Advertisement
ಸುದ್ದಿಗಳು

ಅತಿವೃಷ್ಟಿಯಿಂದ ದ ಕ ಜಿಲ್ಲೆಯಲ್ಲಿ ಹಾನಿ | ಕೇಂದ್ರ ಅಧ್ಯಯನ ತಂಡದಿಂದ ಪರಿಶೀಲನೆ | ಅತಿವೃಷ್ಟಿ ಪರಿಹಾರಕ್ಕೆ 311 ಕೋಟಿ ರೂ.ಗಳ ಪ್ರಸ್ತಾವನೆ |

Share

ದ ಕ ಜಿಲ್ಲೆಯಲ್ಲಿ ಅತಿವೃಷ್ಟಿ ಹಾನಿ ಅಧ್ಯಯನಕ್ಕಾಗಿ ಕೇಂದ್ರ ಸರ್ಕಾರದ ಅಂತರ್ ಸಚಿವಾಲಯದ ಅಧಿಕಾರಿಗಳ ಅಧ್ಯಯನ ತಂಡವು  ಗುರುವಾರ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಹಾನಿಗೀಡಾದ ಕಡಲ ತೀರ, ರಸ್ತೆ, ಸೇತುವೆ, ಮನೆಗಳನ್ನು ಪರಿಶೀಲಿಸಿತು.

ಜಿಲ್ಲೆಯಲ್ಲಿ ಜುಲೈನಿಂದ ಸುರಿದ ತೀವ್ರ ಮಳೆಯಿಂದಾಗಿ ಕೃಷಿ ಹಾಗೂ ತೋಟಗಾರಿಕಾ ಬೆಳಗಳು, ಮೂಲಭೂತ ಸೌಕರ್ಯಗಳು, ಬೆಳೆ, ಮಾನವ ಹಾಗೂ ಜಾನುವಾರುಗಳ ಜೀವ ಹಾನಿ ಬಗ್ಗೆ ಅಧ್ಯಯನ ತಂಡಕ್ಕೆ  ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮಾಹಿತಿ ನೀಡಿದರು. ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಪರಿಹಾರಕ್ಕಾಗಿ ಒಟ್ಟು 311 ಕೋಟಿ ರೂ.ಗಳ ಪರಿಹಾರಕ್ಕೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದೂ ಅವರು ಹೇಳಿದರು.

ನಂತರ ತಂಡವು ವಿಪರೀತ ಕಡಲ್ಕೊರೆತ ಉಂಟಾಗಿರುವ ಉಳ್ಳಾಲದ ಬಟಪ್ಪಾಡಿಗೆ ತೆರಳಿ ಅಲ್ಲಿನ ವಾಸ್ತವ ಪರಿಸ್ಥಿತಿಯನ್ನು ಅವಲೋಕಿಸಿತು. ರಸ್ತೆ ಹಾನಿ, ಕಡಲ್ಕೊರೆತದಿಂದಾದ ಹಾನಿ ವೀಕ್ಷಿಸಿದ ತಂಡದ ಸದಸ್ಯರು ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರು. ನಂತರ ಹೊಸಬೆಟ್ಟು-ಮೀನಕಳಿಗೆ ತೆರಳಿದ ಅವರು ಕಡಲ್ಕೊರೆತ, ರಸ್ತೆ ಹಾನಿ, ತೀವ್ರ ಮಳೆಯಿಂದಾಗಿ ಮನೆಗಳಿಗಾದ ಹಾನಿ ಸೇರಿದಂತೆ ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಿದರು.

ಜಿಲ್ಲೆಯಲ್ಲಿ ಅಧಿಕ ಮಳೆಯಿಂದ ಉಂಟಾದ ಕಡಲ್ಕೊರೆತದ ಹಾಗೂ ಇತರೆ ಹಾನಿಗಳ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದ ತಂಡವು ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ತಿಳಿಸಿತು.

ತಂಡದ ಮುಖ್ಯಸ್ಥರಾಗಿರುವ ಗೃಹ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶಿಶ್ ಕುಮಾರ್, ಕೇಂದ್ರ ಹಣಕಾಸು ಸಚಿವಾಲಯದ ಉಪ ನಿರ್ದೇಶಕ ಮಹೇಶ್ ಕುಮಾರ್, ಕೇಂದ್ರ ಇಂಧನ ಸಚಿವಾಲಯದ ಸಹಾಯಕ ನಿರ್ದೇಶಕಿ ಭವ್ಯ ಪಾಂಡೆ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಡಾ. ಮನೋಜ್ ರಾಜನ್ ಇದ್ದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸೀತಾ, ತಹಶೀಲ್ದಾರ್ ಪುಟ್ಟರಾಜ್, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣತ ವಿಜಯ್ ಕುಮಾರ್ ಪೂಜಾರ್ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

1 hour ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

9 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago