Advertisement
MIRROR FOCUS

#HeavyRain | ಎಲ್ಲೆಲ್ಲಾ ಹೇಗಿದೆ ಮಳೆ | ಕೇರಳದ 6 ಜಿಲ್ಲೆಗಳಲ್ಲಿ ಆರೆಂಜ್‌ ಎಲರ್ಟ್‌ | ಮಹಾರಾಷ್ಟ್ರ, ಗೋವಾ, ಹಿಮಾಚಲ ಪ್ರದೇಶದಲ್ಲೂ ಮಳೆಯ ಅಬ್ಬರ |

Share

ಮುಂಗಾರು ಚುರುಕಾಗಿದೆ. ಕೇರಳ, ಕರ್ನಾಟಕ ಕರಾವಳಿ, ಗೋವಾ, ಮಹಾರಾಷ್ಟ್ರ ಸೇರಿದಂತೆ ಹಿಮಾಚಲ ಪ್ರದೇಶದಲ್ಲಿಯೂ ಭಾರೀ ಮಳೆಯಾಗುತ್ತಿದೆ. ಕೇರಳದಲ್ಲಿ ಕಳೆದ 4 ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. 6 ಜಿಲ್ಲೆಗಳಲ್ಲಿ ಗುರುವಾರವೂ ಆರೆಂಜ್‌ ಎಲರ್ಟ್‌ ಘೋಷಿಸಲಾಗಿದೆ. ಮಹಾರಾಷ್ಟ್ರದ ರಾಯಗಢ ಜಿಲ್ಲೆಗೆ ಇಂದು  ರೆಡ್ ಎಲರ್ಟ್ ಘೋಷಿಸಲಾಗಿದೆ.ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣದಲ್ಲಿ ಮುಂಗಾರು ಮಳೆಯಾಗುತ್ತಿದೆ. ದಕ್ಷಿಣ ಮತ್ತು ವಾಯುವ್ಯ ಭಾರತದಲ್ಲಿ ಭಾರೀ ಮಳೆಯಾಗುತ್ತಿದ್ದು, ಮಧ್ಯ ಮತ್ತು ಪೂರ್ವ ಭಾರತದಲ್ಲಿ ವ್ಯಾಪಕ ಮಳೆಯಾಗುತ್ತಿದೆ.

Advertisement
Advertisement

ಮಹಾರಾಷ್ಟ್ರದ ರಾಯಗಢ ಜಿಲ್ಲೆಗೆ ಇಂದು  ರೆಡ್ ಎಲರ್ಟ್ ಘೋಷಿಸಲಾಗಿದ್ದು, ಅಧಿಕ ಮಳೆಯಾಗುವ ಎಚ್ಚರಿಕೆಯನ್ನು ಅಧಿಕಾರಿಗಳು ನೀಡಿದ್ದಾರೆ. ಗೋವಾದಲ್ಲಿ, ಇಂದು ಭಾರೀ ಮುಂಗಾರು ಮಳೆಯ ಮುನ್ಸೂಚನೆ ನೀಡಿದೆ ಮತ್ತು ರಾಜ್ಯ ಶಿಕ್ಷಣ ಇಲಾಖೆಯು ಶಾಲೆಗಳಿಗೆ ಒಂದು ದಿನದ ರಜೆಯನ್ನು ಘೋಷಿಸಿದೆ. ಮುಂಬೈ ನಗರಕ್ಕೆ ಆರೆಂಜ್‌ ಹಾಗೂ ಎಲ್ಲೋ ಎಲರ್ಟ್‌ ನೀಡಲಾಗಿದೆ. ಇಂದಿನಿಂದ ಭಾರೀ ಮಳೆಯ ಮುನ್ಸೂಚನೆ ಇದೆ.

Advertisement

ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಬುಧವಾರ ಬೆಳಗ್ಗೆ ಹಠಾತ್ ಪ್ರವಾಹ ಸಂಭವಿಸಿದ್ದು, ಹರೋಲಿ ಪ್ರದೇಶದ ಹಳ್ಳಿಯೊಂದರಲ್ಲಿ ಸುಮಾರು 10 ಮನೆಗಳಿಗೆ ಹಾನಿಯಾಗಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ.

ಕೇರಳದಲ್ಲಿ ಸತತ 4 ದಿನಗಳಿಂದ ಮಳೆಯಾಗುತ್ತಿದೆ. ಭಾರೀ ಮಳೆಗೆ ಅಪಾರ ಹಾನಿಯೂ ಸಂಭವಿಸಿದೆ. ಒಬ್ಬ ವ್ಯಕ್ತಿ ಮೃತಪಟ್ಟರೆ, ಮೂವರು ನಾಪತ್ತೆಯಾಗಿದ್ದಾರೆ. ಕೇರಳ ರಾಜ್ಯಾದ್ಯಂತ 264 ಕುಟುಂಬಗಳ 904 ಜನರನ್ನು 50  ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಮಳೆಯಿಂದ 18 ಮನೆಗಳು ಸಂಪೂರ್ಣ ಹಾನಿಯಾಗಿದ್ದರೆ, 405 ಮನೆಗಳು ಭಾಗಶಃ ಹಾನಿಗೀಡಾಗಿವೆ. ಕಣ್ಣೂರು ನಗರದ 50 ವರ್ಷದ ಟಿ ಬಶೀರ್ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಬಿಜೀಶ್ ಪುಲಿಯುಲ್ಲಪರಂಬತ್ತು ಕೋಝಿಕ್ಕೋಡ್‌ನ ಒರ್ಕತ್ತೇರಿಯಲ್ಲಿ ಸೇತುವೆಯಿಂದ ಕಾಲುವೆಗೆ ಬಿದ್ದು ನಾಪತ್ತೆಯಾಗಿದ್ದಾರೆ. ಮತ್ತೊಂದು ಘಟನೆಯಲ್ಲಿ, ಮಲಪ್ಪುರಂನ ನಿಲಂಬೂರ್‌ನಲ್ಲಿ ಒಂದು ಕುಟುಂಬದ ಐವರು ಸದಸ್ಯರು – ಒಬ್ಬ ಮಹಿಳೆ, ಅವಳ ಇಬ್ಬರು ಹೆಣ್ಣುಮಕ್ಕಳು, ಮಗ ಮತ್ತು ಅವಳ ತಾಯಿ – ಕೊಚ್ಚಿಹೋಗಿದ್ದಾರೆ. ಅವರಲ್ಲಿ ಮೂವರು ಬದುಕುಳಿದಿದ್ದು, ಇನ್ನಿಬ್ಬರು – ಸುಶೀಲ, 60 ಮತ್ತು ಅವರ ಮೊಮ್ಮಗಳು ಅನುಶ್ರೀ, 12 – ಇನ್ನೂ ಪತ್ತೆಯಾಗಿಲ್ಲ.

Advertisement

 

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಹಸ್ಯ ಕಥೆಗಳನ್ನು ಹೇಳುವ ಭೀಮ್’ಕುಂಡ್ : ಭೀಮ ನಿರ್ಮಿಸಿದ ಈ ಕೆರೆಯ ವಿಶೇಷತೆ ಏನು ಗೊತ್ತಾ..? ಇದು ಬರೀ ಬಾವಿಯಲ್ಲ…

ಭೀಮ್'ಕುಂಡ್..(Bheem Kund) ಈ ಕೆರೆಯನ್ನು(Lake) ನಿರ್ಮಿಸಿದವನು ಭೀಮನಂತೆ(Bheema)... ಇದರ ಆಳ(Depth) ಎಷ್ಟಿದೆಯೆಂದು ಯಾರಿಗೂ…

2 mins ago

ಭಾರತದಲ್ಲಿ ಕೃಷಿ ಅರಣ್ಯ : ಆದ್ಯತೆ ಮತ್ತು ಪರಿಸರಕ್ಕಾಗುವ ಲಾಭ

ಕೃಷಿ ಅರಣ್ಯಶಾಸ್ತ್ರವು(Agroforestry) ಸಾಂಪ್ರದಾಯಿಕ(Cultural) ಮತ್ತು ಆಧುನಿಕ ಭೂ-ಬಳಕೆಯ(Modern land-use) ವ್ಯವಸ್ಥೆಗಳನ್ನು ವಿವರಿಸುತ್ತದೆ, ಅಲ್ಲಿ ಮರದ…

17 mins ago

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಒಂದೆಲಗ : ಕೈ ತೋಟಗಳಲ್ಲಿ ಸಿಗುವ ಸುಲಭೌಷಧಿ

ಒಂದೆಲಗ(Brahmi) ಗದ್ದೆ, ತೋಟಗಳಲ್ಲಿ ಕಂಡುಬರುವ, ಬಳ್ಳಿಯಂತೆ ನೆಲದಲ್ಲಿ ಹಬ್ಬಿ ಬೆಳೆಯುವ ಸಸ್ಯ(Plant). ಅದು…

36 mins ago

ಕರಾವಳಿ ಭಾಗದಲ್ಲಿ ಭಾರಿ ಮಳೆ : ಮಂಗಳೂರಿನ ಸಮುದ್ರ ತೀರದಲ್ಲಿ ಹೈಅಲರ್ಟ್: ಉಡುಪಿಯಲ್ಲಿ ಸಮುದ್ರ ಪ್ರಕ್ಷುಬ್ದ

ಕಳೆದ ವರ್ಷ ಮುಂಗಾರು ಮಳೆ(Mansoon Rain) ಕೊಟ್ಟ ಹಿನ್ನೆಲೆ, ಈ ಬಾರಿ ರಾಜ್ಯದ್ಯಂತ…

47 mins ago

ರಬ್ಬರ್‌, ಟಯರ್‌ ಆಮದಿಗೆ ಅನುಮತಿ ನೀಡಬಾರದು | ರಬ್ಬರ್‌ ಉದ್ಯಮ, ರಬ್ಬರ್ ಬೆಳೆಗಾರರನ್ನು ಬೆಂಬಲಿಸಬಹುದಾದ ಕ್ರಮಗಳು |

ರಬ್ಬರ್‌ ಆಮದು ತಡೆಯಾದರೆ ಟಯರ್‌ ಉದ್ಯಮ ಹಾಗೂ ರಬ್ಬರ್‌ ಬೆಳೆಗಾರರ ರಕ್ಷಣೆ ಸಾಧ್ಯವಿದೆ…

3 hours ago