Advertisement
MIRROR FOCUS

ಭಾರೀ ಮಳೆಗೆ ಕುಸಿದ ಮನೆ | ಸಂಕಷ್ಟದಲ್ಲಿದೆ ಈ ಬಡ ಕುಟುಂಬ |

Share

ಪುತ್ತೂರು ನಗರದ ಹೊರವಲಯದ ಕಬಕ ಗ್ರಾಮದ ಮಂಜಲ್ಪಡ್ಪು ಜನತಾ ಕಾಲೋನಿಯ ನಿವಾಸಿ ವಸಂತ ಹೆಗ್ಡೆ ಅವರ ಮನೆ ವಿಪರೀತ ಮಳೆಯಿಂದಾಗಿ ಕುಸಿದು ಬಿದ್ದಿದೆ. ಈ ಬಡ ಕುಟುಂಬ ಬೀದಿ ಪಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

Advertisement
Advertisement
Advertisement
Advertisement
ವಸಂತ ಅವರ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ವಸಂತ ಅವರು ಕೂಲಿ ಕೆಲಸ ಮಾಡಿಕೊಂಡು ಸಂಸಾರದ ನಿರ್ವಹಣೆ ಮಾಡುತ್ತಿದ್ದರು, ಹಂಚು, ಸಿಮೆಂಟು ಶೀಟು ಅಳವಡಿಕೆಯೊಂದಿಗೆ ಸ್ವಲ್ಪಭಾಗ ತಾರಸಿ ಮಾಡಿರುವ ವಸಂತ ಹೆಗ್ಡೆ ಅವರ ಮನೆಯ ಮೇಲ್ಛಾವಣಿ ಸಂಪೂರ್ಣ ಕುಸಿದು ಬಿದ್ದಿದೆ. ಇದೀಗ ಮನೆಯ ಹಿಂಬದಿಯ ಗೋಡೆ ಮತ್ತು ತಾರಸಿ ಭಾಗ ಕುಸಿದಿದೆ. ಪ್ರಸ್ತುತ ಎದುರಾಗಿರುವ ವಿಪತ್ತಿನಿಂದಾಗಿ ವಸಂತ ಅವರು ಕಂಗಾಲಾಗಿದ್ದಾರೆ.
Advertisement
ಪುತ್ತೂರು ನಗರಸಭೆಯವರು ಕುಸಿದು ಬಿದ್ದಿರುವ ಮನೆಯ ಮೇಲ್ಚಾವಣಿಗೆ ಹೊದಿಸಲು ಪ್ಲಾಸ್ಟಿಕ್ ಟರ್ಪಾಲ್ ನೀಡಿದ್ದು, ಅದನ್ನು ಮನೆಗೆ ಹೊದಿಸಿ ಈ ಕುಟುಂಬ ಅಪಾಯದ ಸ್ಥಿತಿಯಲ್ಲಿ ವಾಸ್ತವ್ಯವಿದೆ. ಮನೆಗೆ ಇನ್ನಷ್ಟು ಹಾನಿ ಸಂಭವಿಸುವ ಸಾಧ್ಯತೆ ಇರುವುದರಿಂದ ನೋಟೀಸು ತಲುಪಿದ 2 ದಿನದೊಳಗೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಸೂಚಿಸಲಾಗಿದೆ. ತಪ್ಪಿದಲ್ಲಿ ಮಂದಿನ ದಿನಗಳಲ್ಲಿ ಅನಾಹುತ ಸಂಭವಿಸಿದಲ್ಲಿ ನಿಮ್ಮನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಉಪ್ಪಿನಂಗಡಿ ಹೋಬಳಿಯ ಕಂದಾಯ ನಿರೀಕ್ಷಕರು ವಸಂತ ಅವರಿಗೆ ನೀಡಿರುವ ಸೂಚನಾ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Advertisement
ಮನೆ ಸಂಪೂರ್ಣವಾಗಿ ಕುಸಿದು ಬೀಳುವ ಸ್ಥಿತಿಗೆ ತಲುಪಿದೆ. ತಾಯಿ ಅನಾರೋಗ್ಯ ಪೀಡಿತರಾಗಿದ್ದಾರೆ. ಅವರ ಔಷಧಿಗೂ ಖರ್ಚು ಮಾಡಬೇಕಾಗಿದೆ. ತಾನು ಕೂಲಿ ಕೆಲಸ ಮಾಡಿಕೊಂಡು ಕಷ್ಟದ ಸ್ಥಿತಿಯಲ್ಲಿ ಬದುಕುತ್ತಿದ್ದು, ಕುಸಿದಿರುವ ಮನೆಯವನ್ನು ಅದೇ ರೀತಿಯಲ್ಲಿ ಸರಿಪಡಿಸಿಕೊಟ್ಟರೆ ಸಾಕು ಎಂದು ವಸಂತ ಹೆಗ್ಡೆ ಅವರು ನಗರಸಭೆಗೆ ಮನವಿ ಮಾಡಿಕೊಂಡಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

22 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago