Advertisement
MIRROR FOCUS

ಭಾರೀ ಮಳೆಗೆ ಕುಸಿದ ಮನೆ | ಸಂಕಷ್ಟದಲ್ಲಿದೆ ಈ ಬಡ ಕುಟುಂಬ |

Share

ಪುತ್ತೂರು ನಗರದ ಹೊರವಲಯದ ಕಬಕ ಗ್ರಾಮದ ಮಂಜಲ್ಪಡ್ಪು ಜನತಾ ಕಾಲೋನಿಯ ನಿವಾಸಿ ವಸಂತ ಹೆಗ್ಡೆ ಅವರ ಮನೆ ವಿಪರೀತ ಮಳೆಯಿಂದಾಗಿ ಕುಸಿದು ಬಿದ್ದಿದೆ. ಈ ಬಡ ಕುಟುಂಬ ಬೀದಿ ಪಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ವಸಂತ ಅವರ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ವಸಂತ ಅವರು ಕೂಲಿ ಕೆಲಸ ಮಾಡಿಕೊಂಡು ಸಂಸಾರದ ನಿರ್ವಹಣೆ ಮಾಡುತ್ತಿದ್ದರು, ಹಂಚು, ಸಿಮೆಂಟು ಶೀಟು ಅಳವಡಿಕೆಯೊಂದಿಗೆ ಸ್ವಲ್ಪಭಾಗ ತಾರಸಿ ಮಾಡಿರುವ ವಸಂತ ಹೆಗ್ಡೆ ಅವರ ಮನೆಯ ಮೇಲ್ಛಾವಣಿ ಸಂಪೂರ್ಣ ಕುಸಿದು ಬಿದ್ದಿದೆ. ಇದೀಗ ಮನೆಯ ಹಿಂಬದಿಯ ಗೋಡೆ ಮತ್ತು ತಾರಸಿ ಭಾಗ ಕುಸಿದಿದೆ. ಪ್ರಸ್ತುತ ಎದುರಾಗಿರುವ ವಿಪತ್ತಿನಿಂದಾಗಿ ವಸಂತ ಅವರು ಕಂಗಾಲಾಗಿದ್ದಾರೆ.
ಪುತ್ತೂರು ನಗರಸಭೆಯವರು ಕುಸಿದು ಬಿದ್ದಿರುವ ಮನೆಯ ಮೇಲ್ಚಾವಣಿಗೆ ಹೊದಿಸಲು ಪ್ಲಾಸ್ಟಿಕ್ ಟರ್ಪಾಲ್ ನೀಡಿದ್ದು, ಅದನ್ನು ಮನೆಗೆ ಹೊದಿಸಿ ಈ ಕುಟುಂಬ ಅಪಾಯದ ಸ್ಥಿತಿಯಲ್ಲಿ ವಾಸ್ತವ್ಯವಿದೆ. ಮನೆಗೆ ಇನ್ನಷ್ಟು ಹಾನಿ ಸಂಭವಿಸುವ ಸಾಧ್ಯತೆ ಇರುವುದರಿಂದ ನೋಟೀಸು ತಲುಪಿದ 2 ದಿನದೊಳಗೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಸೂಚಿಸಲಾಗಿದೆ. ತಪ್ಪಿದಲ್ಲಿ ಮಂದಿನ ದಿನಗಳಲ್ಲಿ ಅನಾಹುತ ಸಂಭವಿಸಿದಲ್ಲಿ ನಿಮ್ಮನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಉಪ್ಪಿನಂಗಡಿ ಹೋಬಳಿಯ ಕಂದಾಯ ನಿರೀಕ್ಷಕರು ವಸಂತ ಅವರಿಗೆ ನೀಡಿರುವ ಸೂಚನಾ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಮನೆ ಸಂಪೂರ್ಣವಾಗಿ ಕುಸಿದು ಬೀಳುವ ಸ್ಥಿತಿಗೆ ತಲುಪಿದೆ. ತಾಯಿ ಅನಾರೋಗ್ಯ ಪೀಡಿತರಾಗಿದ್ದಾರೆ. ಅವರ ಔಷಧಿಗೂ ಖರ್ಚು ಮಾಡಬೇಕಾಗಿದೆ. ತಾನು ಕೂಲಿ ಕೆಲಸ ಮಾಡಿಕೊಂಡು ಕಷ್ಟದ ಸ್ಥಿತಿಯಲ್ಲಿ ಬದುಕುತ್ತಿದ್ದು, ಕುಸಿದಿರುವ ಮನೆಯವನ್ನು ಅದೇ ರೀತಿಯಲ್ಲಿ ಸರಿಪಡಿಸಿಕೊಟ್ಟರೆ ಸಾಕು ಎಂದು ವಸಂತ ಹೆಗ್ಡೆ ಅವರು ನಗರಸಭೆಗೆ ಮನವಿ ಮಾಡಿಕೊಂಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

3 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

13 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

13 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

14 hours ago