ಸುಳ್ಯ ತಾಲೂಕಿನ ಗ್ರಾಮೀಣ ಭಾಗದಲ್ಲಿ ಸತತ ಭಾರೀ ಮಳೆಯಾಗುತ್ತಿದೆ. ಕಲ್ಮಕಾರು, ಕೊಲ್ಲಮೊಗ್ರ ಪ್ರದೇಶದಲ್ಲಿ ಸಂಜೆ ಆರಂಭವಾದ ಭೀಕರ ಮಳೆ ರಾತ್ರಿಯವರೆಗೂ ಸುರಿದಿದೆ. ಹೊಳೆಯಲ್ಲಿ ಭಾರೀ ನೀರು ಉಕ್ಕಿ ಹರಿಯುತ್ತಿದೆ. ಕೊಲ್ಲಮೊಗ್ರದ ಸೇತುವೆ ಮುಳುಗಡೆಯಾಗಿದೆ. ಕೆಲವು ಮನೆಗಳಿಗೂ ನೀರು ನುಗ್ಗಿದೆ. ಸಂಜೆಯ ವೇಳೆಗೆ ಜನರು ಮನೆಗೆ ತೆರಳಲು ಪರದಾಟ ನಡೆಸುವಂತಾಯಿತು.
ಈ ನಡುವೆ ರಸ್ತೆಯೂ ಸಮಸ್ಯೆ, ನೆಟ್ವರ್ಕ್ ಸಮಸ್ಯೆ ಕೂಡಾ ಕಾಡುತ್ತಿದೆ. ಮೊಬೈಲ್ ಸಿಗ್ನಲ್ ಸಿಗದೆ ಮಾಹಿತಿ ನೀಡುವುದಕ್ಕೂ ಕಷ್ಟವಾಗಿದೆ. ಕೊಲ್ಲಮೊಗ್ರದ ಯುವಕರ ತಂಡ ಅತಂತ್ರ ಸ್ಥಿತಿಯಲ್ಲಿ ಜನರಿಗೆ ನೆರವಾದರು. ಯುವಕರು ನಿರಂತರವಾಗಿ ಶ್ರಮ ವಹಿಸುತ್ತಿದ್ದಾರೆ. ತಡರಾತ್ರಿವರೆಗೂ ಸೇವೆಯಲ್ಲಿ ತೊಡಗಿದ್ದಾರೆ.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…