Advertisement
MIRROR FOCUS

#HeavyRain | ಎಲ್ಲೆಲ್ಲಾ ಹೇಗಿದೆ ಮಳೆ | ಕೇರಳದ 6 ಜಿಲ್ಲೆಗಳಲ್ಲಿ ಆರೆಂಜ್‌ ಎಲರ್ಟ್‌ | ಮಹಾರಾಷ್ಟ್ರ, ಗೋವಾ, ಹಿಮಾಚಲ ಪ್ರದೇಶದಲ್ಲೂ ಮಳೆಯ ಅಬ್ಬರ |

Share

ಮುಂಗಾರು ಚುರುಕಾಗಿದೆ. ಕೇರಳ, ಕರ್ನಾಟಕ ಕರಾವಳಿ, ಗೋವಾ, ಮಹಾರಾಷ್ಟ್ರ ಸೇರಿದಂತೆ ಹಿಮಾಚಲ ಪ್ರದೇಶದಲ್ಲಿಯೂ ಭಾರೀ ಮಳೆಯಾಗುತ್ತಿದೆ. ಕೇರಳದಲ್ಲಿ ಕಳೆದ 4 ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. 6 ಜಿಲ್ಲೆಗಳಲ್ಲಿ ಗುರುವಾರವೂ ಆರೆಂಜ್‌ ಎಲರ್ಟ್‌ ಘೋಷಿಸಲಾಗಿದೆ. ಮಹಾರಾಷ್ಟ್ರದ ರಾಯಗಢ ಜಿಲ್ಲೆಗೆ ಇಂದು  ರೆಡ್ ಎಲರ್ಟ್ ಘೋಷಿಸಲಾಗಿದೆ.ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣದಲ್ಲಿ ಮುಂಗಾರು ಮಳೆಯಾಗುತ್ತಿದೆ. ದಕ್ಷಿಣ ಮತ್ತು ವಾಯುವ್ಯ ಭಾರತದಲ್ಲಿ ಭಾರೀ ಮಳೆಯಾಗುತ್ತಿದ್ದು, ಮಧ್ಯ ಮತ್ತು ಪೂರ್ವ ಭಾರತದಲ್ಲಿ ವ್ಯಾಪಕ ಮಳೆಯಾಗುತ್ತಿದೆ.

ಮಹಾರಾಷ್ಟ್ರದ ರಾಯಗಢ ಜಿಲ್ಲೆಗೆ ಇಂದು  ರೆಡ್ ಎಲರ್ಟ್ ಘೋಷಿಸಲಾಗಿದ್ದು, ಅಧಿಕ ಮಳೆಯಾಗುವ ಎಚ್ಚರಿಕೆಯನ್ನು ಅಧಿಕಾರಿಗಳು ನೀಡಿದ್ದಾರೆ. ಗೋವಾದಲ್ಲಿ, ಇಂದು ಭಾರೀ ಮುಂಗಾರು ಮಳೆಯ ಮುನ್ಸೂಚನೆ ನೀಡಿದೆ ಮತ್ತು ರಾಜ್ಯ ಶಿಕ್ಷಣ ಇಲಾಖೆಯು ಶಾಲೆಗಳಿಗೆ ಒಂದು ದಿನದ ರಜೆಯನ್ನು ಘೋಷಿಸಿದೆ. ಮುಂಬೈ ನಗರಕ್ಕೆ ಆರೆಂಜ್‌ ಹಾಗೂ ಎಲ್ಲೋ ಎಲರ್ಟ್‌ ನೀಡಲಾಗಿದೆ. ಇಂದಿನಿಂದ ಭಾರೀ ಮಳೆಯ ಮುನ್ಸೂಚನೆ ಇದೆ.

ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಬುಧವಾರ ಬೆಳಗ್ಗೆ ಹಠಾತ್ ಪ್ರವಾಹ ಸಂಭವಿಸಿದ್ದು, ಹರೋಲಿ ಪ್ರದೇಶದ ಹಳ್ಳಿಯೊಂದರಲ್ಲಿ ಸುಮಾರು 10 ಮನೆಗಳಿಗೆ ಹಾನಿಯಾಗಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ.

ಕೇರಳದಲ್ಲಿ ಸತತ 4 ದಿನಗಳಿಂದ ಮಳೆಯಾಗುತ್ತಿದೆ. ಭಾರೀ ಮಳೆಗೆ ಅಪಾರ ಹಾನಿಯೂ ಸಂಭವಿಸಿದೆ. ಒಬ್ಬ ವ್ಯಕ್ತಿ ಮೃತಪಟ್ಟರೆ, ಮೂವರು ನಾಪತ್ತೆಯಾಗಿದ್ದಾರೆ. ಕೇರಳ ರಾಜ್ಯಾದ್ಯಂತ 264 ಕುಟುಂಬಗಳ 904 ಜನರನ್ನು 50  ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಮಳೆಯಿಂದ 18 ಮನೆಗಳು ಸಂಪೂರ್ಣ ಹಾನಿಯಾಗಿದ್ದರೆ, 405 ಮನೆಗಳು ಭಾಗಶಃ ಹಾನಿಗೀಡಾಗಿವೆ. ಕಣ್ಣೂರು ನಗರದ 50 ವರ್ಷದ ಟಿ ಬಶೀರ್ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಬಿಜೀಶ್ ಪುಲಿಯುಲ್ಲಪರಂಬತ್ತು ಕೋಝಿಕ್ಕೋಡ್‌ನ ಒರ್ಕತ್ತೇರಿಯಲ್ಲಿ ಸೇತುವೆಯಿಂದ ಕಾಲುವೆಗೆ ಬಿದ್ದು ನಾಪತ್ತೆಯಾಗಿದ್ದಾರೆ. ಮತ್ತೊಂದು ಘಟನೆಯಲ್ಲಿ, ಮಲಪ್ಪುರಂನ ನಿಲಂಬೂರ್‌ನಲ್ಲಿ ಒಂದು ಕುಟುಂಬದ ಐವರು ಸದಸ್ಯರು – ಒಬ್ಬ ಮಹಿಳೆ, ಅವಳ ಇಬ್ಬರು ಹೆಣ್ಣುಮಕ್ಕಳು, ಮಗ ಮತ್ತು ಅವಳ ತಾಯಿ – ಕೊಚ್ಚಿಹೋಗಿದ್ದಾರೆ. ಅವರಲ್ಲಿ ಮೂವರು ಬದುಕುಳಿದಿದ್ದು, ಇನ್ನಿಬ್ಬರು – ಸುಶೀಲ, 60 ಮತ್ತು ಅವರ ಮೊಮ್ಮಗಳು ಅನುಶ್ರೀ, 12 – ಇನ್ನೂ ಪತ್ತೆಯಾಗಿಲ್ಲ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

6 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

7 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

7 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

17 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

17 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

18 hours ago