Advertisement
MIRROR FOCUS

ಭಾರೀ ಮಳೆಗೆ ಕುಸಿದ ಮನೆ | ಸಂಕಷ್ಟದಲ್ಲಿದೆ ಈ ಬಡ ಕುಟುಂಬ |

Share

ಪುತ್ತೂರು ನಗರದ ಹೊರವಲಯದ ಕಬಕ ಗ್ರಾಮದ ಮಂಜಲ್ಪಡ್ಪು ಜನತಾ ಕಾಲೋನಿಯ ನಿವಾಸಿ ವಸಂತ ಹೆಗ್ಡೆ ಅವರ ಮನೆ ವಿಪರೀತ ಮಳೆಯಿಂದಾಗಿ ಕುಸಿದು ಬಿದ್ದಿದೆ. ಈ ಬಡ ಕುಟುಂಬ ಬೀದಿ ಪಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ವಸಂತ ಅವರ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ವಸಂತ ಅವರು ಕೂಲಿ ಕೆಲಸ ಮಾಡಿಕೊಂಡು ಸಂಸಾರದ ನಿರ್ವಹಣೆ ಮಾಡುತ್ತಿದ್ದರು, ಹಂಚು, ಸಿಮೆಂಟು ಶೀಟು ಅಳವಡಿಕೆಯೊಂದಿಗೆ ಸ್ವಲ್ಪಭಾಗ ತಾರಸಿ ಮಾಡಿರುವ ವಸಂತ ಹೆಗ್ಡೆ ಅವರ ಮನೆಯ ಮೇಲ್ಛಾವಣಿ ಸಂಪೂರ್ಣ ಕುಸಿದು ಬಿದ್ದಿದೆ. ಇದೀಗ ಮನೆಯ ಹಿಂಬದಿಯ ಗೋಡೆ ಮತ್ತು ತಾರಸಿ ಭಾಗ ಕುಸಿದಿದೆ. ಪ್ರಸ್ತುತ ಎದುರಾಗಿರುವ ವಿಪತ್ತಿನಿಂದಾಗಿ ವಸಂತ ಅವರು ಕಂಗಾಲಾಗಿದ್ದಾರೆ.
ಪುತ್ತೂರು ನಗರಸಭೆಯವರು ಕುಸಿದು ಬಿದ್ದಿರುವ ಮನೆಯ ಮೇಲ್ಚಾವಣಿಗೆ ಹೊದಿಸಲು ಪ್ಲಾಸ್ಟಿಕ್ ಟರ್ಪಾಲ್ ನೀಡಿದ್ದು, ಅದನ್ನು ಮನೆಗೆ ಹೊದಿಸಿ ಈ ಕುಟುಂಬ ಅಪಾಯದ ಸ್ಥಿತಿಯಲ್ಲಿ ವಾಸ್ತವ್ಯವಿದೆ. ಮನೆಗೆ ಇನ್ನಷ್ಟು ಹಾನಿ ಸಂಭವಿಸುವ ಸಾಧ್ಯತೆ ಇರುವುದರಿಂದ ನೋಟೀಸು ತಲುಪಿದ 2 ದಿನದೊಳಗೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಸೂಚಿಸಲಾಗಿದೆ. ತಪ್ಪಿದಲ್ಲಿ ಮಂದಿನ ದಿನಗಳಲ್ಲಿ ಅನಾಹುತ ಸಂಭವಿಸಿದಲ್ಲಿ ನಿಮ್ಮನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಉಪ್ಪಿನಂಗಡಿ ಹೋಬಳಿಯ ಕಂದಾಯ ನಿರೀಕ್ಷಕರು ವಸಂತ ಅವರಿಗೆ ನೀಡಿರುವ ಸೂಚನಾ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಮನೆ ಸಂಪೂರ್ಣವಾಗಿ ಕುಸಿದು ಬೀಳುವ ಸ್ಥಿತಿಗೆ ತಲುಪಿದೆ. ತಾಯಿ ಅನಾರೋಗ್ಯ ಪೀಡಿತರಾಗಿದ್ದಾರೆ. ಅವರ ಔಷಧಿಗೂ ಖರ್ಚು ಮಾಡಬೇಕಾಗಿದೆ. ತಾನು ಕೂಲಿ ಕೆಲಸ ಮಾಡಿಕೊಂಡು ಕಷ್ಟದ ಸ್ಥಿತಿಯಲ್ಲಿ ಬದುಕುತ್ತಿದ್ದು, ಕುಸಿದಿರುವ ಮನೆಯವನ್ನು ಅದೇ ರೀತಿಯಲ್ಲಿ ಸರಿಪಡಿಸಿಕೊಟ್ಟರೆ ಸಾಕು ಎಂದು ವಸಂತ ಹೆಗ್ಡೆ ಅವರು ನಗರಸಭೆಗೆ ಮನವಿ ಮಾಡಿಕೊಂಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

28 minutes ago

ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು

ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…

47 minutes ago

Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ

ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…

12 hours ago

ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ

ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…

12 hours ago

ವಿದ್ಯಾರ್ಥಿ- ರೈತರ ವಾಕಥಾನ್ | ಪ್ರಕೃತಿ, ಯುವಜನತೆ ಮತ್ತು ಆರ್ಥಿಕತೆ – ಜೂನ್ 14 ರಂದು ಬೆಂಗಳೂರಿನಲ್ಲಿ ವಿಶೇಷ ಕಾರ್ಯಕ್ರಮ

ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಜೂನ್ 14 ರಂದು "ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್ "…

19 hours ago