#HeavyRain | ಎಲ್ಲೆಲ್ಲಾ ಹೇಗಿದೆ ಮಳೆ | ಕೇರಳದ 6 ಜಿಲ್ಲೆಗಳಲ್ಲಿ ಆರೆಂಜ್‌ ಎಲರ್ಟ್‌ | ಮಹಾರಾಷ್ಟ್ರ, ಗೋವಾ, ಹಿಮಾಚಲ ಪ್ರದೇಶದಲ್ಲೂ ಮಳೆಯ ಅಬ್ಬರ |

July 6, 2023
10:43 AM
ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೇರಳದಲ್ಲಿ ಸತತ ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ಎಲ್ಲೆಡೆ ಅಪಾರ ಹಾನಿಯಾಗಿದೆ.

ಮುಂಗಾರು ಚುರುಕಾಗಿದೆ. ಕೇರಳ, ಕರ್ನಾಟಕ ಕರಾವಳಿ, ಗೋವಾ, ಮಹಾರಾಷ್ಟ್ರ ಸೇರಿದಂತೆ ಹಿಮಾಚಲ ಪ್ರದೇಶದಲ್ಲಿಯೂ ಭಾರೀ ಮಳೆಯಾಗುತ್ತಿದೆ. ಕೇರಳದಲ್ಲಿ ಕಳೆದ 4 ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. 6 ಜಿಲ್ಲೆಗಳಲ್ಲಿ ಗುರುವಾರವೂ ಆರೆಂಜ್‌ ಎಲರ್ಟ್‌ ಘೋಷಿಸಲಾಗಿದೆ. ಮಹಾರಾಷ್ಟ್ರದ ರಾಯಗಢ ಜಿಲ್ಲೆಗೆ ಇಂದು  ರೆಡ್ ಎಲರ್ಟ್ ಘೋಷಿಸಲಾಗಿದೆ.ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣದಲ್ಲಿ ಮುಂಗಾರು ಮಳೆಯಾಗುತ್ತಿದೆ. ದಕ್ಷಿಣ ಮತ್ತು ವಾಯುವ್ಯ ಭಾರತದಲ್ಲಿ ಭಾರೀ ಮಳೆಯಾಗುತ್ತಿದ್ದು, ಮಧ್ಯ ಮತ್ತು ಪೂರ್ವ ಭಾರತದಲ್ಲಿ ವ್ಯಾಪಕ ಮಳೆಯಾಗುತ್ತಿದೆ.

Advertisement
Advertisement
Advertisement
Advertisement

ಮಹಾರಾಷ್ಟ್ರದ ರಾಯಗಢ ಜಿಲ್ಲೆಗೆ ಇಂದು  ರೆಡ್ ಎಲರ್ಟ್ ಘೋಷಿಸಲಾಗಿದ್ದು, ಅಧಿಕ ಮಳೆಯಾಗುವ ಎಚ್ಚರಿಕೆಯನ್ನು ಅಧಿಕಾರಿಗಳು ನೀಡಿದ್ದಾರೆ. ಗೋವಾದಲ್ಲಿ, ಇಂದು ಭಾರೀ ಮುಂಗಾರು ಮಳೆಯ ಮುನ್ಸೂಚನೆ ನೀಡಿದೆ ಮತ್ತು ರಾಜ್ಯ ಶಿಕ್ಷಣ ಇಲಾಖೆಯು ಶಾಲೆಗಳಿಗೆ ಒಂದು ದಿನದ ರಜೆಯನ್ನು ಘೋಷಿಸಿದೆ. ಮುಂಬೈ ನಗರಕ್ಕೆ ಆರೆಂಜ್‌ ಹಾಗೂ ಎಲ್ಲೋ ಎಲರ್ಟ್‌ ನೀಡಲಾಗಿದೆ. ಇಂದಿನಿಂದ ಭಾರೀ ಮಳೆಯ ಮುನ್ಸೂಚನೆ ಇದೆ.

Advertisement

ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಬುಧವಾರ ಬೆಳಗ್ಗೆ ಹಠಾತ್ ಪ್ರವಾಹ ಸಂಭವಿಸಿದ್ದು, ಹರೋಲಿ ಪ್ರದೇಶದ ಹಳ್ಳಿಯೊಂದರಲ್ಲಿ ಸುಮಾರು 10 ಮನೆಗಳಿಗೆ ಹಾನಿಯಾಗಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ.

ಕೇರಳದಲ್ಲಿ ಸತತ 4 ದಿನಗಳಿಂದ ಮಳೆಯಾಗುತ್ತಿದೆ. ಭಾರೀ ಮಳೆಗೆ ಅಪಾರ ಹಾನಿಯೂ ಸಂಭವಿಸಿದೆ. ಒಬ್ಬ ವ್ಯಕ್ತಿ ಮೃತಪಟ್ಟರೆ, ಮೂವರು ನಾಪತ್ತೆಯಾಗಿದ್ದಾರೆ. ಕೇರಳ ರಾಜ್ಯಾದ್ಯಂತ 264 ಕುಟುಂಬಗಳ 904 ಜನರನ್ನು 50  ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಮಳೆಯಿಂದ 18 ಮನೆಗಳು ಸಂಪೂರ್ಣ ಹಾನಿಯಾಗಿದ್ದರೆ, 405 ಮನೆಗಳು ಭಾಗಶಃ ಹಾನಿಗೀಡಾಗಿವೆ. ಕಣ್ಣೂರು ನಗರದ 50 ವರ್ಷದ ಟಿ ಬಶೀರ್ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಬಿಜೀಶ್ ಪುಲಿಯುಲ್ಲಪರಂಬತ್ತು ಕೋಝಿಕ್ಕೋಡ್‌ನ ಒರ್ಕತ್ತೇರಿಯಲ್ಲಿ ಸೇತುವೆಯಿಂದ ಕಾಲುವೆಗೆ ಬಿದ್ದು ನಾಪತ್ತೆಯಾಗಿದ್ದಾರೆ. ಮತ್ತೊಂದು ಘಟನೆಯಲ್ಲಿ, ಮಲಪ್ಪುರಂನ ನಿಲಂಬೂರ್‌ನಲ್ಲಿ ಒಂದು ಕುಟುಂಬದ ಐವರು ಸದಸ್ಯರು – ಒಬ್ಬ ಮಹಿಳೆ, ಅವಳ ಇಬ್ಬರು ಹೆಣ್ಣುಮಕ್ಕಳು, ಮಗ ಮತ್ತು ಅವಳ ತಾಯಿ – ಕೊಚ್ಚಿಹೋಗಿದ್ದಾರೆ. ಅವರಲ್ಲಿ ಮೂವರು ಬದುಕುಳಿದಿದ್ದು, ಇನ್ನಿಬ್ಬರು – ಸುಶೀಲ, 60 ಮತ್ತು ಅವರ ಮೊಮ್ಮಗಳು ಅನುಶ್ರೀ, 12 – ಇನ್ನೂ ಪತ್ತೆಯಾಗಿಲ್ಲ.

Advertisement

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅರಣ್ಯದಿಂದ ಕೂಡಿದ ಗ್ರಾಮೀಣ ಭಾಗಕ್ಕೂ ನೀರು…! | ಕರಾವಳಿ ಜಿಲ್ಲೆಯ ಈಗಿನ ದೊಡ್ಡ ಯೋಜನೆ ಇದು | ಯಾಕೆ ಎಲ್ಲರೂ ಮೌನವಾಗಿದ್ದಾರೆ..? | ಈ ಕೊಳವೆಯಲ್ಲಿ ಹರಿಯುವುದು ನೀರೋ.. ಹಣವೋ..?
February 1, 2025
8:07 AM
by: ಮಹೇಶ್ ಪುಚ್ಚಪ್ಪಾಡಿ
ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ
January 31, 2025
10:23 PM
by: The Rural Mirror ಸುದ್ದಿಜಾಲ
ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ
January 31, 2025
10:11 PM
by: The Rural Mirror ಸುದ್ದಿಜಾಲ
ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ
January 31, 2025
10:08 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror