ಸುಳ್ಯ ತಾಲೂಕಿನ ಗ್ರಾಮೀಣ ಭಾಗದಲ್ಲಿ ಸತತ ಭಾರೀ ಮಳೆಯಾಗುತ್ತಿದೆ. ಕಲ್ಮಕಾರು, ಕೊಲ್ಲಮೊಗ್ರ ಪ್ರದೇಶದಲ್ಲಿ ಸಂಜೆ ಆರಂಭವಾದ ಭೀಕರ ಮಳೆ ರಾತ್ರಿಯವರೆಗೂ ಸುರಿದಿದೆ. ಹೊಳೆಯಲ್ಲಿ ಭಾರೀ ನೀರು ಉಕ್ಕಿ ಹರಿಯುತ್ತಿದೆ. ಕೊಲ್ಲಮೊಗ್ರದ ಸೇತುವೆ ಮುಳುಗಡೆಯಾಗಿದೆ. ಕೆಲವು ಮನೆಗಳಿಗೂ ನೀರು ನುಗ್ಗಿದೆ. ಸಂಜೆಯ ವೇಳೆಗೆ ಜನರು ಮನೆಗೆ ತೆರಳಲು ಪರದಾಟ ನಡೆಸುವಂತಾಯಿತು.
ಈ ನಡುವೆ ರಸ್ತೆಯೂ ಸಮಸ್ಯೆ, ನೆಟ್ವರ್ಕ್ ಸಮಸ್ಯೆ ಕೂಡಾ ಕಾಡುತ್ತಿದೆ. ಮೊಬೈಲ್ ಸಿಗ್ನಲ್ ಸಿಗದೆ ಮಾಹಿತಿ ನೀಡುವುದಕ್ಕೂ ಕಷ್ಟವಾಗಿದೆ. ಕೊಲ್ಲಮೊಗ್ರದ ಯುವಕರ ತಂಡ ಅತಂತ್ರ ಸ್ಥಿತಿಯಲ್ಲಿ ಜನರಿಗೆ ನೆರವಾದರು. ಯುವಕರು ನಿರಂತರವಾಗಿ ಶ್ರಮ ವಹಿಸುತ್ತಿದ್ದಾರೆ. ತಡರಾತ್ರಿವರೆಗೂ ಸೇವೆಯಲ್ಲಿ ತೊಡಗಿದ್ದಾರೆ.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…