ದ ಕ ಜಿಲ್ಲೆಯಲ್ಲಿ ಅತಿವೃಷ್ಟಿ ಹಾನಿ ಅಧ್ಯಯನಕ್ಕಾಗಿ ಕೇಂದ್ರ ಸರ್ಕಾರದ ಅಂತರ್ ಸಚಿವಾಲಯದ ಅಧಿಕಾರಿಗಳ ಅಧ್ಯಯನ ತಂಡವು ಗುರುವಾರ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಹಾನಿಗೀಡಾದ ಕಡಲ ತೀರ, ರಸ್ತೆ, ಸೇತುವೆ, ಮನೆಗಳನ್ನು ಪರಿಶೀಲಿಸಿತು.
ನಂತರ ತಂಡವು ವಿಪರೀತ ಕಡಲ್ಕೊರೆತ ಉಂಟಾಗಿರುವ ಉಳ್ಳಾಲದ ಬಟಪ್ಪಾಡಿಗೆ ತೆರಳಿ ಅಲ್ಲಿನ ವಾಸ್ತವ ಪರಿಸ್ಥಿತಿಯನ್ನು ಅವಲೋಕಿಸಿತು. ರಸ್ತೆ ಹಾನಿ, ಕಡಲ್ಕೊರೆತದಿಂದಾದ ಹಾನಿ ವೀಕ್ಷಿಸಿದ ತಂಡದ ಸದಸ್ಯರು ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರು. ನಂತರ ಹೊಸಬೆಟ್ಟು-ಮೀನಕಳಿಗೆ ತೆರಳಿದ ಅವರು ಕಡಲ್ಕೊರೆತ, ರಸ್ತೆ ಹಾನಿ, ತೀವ್ರ ಮಳೆಯಿಂದಾಗಿ ಮನೆಗಳಿಗಾದ ಹಾನಿ ಸೇರಿದಂತೆ ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಿದರು.
ಜಿಲ್ಲೆಯಲ್ಲಿ ಅಧಿಕ ಮಳೆಯಿಂದ ಉಂಟಾದ ಕಡಲ್ಕೊರೆತದ ಹಾಗೂ ಇತರೆ ಹಾನಿಗಳ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದ ತಂಡವು ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ತಿಳಿಸಿತು.
ತಂಡದ ಮುಖ್ಯಸ್ಥರಾಗಿರುವ ಗೃಹ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶಿಶ್ ಕುಮಾರ್, ಕೇಂದ್ರ ಹಣಕಾಸು ಸಚಿವಾಲಯದ ಉಪ ನಿರ್ದೇಶಕ ಮಹೇಶ್ ಕುಮಾರ್, ಕೇಂದ್ರ ಇಂಧನ ಸಚಿವಾಲಯದ ಸಹಾಯಕ ನಿರ್ದೇಶಕಿ ಭವ್ಯ ಪಾಂಡೆ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಡಾ. ಮನೋಜ್ ರಾಜನ್ ಇದ್ದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸೀತಾ, ತಹಶೀಲ್ದಾರ್ ಪುಟ್ಟರಾಜ್, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣತ ವಿಜಯ್ ಕುಮಾರ್ ಪೂಜಾರ್ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…