, ಬಳ್ಪ, ಸಂಪಾಜೆ, ಕಲ್ಲುಗುಂಡಿ, ಮಡಪ್ಪಾಡಿ ಮೊದಲಾದ ಕಡೆಗಳಲ್ಲಿ ಭೀಕರ ಮಳೆಯಾಗಿದೆ. ಭಾರೀ ಮಳೆಗೆ ವಳಲಂಬೆ ದೇವಸ್ಥಾನದ ಹೊರಾಂಗಣ ಮುಳುಗಿದೆ. ಅನೇಕ ವರ್ಷಗಳಿಂದ ಈ ಮಾದರಿಯ ಮಳೆ ಕಂಡಿರಲಿಲ್ಲ ಎಂದು ಜನರು ಹೇಳುತ್ತಾರೆ. ಚಿಲ್ತಡ್ಕ. ಮೆಟ್ಟಿನಡ್ಕ ಮೊದಲಾದ ಕಡೆಗಳಲ್ಲೂ ಹೊಳೆ ಉಕ್ಕಿ ಹರಿದಿದೆ. ಸದ್ಯ ಮಳೆ ಕಡಿಮೆಗೊಂಡಿದೆ.
ಭಾರೀ ಮಳೆಗೆ ಬಳ್ಪದ ಬೋಗಾಯನಕೆರೆ ತುಂಬಿ ರಸ್ತೆಗೆ ನೀರು ಉಕ್ಕಿದರೆ, ಪಂಜ ಹೊಳೆ ತುಂಬಿ ಹರಿದು ಪಂಜ-ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತಗೊಂಡಿದೆ. ಕಲ್ಲುಗುಂಡಿ ಸಂಪಾಜೆಯಲ್ಲೂ ಸತತ ಮೂರನೇ ದಿನವೂ ಭಾರೀ ಮಳೆಯಾಗಿದೆ. ಪಯಸ್ವಿನಿ ನದಿ ಉಕ್ಕಿ ಹರಿಯುತ್ತಿದೆ. ಕಲ್ಲುಗುಂಡಿ ಪ್ರದೇಶದಲ್ಲಿ ರಸ್ತೆಯಲ್ಲಿ ಭಾರೀ ನೀರು ಹರಿಯುತ್ತಿದೆ. ಕೆಲವು ಹೆದ್ದಾರಿಯಲ್ಲಿ ಹೊಳೆಯ ನೀರು ಹಿನ್ನೀರಿನಂತೆ ನಿಂತಿದೆ. ವಾಹನ ಸಂವಾರ ಸ್ಥಗಿತಗೊಂಡಿದೆ.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…