MIRROR FOCUS

ಭಾರೀ ಮಳೆಗೆ ಕುಸಿದ ಮನೆ | ಸಂಕಷ್ಟದಲ್ಲಿದೆ ಈ ಬಡ ಕುಟುಂಬ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು ನಗರದ ಹೊರವಲಯದ ಕಬಕ ಗ್ರಾಮದ ಮಂಜಲ್ಪಡ್ಪು ಜನತಾ ಕಾಲೋನಿಯ ನಿವಾಸಿ ವಸಂತ ಹೆಗ್ಡೆ ಅವರ ಮನೆ ವಿಪರೀತ ಮಳೆಯಿಂದಾಗಿ ಕುಸಿದು ಬಿದ್ದಿದೆ. ಈ ಬಡ ಕುಟುಂಬ ಬೀದಿ ಪಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

Advertisement
ವಸಂತ ಅವರ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ವಸಂತ ಅವರು ಕೂಲಿ ಕೆಲಸ ಮಾಡಿಕೊಂಡು ಸಂಸಾರದ ನಿರ್ವಹಣೆ ಮಾಡುತ್ತಿದ್ದರು, ಹಂಚು, ಸಿಮೆಂಟು ಶೀಟು ಅಳವಡಿಕೆಯೊಂದಿಗೆ ಸ್ವಲ್ಪಭಾಗ ತಾರಸಿ ಮಾಡಿರುವ ವಸಂತ ಹೆಗ್ಡೆ ಅವರ ಮನೆಯ ಮೇಲ್ಛಾವಣಿ ಸಂಪೂರ್ಣ ಕುಸಿದು ಬಿದ್ದಿದೆ. ಇದೀಗ ಮನೆಯ ಹಿಂಬದಿಯ ಗೋಡೆ ಮತ್ತು ತಾರಸಿ ಭಾಗ ಕುಸಿದಿದೆ. ಪ್ರಸ್ತುತ ಎದುರಾಗಿರುವ ವಿಪತ್ತಿನಿಂದಾಗಿ ವಸಂತ ಅವರು ಕಂಗಾಲಾಗಿದ್ದಾರೆ.
ಪುತ್ತೂರು ನಗರಸಭೆಯವರು ಕುಸಿದು ಬಿದ್ದಿರುವ ಮನೆಯ ಮೇಲ್ಚಾವಣಿಗೆ ಹೊದಿಸಲು ಪ್ಲಾಸ್ಟಿಕ್ ಟರ್ಪಾಲ್ ನೀಡಿದ್ದು, ಅದನ್ನು ಮನೆಗೆ ಹೊದಿಸಿ ಈ ಕುಟುಂಬ ಅಪಾಯದ ಸ್ಥಿತಿಯಲ್ಲಿ ವಾಸ್ತವ್ಯವಿದೆ. ಮನೆಗೆ ಇನ್ನಷ್ಟು ಹಾನಿ ಸಂಭವಿಸುವ ಸಾಧ್ಯತೆ ಇರುವುದರಿಂದ ನೋಟೀಸು ತಲುಪಿದ 2 ದಿನದೊಳಗೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಸೂಚಿಸಲಾಗಿದೆ. ತಪ್ಪಿದಲ್ಲಿ ಮಂದಿನ ದಿನಗಳಲ್ಲಿ ಅನಾಹುತ ಸಂಭವಿಸಿದಲ್ಲಿ ನಿಮ್ಮನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಉಪ್ಪಿನಂಗಡಿ ಹೋಬಳಿಯ ಕಂದಾಯ ನಿರೀಕ್ಷಕರು ವಸಂತ ಅವರಿಗೆ ನೀಡಿರುವ ಸೂಚನಾ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Advertisement
ಮನೆ ಸಂಪೂರ್ಣವಾಗಿ ಕುಸಿದು ಬೀಳುವ ಸ್ಥಿತಿಗೆ ತಲುಪಿದೆ. ತಾಯಿ ಅನಾರೋಗ್ಯ ಪೀಡಿತರಾಗಿದ್ದಾರೆ. ಅವರ ಔಷಧಿಗೂ ಖರ್ಚು ಮಾಡಬೇಕಾಗಿದೆ. ತಾನು ಕೂಲಿ ಕೆಲಸ ಮಾಡಿಕೊಂಡು ಕಷ್ಟದ ಸ್ಥಿತಿಯಲ್ಲಿ ಬದುಕುತ್ತಿದ್ದು, ಕುಸಿದಿರುವ ಮನೆಯವನ್ನು ಅದೇ ರೀತಿಯಲ್ಲಿ ಸರಿಪಡಿಸಿಕೊಟ್ಟರೆ ಸಾಕು ಎಂದು ವಸಂತ ಹೆಗ್ಡೆ ಅವರು ನಗರಸಭೆಗೆ ಮನವಿ ಮಾಡಿಕೊಂಡಿದ್ದಾರೆ.
Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…

4 hours ago

ಸ್ವಾತಂತ್ರ್ಯಕ್ಕಾಗಿ ಮದುವೆ

ಕುಟುಂಬ ಎಂಬುದು ಸಮಾಜದ ಆಧಾರ ಸ್ಥಂಭ. ಮದುವೆ ಎಂಬುದು ಈ ಸ್ಥಂಭದ ತಳಪಾಯ.…

4 hours ago

ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ

ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…

10 hours ago

ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ

15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

10 hours ago

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…

17 hours ago

ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…

17 hours ago