#HeavyRain | ಎಲ್ಲೆಲ್ಲಾ ಹೇಗಿದೆ ಮಳೆ | ಕೇರಳದ 6 ಜಿಲ್ಲೆಗಳಲ್ಲಿ ಆರೆಂಜ್‌ ಎಲರ್ಟ್‌ | ಮಹಾರಾಷ್ಟ್ರ, ಗೋವಾ, ಹಿಮಾಚಲ ಪ್ರದೇಶದಲ್ಲೂ ಮಳೆಯ ಅಬ್ಬರ |

July 6, 2023
10:43 AM
ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೇರಳದಲ್ಲಿ ಸತತ ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ಎಲ್ಲೆಡೆ ಅಪಾರ ಹಾನಿಯಾಗಿದೆ.

ಮುಂಗಾರು ಚುರುಕಾಗಿದೆ. ಕೇರಳ, ಕರ್ನಾಟಕ ಕರಾವಳಿ, ಗೋವಾ, ಮಹಾರಾಷ್ಟ್ರ ಸೇರಿದಂತೆ ಹಿಮಾಚಲ ಪ್ರದೇಶದಲ್ಲಿಯೂ ಭಾರೀ ಮಳೆಯಾಗುತ್ತಿದೆ. ಕೇರಳದಲ್ಲಿ ಕಳೆದ 4 ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. 6 ಜಿಲ್ಲೆಗಳಲ್ಲಿ ಗುರುವಾರವೂ ಆರೆಂಜ್‌ ಎಲರ್ಟ್‌ ಘೋಷಿಸಲಾಗಿದೆ. ಮಹಾರಾಷ್ಟ್ರದ ರಾಯಗಢ ಜಿಲ್ಲೆಗೆ ಇಂದು  ರೆಡ್ ಎಲರ್ಟ್ ಘೋಷಿಸಲಾಗಿದೆ.ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣದಲ್ಲಿ ಮುಂಗಾರು ಮಳೆಯಾಗುತ್ತಿದೆ. ದಕ್ಷಿಣ ಮತ್ತು ವಾಯುವ್ಯ ಭಾರತದಲ್ಲಿ ಭಾರೀ ಮಳೆಯಾಗುತ್ತಿದ್ದು, ಮಧ್ಯ ಮತ್ತು ಪೂರ್ವ ಭಾರತದಲ್ಲಿ ವ್ಯಾಪಕ ಮಳೆಯಾಗುತ್ತಿದೆ.

ಮಹಾರಾಷ್ಟ್ರದ ರಾಯಗಢ ಜಿಲ್ಲೆಗೆ ಇಂದು  ರೆಡ್ ಎಲರ್ಟ್ ಘೋಷಿಸಲಾಗಿದ್ದು, ಅಧಿಕ ಮಳೆಯಾಗುವ ಎಚ್ಚರಿಕೆಯನ್ನು ಅಧಿಕಾರಿಗಳು ನೀಡಿದ್ದಾರೆ. ಗೋವಾದಲ್ಲಿ, ಇಂದು ಭಾರೀ ಮುಂಗಾರು ಮಳೆಯ ಮುನ್ಸೂಚನೆ ನೀಡಿದೆ ಮತ್ತು ರಾಜ್ಯ ಶಿಕ್ಷಣ ಇಲಾಖೆಯು ಶಾಲೆಗಳಿಗೆ ಒಂದು ದಿನದ ರಜೆಯನ್ನು ಘೋಷಿಸಿದೆ. ಮುಂಬೈ ನಗರಕ್ಕೆ ಆರೆಂಜ್‌ ಹಾಗೂ ಎಲ್ಲೋ ಎಲರ್ಟ್‌ ನೀಡಲಾಗಿದೆ. ಇಂದಿನಿಂದ ಭಾರೀ ಮಳೆಯ ಮುನ್ಸೂಚನೆ ಇದೆ.

ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಬುಧವಾರ ಬೆಳಗ್ಗೆ ಹಠಾತ್ ಪ್ರವಾಹ ಸಂಭವಿಸಿದ್ದು, ಹರೋಲಿ ಪ್ರದೇಶದ ಹಳ್ಳಿಯೊಂದರಲ್ಲಿ ಸುಮಾರು 10 ಮನೆಗಳಿಗೆ ಹಾನಿಯಾಗಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ.

ಕೇರಳದಲ್ಲಿ ಸತತ 4 ದಿನಗಳಿಂದ ಮಳೆಯಾಗುತ್ತಿದೆ. ಭಾರೀ ಮಳೆಗೆ ಅಪಾರ ಹಾನಿಯೂ ಸಂಭವಿಸಿದೆ. ಒಬ್ಬ ವ್ಯಕ್ತಿ ಮೃತಪಟ್ಟರೆ, ಮೂವರು ನಾಪತ್ತೆಯಾಗಿದ್ದಾರೆ. ಕೇರಳ ರಾಜ್ಯಾದ್ಯಂತ 264 ಕುಟುಂಬಗಳ 904 ಜನರನ್ನು 50  ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಮಳೆಯಿಂದ 18 ಮನೆಗಳು ಸಂಪೂರ್ಣ ಹಾನಿಯಾಗಿದ್ದರೆ, 405 ಮನೆಗಳು ಭಾಗಶಃ ಹಾನಿಗೀಡಾಗಿವೆ. ಕಣ್ಣೂರು ನಗರದ 50 ವರ್ಷದ ಟಿ ಬಶೀರ್ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಬಿಜೀಶ್ ಪುಲಿಯುಲ್ಲಪರಂಬತ್ತು ಕೋಝಿಕ್ಕೋಡ್‌ನ ಒರ್ಕತ್ತೇರಿಯಲ್ಲಿ ಸೇತುವೆಯಿಂದ ಕಾಲುವೆಗೆ ಬಿದ್ದು ನಾಪತ್ತೆಯಾಗಿದ್ದಾರೆ. ಮತ್ತೊಂದು ಘಟನೆಯಲ್ಲಿ, ಮಲಪ್ಪುರಂನ ನಿಲಂಬೂರ್‌ನಲ್ಲಿ ಒಂದು ಕುಟುಂಬದ ಐವರು ಸದಸ್ಯರು – ಒಬ್ಬ ಮಹಿಳೆ, ಅವಳ ಇಬ್ಬರು ಹೆಣ್ಣುಮಕ್ಕಳು, ಮಗ ಮತ್ತು ಅವಳ ತಾಯಿ – ಕೊಚ್ಚಿಹೋಗಿದ್ದಾರೆ. ಅವರಲ್ಲಿ ಮೂವರು ಬದುಕುಳಿದಿದ್ದು, ಇನ್ನಿಬ್ಬರು – ಸುಶೀಲ, 60 ಮತ್ತು ಅವರ ಮೊಮ್ಮಗಳು ಅನುಶ್ರೀ, 12 – ಇನ್ನೂ ಪತ್ತೆಯಾಗಿಲ್ಲ.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror