Advertisement
MIRROR FOCUS

ಭಾರೀ ಮಳೆಗೆ ಕುಸಿದ ಮನೆ | ಸಂಕಷ್ಟದಲ್ಲಿದೆ ಈ ಬಡ ಕುಟುಂಬ |

Share

ಪುತ್ತೂರು ನಗರದ ಹೊರವಲಯದ ಕಬಕ ಗ್ರಾಮದ ಮಂಜಲ್ಪಡ್ಪು ಜನತಾ ಕಾಲೋನಿಯ ನಿವಾಸಿ ವಸಂತ ಹೆಗ್ಡೆ ಅವರ ಮನೆ ವಿಪರೀತ ಮಳೆಯಿಂದಾಗಿ ಕುಸಿದು ಬಿದ್ದಿದೆ. ಈ ಬಡ ಕುಟುಂಬ ಬೀದಿ ಪಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ವಸಂತ ಅವರ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ವಸಂತ ಅವರು ಕೂಲಿ ಕೆಲಸ ಮಾಡಿಕೊಂಡು ಸಂಸಾರದ ನಿರ್ವಹಣೆ ಮಾಡುತ್ತಿದ್ದರು, ಹಂಚು, ಸಿಮೆಂಟು ಶೀಟು ಅಳವಡಿಕೆಯೊಂದಿಗೆ ಸ್ವಲ್ಪಭಾಗ ತಾರಸಿ ಮಾಡಿರುವ ವಸಂತ ಹೆಗ್ಡೆ ಅವರ ಮನೆಯ ಮೇಲ್ಛಾವಣಿ ಸಂಪೂರ್ಣ ಕುಸಿದು ಬಿದ್ದಿದೆ. ಇದೀಗ ಮನೆಯ ಹಿಂಬದಿಯ ಗೋಡೆ ಮತ್ತು ತಾರಸಿ ಭಾಗ ಕುಸಿದಿದೆ. ಪ್ರಸ್ತುತ ಎದುರಾಗಿರುವ ವಿಪತ್ತಿನಿಂದಾಗಿ ವಸಂತ ಅವರು ಕಂಗಾಲಾಗಿದ್ದಾರೆ.
ಪುತ್ತೂರು ನಗರಸಭೆಯವರು ಕುಸಿದು ಬಿದ್ದಿರುವ ಮನೆಯ ಮೇಲ್ಚಾವಣಿಗೆ ಹೊದಿಸಲು ಪ್ಲಾಸ್ಟಿಕ್ ಟರ್ಪಾಲ್ ನೀಡಿದ್ದು, ಅದನ್ನು ಮನೆಗೆ ಹೊದಿಸಿ ಈ ಕುಟುಂಬ ಅಪಾಯದ ಸ್ಥಿತಿಯಲ್ಲಿ ವಾಸ್ತವ್ಯವಿದೆ. ಮನೆಗೆ ಇನ್ನಷ್ಟು ಹಾನಿ ಸಂಭವಿಸುವ ಸಾಧ್ಯತೆ ಇರುವುದರಿಂದ ನೋಟೀಸು ತಲುಪಿದ 2 ದಿನದೊಳಗೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಸೂಚಿಸಲಾಗಿದೆ. ತಪ್ಪಿದಲ್ಲಿ ಮಂದಿನ ದಿನಗಳಲ್ಲಿ ಅನಾಹುತ ಸಂಭವಿಸಿದಲ್ಲಿ ನಿಮ್ಮನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಉಪ್ಪಿನಂಗಡಿ ಹೋಬಳಿಯ ಕಂದಾಯ ನಿರೀಕ್ಷಕರು ವಸಂತ ಅವರಿಗೆ ನೀಡಿರುವ ಸೂಚನಾ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಮನೆ ಸಂಪೂರ್ಣವಾಗಿ ಕುಸಿದು ಬೀಳುವ ಸ್ಥಿತಿಗೆ ತಲುಪಿದೆ. ತಾಯಿ ಅನಾರೋಗ್ಯ ಪೀಡಿತರಾಗಿದ್ದಾರೆ. ಅವರ ಔಷಧಿಗೂ ಖರ್ಚು ಮಾಡಬೇಕಾಗಿದೆ. ತಾನು ಕೂಲಿ ಕೆಲಸ ಮಾಡಿಕೊಂಡು ಕಷ್ಟದ ಸ್ಥಿತಿಯಲ್ಲಿ ಬದುಕುತ್ತಿದ್ದು, ಕುಸಿದಿರುವ ಮನೆಯವನ್ನು ಅದೇ ರೀತಿಯಲ್ಲಿ ಸರಿಪಡಿಸಿಕೊಟ್ಟರೆ ಸಾಕು ಎಂದು ವಸಂತ ಹೆಗ್ಡೆ ಅವರು ನಗರಸಭೆಗೆ ಮನವಿ ಮಾಡಿಕೊಂಡಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

5 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

14 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

22 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

22 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago