ಸುಳ್ಯ ತಾಲೂಕಿನ ಗ್ರಾಮೀಣ ಭಾಗದಲ್ಲಿ ಸತತ ಭಾರೀ ಮಳೆಯಾಗುತ್ತಿದೆ. ಕಲ್ಮಕಾರು, ಕೊಲ್ಲಮೊಗ್ರ ಪ್ರದೇಶದಲ್ಲಿ ಸಂಜೆ ಆರಂಭವಾದ ಭೀಕರ ಮಳೆ ರಾತ್ರಿಯವರೆಗೂ ಸುರಿದಿದೆ. ಹೊಳೆಯಲ್ಲಿ ಭಾರೀ ನೀರು ಉಕ್ಕಿ ಹರಿಯುತ್ತಿದೆ. ಕೊಲ್ಲಮೊಗ್ರದ ಸೇತುವೆ ಮುಳುಗಡೆಯಾಗಿದೆ. ಕೆಲವು ಮನೆಗಳಿಗೂ ನೀರು ನುಗ್ಗಿದೆ. ಸಂಜೆಯ ವೇಳೆಗೆ ಜನರು ಮನೆಗೆ ತೆರಳಲು ಪರದಾಟ ನಡೆಸುವಂತಾಯಿತು.
ಈ ನಡುವೆ ರಸ್ತೆಯೂ ಸಮಸ್ಯೆ, ನೆಟ್ವರ್ಕ್ ಸಮಸ್ಯೆ ಕೂಡಾ ಕಾಡುತ್ತಿದೆ. ಮೊಬೈಲ್ ಸಿಗ್ನಲ್ ಸಿಗದೆ ಮಾಹಿತಿ ನೀಡುವುದಕ್ಕೂ ಕಷ್ಟವಾಗಿದೆ. ಕೊಲ್ಲಮೊಗ್ರದ ಯುವಕರ ತಂಡ ಅತಂತ್ರ ಸ್ಥಿತಿಯಲ್ಲಿ ಜನರಿಗೆ ನೆರವಾದರು. ಯುವಕರು ನಿರಂತರವಾಗಿ ಶ್ರಮ ವಹಿಸುತ್ತಿದ್ದಾರೆ. ತಡರಾತ್ರಿವರೆಗೂ ಸೇವೆಯಲ್ಲಿ ತೊಡಗಿದ್ದಾರೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…