Advertisement
MIRROR FOCUS

ಭಾರೀ ಮಳೆಗೆ ಕುಸಿದ ಮನೆ | ಸಂಕಷ್ಟದಲ್ಲಿದೆ ಈ ಬಡ ಕುಟುಂಬ |

Share

ಪುತ್ತೂರು ನಗರದ ಹೊರವಲಯದ ಕಬಕ ಗ್ರಾಮದ ಮಂಜಲ್ಪಡ್ಪು ಜನತಾ ಕಾಲೋನಿಯ ನಿವಾಸಿ ವಸಂತ ಹೆಗ್ಡೆ ಅವರ ಮನೆ ವಿಪರೀತ ಮಳೆಯಿಂದಾಗಿ ಕುಸಿದು ಬಿದ್ದಿದೆ. ಈ ಬಡ ಕುಟುಂಬ ಬೀದಿ ಪಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ವಸಂತ ಅವರ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ವಸಂತ ಅವರು ಕೂಲಿ ಕೆಲಸ ಮಾಡಿಕೊಂಡು ಸಂಸಾರದ ನಿರ್ವಹಣೆ ಮಾಡುತ್ತಿದ್ದರು, ಹಂಚು, ಸಿಮೆಂಟು ಶೀಟು ಅಳವಡಿಕೆಯೊಂದಿಗೆ ಸ್ವಲ್ಪಭಾಗ ತಾರಸಿ ಮಾಡಿರುವ ವಸಂತ ಹೆಗ್ಡೆ ಅವರ ಮನೆಯ ಮೇಲ್ಛಾವಣಿ ಸಂಪೂರ್ಣ ಕುಸಿದು ಬಿದ್ದಿದೆ. ಇದೀಗ ಮನೆಯ ಹಿಂಬದಿಯ ಗೋಡೆ ಮತ್ತು ತಾರಸಿ ಭಾಗ ಕುಸಿದಿದೆ. ಪ್ರಸ್ತುತ ಎದುರಾಗಿರುವ ವಿಪತ್ತಿನಿಂದಾಗಿ ವಸಂತ ಅವರು ಕಂಗಾಲಾಗಿದ್ದಾರೆ.
Advertisement
ಪುತ್ತೂರು ನಗರಸಭೆಯವರು ಕುಸಿದು ಬಿದ್ದಿರುವ ಮನೆಯ ಮೇಲ್ಚಾವಣಿಗೆ ಹೊದಿಸಲು ಪ್ಲಾಸ್ಟಿಕ್ ಟರ್ಪಾಲ್ ನೀಡಿದ್ದು, ಅದನ್ನು ಮನೆಗೆ ಹೊದಿಸಿ ಈ ಕುಟುಂಬ ಅಪಾಯದ ಸ್ಥಿತಿಯಲ್ಲಿ ವಾಸ್ತವ್ಯವಿದೆ. ಮನೆಗೆ ಇನ್ನಷ್ಟು ಹಾನಿ ಸಂಭವಿಸುವ ಸಾಧ್ಯತೆ ಇರುವುದರಿಂದ ನೋಟೀಸು ತಲುಪಿದ 2 ದಿನದೊಳಗೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಸೂಚಿಸಲಾಗಿದೆ. ತಪ್ಪಿದಲ್ಲಿ ಮಂದಿನ ದಿನಗಳಲ್ಲಿ ಅನಾಹುತ ಸಂಭವಿಸಿದಲ್ಲಿ ನಿಮ್ಮನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಉಪ್ಪಿನಂಗಡಿ ಹೋಬಳಿಯ ಕಂದಾಯ ನಿರೀಕ್ಷಕರು ವಸಂತ ಅವರಿಗೆ ನೀಡಿರುವ ಸೂಚನಾ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Advertisement
ಮನೆ ಸಂಪೂರ್ಣವಾಗಿ ಕುಸಿದು ಬೀಳುವ ಸ್ಥಿತಿಗೆ ತಲುಪಿದೆ. ತಾಯಿ ಅನಾರೋಗ್ಯ ಪೀಡಿತರಾಗಿದ್ದಾರೆ. ಅವರ ಔಷಧಿಗೂ ಖರ್ಚು ಮಾಡಬೇಕಾಗಿದೆ. ತಾನು ಕೂಲಿ ಕೆಲಸ ಮಾಡಿಕೊಂಡು ಕಷ್ಟದ ಸ್ಥಿತಿಯಲ್ಲಿ ಬದುಕುತ್ತಿದ್ದು, ಕುಸಿದಿರುವ ಮನೆಯವನ್ನು ಅದೇ ರೀತಿಯಲ್ಲಿ ಸರಿಪಡಿಸಿಕೊಟ್ಟರೆ ಸಾಕು ಎಂದು ವಸಂತ ಹೆಗ್ಡೆ ಅವರು ನಗರಸಭೆಗೆ ಮನವಿ ಮಾಡಿಕೊಂಡಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

18 hours ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

18 hours ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

1 day ago

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…

2 days ago