ಮಳೆಗಾಲದ ಆರಂಭವಾಗಿದೆ. ಮುಂಗಾರು ಮಳೆ ಚುರುಕಾಗುತ್ತಿದೆ. ಭಾನುವಾರ ಇಡೀ ದಿನ ತುಂತುರು ಮಳೆಯಾಗುತ್ತಲೇ ಇತ್ತು. ಈ ನಡುವೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಚಲಿಸುತ್ತಿದ್ದ ವಾಹನದ ಮೇಲೆ ಮರ ಬಿದ್ದಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಇನ್ನೀಗ ಇಲಾಖೆಗಳು ಎಚ್ಚರಿಕೆ ವಹಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.
ಸುಬ್ರಹ್ಮಣ್ಯ-ಗುಂಡ್ಯ ರಸ್ತೆಯಲ್ಲಿ ಚಲಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು ಮೇಲೆ ಬೃಹತ್ ಗಾತ್ರದ ಮರವೊಂದು ಅನಿಲ ಎಂಬಲ್ಲಿ ಮುರಿದು ಬಿದ್ದಿದೆ. ಸುಬ್ರಹ್ಮಣ್ಯದಿಂದ ಗುಂಡ್ಯ ಮೂಲಕ ಬೆಂಗಳೂರಿಗೆ ಬಸ್ಸು ತೆರಳುತ್ತಿತ್ತು. ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ಸುಬ್ರಹ್ಮಣ್ಯ – ಧರ್ಮಸ್ಥಳ ರಸ್ತೆಯ ಪೆರಿಯಶಾಂತಿ ಎಂಬಲ್ಲಿ ಚಲಿಸುತ್ತಿದ್ದ ಟೆಂಪೋ ಟ್ರಾವೆಲರ್ ಮೇಲೆ ಮರದ ಮುರಿದು ಬಿದ್ದು ವಾಹನ ಜಖಂಗೊಂಡಿದೆ. ಪ್ರಯಾಣಿಕರು ಸಣ್ಣಪುಟ್ಟ ಅಪಾಯದಿಂದ ಪಾರಾಗಿದ್ದಾರೆ.
ಮಳೆಗಾಲದ ಆರಂಭದಲ್ಲಿ ಕಾಡಿನ ನಡುವೆ ಸಂಚರಿಸುವ ವಾಹನಗಳು ಎಚ್ಚರಿಕೆಯಿಂದ ಸಂಚರಿಸಬೇಕಾದ ಸಂದರ್ಭ ಈಗಿದೆ. ಅಪಾಯಕಾರಿ ಮರಗಳನ್ನು ಇಲಾಖೆಗಳು ತೆರವು ಮಾಡುವ ಕೆಲಸ ನಡೆಯಬೇಕಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಮಳೆಗಾಲದ ಆರಂಭ | ಚಲಿಸುತ್ತಿದ್ದ ಎರಡು ವಾಹನಗಳ ಮೇಲೆ ಬಿತ್ತು ಮರ | ತಪ್ಪಿದ ಅಪಾಯ | ಬೇಕಿನ್ನು ಎಚ್ಚರಿಕೆ |"