Advertisement
MIRROR FOCUS

#HeavyRain | ಎಲ್ಲೆಲ್ಲಾ ಹೇಗಿದೆ ಮಳೆ | ಕೇರಳದ 6 ಜಿಲ್ಲೆಗಳಲ್ಲಿ ಆರೆಂಜ್‌ ಎಲರ್ಟ್‌ | ಮಹಾರಾಷ್ಟ್ರ, ಗೋವಾ, ಹಿಮಾಚಲ ಪ್ರದೇಶದಲ್ಲೂ ಮಳೆಯ ಅಬ್ಬರ |

Share

ಮುಂಗಾರು ಚುರುಕಾಗಿದೆ. ಕೇರಳ, ಕರ್ನಾಟಕ ಕರಾವಳಿ, ಗೋವಾ, ಮಹಾರಾಷ್ಟ್ರ ಸೇರಿದಂತೆ ಹಿಮಾಚಲ ಪ್ರದೇಶದಲ್ಲಿಯೂ ಭಾರೀ ಮಳೆಯಾಗುತ್ತಿದೆ. ಕೇರಳದಲ್ಲಿ ಕಳೆದ 4 ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. 6 ಜಿಲ್ಲೆಗಳಲ್ಲಿ ಗುರುವಾರವೂ ಆರೆಂಜ್‌ ಎಲರ್ಟ್‌ ಘೋಷಿಸಲಾಗಿದೆ. ಮಹಾರಾಷ್ಟ್ರದ ರಾಯಗಢ ಜಿಲ್ಲೆಗೆ ಇಂದು  ರೆಡ್ ಎಲರ್ಟ್ ಘೋಷಿಸಲಾಗಿದೆ.ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣದಲ್ಲಿ ಮುಂಗಾರು ಮಳೆಯಾಗುತ್ತಿದೆ. ದಕ್ಷಿಣ ಮತ್ತು ವಾಯುವ್ಯ ಭಾರತದಲ್ಲಿ ಭಾರೀ ಮಳೆಯಾಗುತ್ತಿದ್ದು, ಮಧ್ಯ ಮತ್ತು ಪೂರ್ವ ಭಾರತದಲ್ಲಿ ವ್ಯಾಪಕ ಮಳೆಯಾಗುತ್ತಿದೆ.

ಮಹಾರಾಷ್ಟ್ರದ ರಾಯಗಢ ಜಿಲ್ಲೆಗೆ ಇಂದು  ರೆಡ್ ಎಲರ್ಟ್ ಘೋಷಿಸಲಾಗಿದ್ದು, ಅಧಿಕ ಮಳೆಯಾಗುವ ಎಚ್ಚರಿಕೆಯನ್ನು ಅಧಿಕಾರಿಗಳು ನೀಡಿದ್ದಾರೆ. ಗೋವಾದಲ್ಲಿ, ಇಂದು ಭಾರೀ ಮುಂಗಾರು ಮಳೆಯ ಮುನ್ಸೂಚನೆ ನೀಡಿದೆ ಮತ್ತು ರಾಜ್ಯ ಶಿಕ್ಷಣ ಇಲಾಖೆಯು ಶಾಲೆಗಳಿಗೆ ಒಂದು ದಿನದ ರಜೆಯನ್ನು ಘೋಷಿಸಿದೆ. ಮುಂಬೈ ನಗರಕ್ಕೆ ಆರೆಂಜ್‌ ಹಾಗೂ ಎಲ್ಲೋ ಎಲರ್ಟ್‌ ನೀಡಲಾಗಿದೆ. ಇಂದಿನಿಂದ ಭಾರೀ ಮಳೆಯ ಮುನ್ಸೂಚನೆ ಇದೆ.

ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಬುಧವಾರ ಬೆಳಗ್ಗೆ ಹಠಾತ್ ಪ್ರವಾಹ ಸಂಭವಿಸಿದ್ದು, ಹರೋಲಿ ಪ್ರದೇಶದ ಹಳ್ಳಿಯೊಂದರಲ್ಲಿ ಸುಮಾರು 10 ಮನೆಗಳಿಗೆ ಹಾನಿಯಾಗಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ.

ಕೇರಳದಲ್ಲಿ ಸತತ 4 ದಿನಗಳಿಂದ ಮಳೆಯಾಗುತ್ತಿದೆ. ಭಾರೀ ಮಳೆಗೆ ಅಪಾರ ಹಾನಿಯೂ ಸಂಭವಿಸಿದೆ. ಒಬ್ಬ ವ್ಯಕ್ತಿ ಮೃತಪಟ್ಟರೆ, ಮೂವರು ನಾಪತ್ತೆಯಾಗಿದ್ದಾರೆ. ಕೇರಳ ರಾಜ್ಯಾದ್ಯಂತ 264 ಕುಟುಂಬಗಳ 904 ಜನರನ್ನು 50  ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಮಳೆಯಿಂದ 18 ಮನೆಗಳು ಸಂಪೂರ್ಣ ಹಾನಿಯಾಗಿದ್ದರೆ, 405 ಮನೆಗಳು ಭಾಗಶಃ ಹಾನಿಗೀಡಾಗಿವೆ. ಕಣ್ಣೂರು ನಗರದ 50 ವರ್ಷದ ಟಿ ಬಶೀರ್ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಬಿಜೀಶ್ ಪುಲಿಯುಲ್ಲಪರಂಬತ್ತು ಕೋಝಿಕ್ಕೋಡ್‌ನ ಒರ್ಕತ್ತೇರಿಯಲ್ಲಿ ಸೇತುವೆಯಿಂದ ಕಾಲುವೆಗೆ ಬಿದ್ದು ನಾಪತ್ತೆಯಾಗಿದ್ದಾರೆ. ಮತ್ತೊಂದು ಘಟನೆಯಲ್ಲಿ, ಮಲಪ್ಪುರಂನ ನಿಲಂಬೂರ್‌ನಲ್ಲಿ ಒಂದು ಕುಟುಂಬದ ಐವರು ಸದಸ್ಯರು – ಒಬ್ಬ ಮಹಿಳೆ, ಅವಳ ಇಬ್ಬರು ಹೆಣ್ಣುಮಕ್ಕಳು, ಮಗ ಮತ್ತು ಅವಳ ತಾಯಿ – ಕೊಚ್ಚಿಹೋಗಿದ್ದಾರೆ. ಅವರಲ್ಲಿ ಮೂವರು ಬದುಕುಳಿದಿದ್ದು, ಇನ್ನಿಬ್ಬರು – ಸುಶೀಲ, 60 ಮತ್ತು ಅವರ ಮೊಮ್ಮಗಳು ಅನುಶ್ರೀ, 12 – ಇನ್ನೂ ಪತ್ತೆಯಾಗಿಲ್ಲ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

5 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

20 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

21 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

1 day ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

1 day ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

2 days ago