Advertisement
ಸುದ್ದಿಗಳು

ಮಳೆಗಾಲದ ಆರಂಭ | ಚಲಿಸುತ್ತಿದ್ದ ಎರಡು ವಾಹನಗಳ ಮೇಲೆ ಬಿತ್ತು ಮರ | ತಪ್ಪಿದ ಅಪಾಯ | ಬೇಕಿನ್ನು ಎಚ್ಚರಿಕೆ |

Share

ಮಳೆಗಾಲದ ಆರಂಭವಾಗಿದೆ. ಮುಂಗಾರು ಮಳೆ ಚುರುಕಾಗುತ್ತಿದೆ. ಭಾನುವಾರ ಇಡೀ ದಿನ ತುಂತುರು ಮಳೆಯಾಗುತ್ತಲೇ ಇತ್ತು. ಈ ನಡುವೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ  ಚಲಿಸುತ್ತಿದ್ದ ವಾಹನದ ಮೇಲೆ ಮರ ಬಿದ್ದಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಇನ್ನೀಗ ಇಲಾಖೆಗಳು ಎಚ್ಚರಿಕೆ ವಹಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಸುಬ್ರಹ್ಮಣ್ಯ-ಗುಂಡ್ಯ ರಸ್ತೆಯಲ್ಲಿ ಚಲಿಸುತ್ತಿದ್ದ ಕೆ ಎಸ್‌ ಆರ್‌ ಟಿ ಸಿ ಬಸ್ಸು ಮೇಲೆ ಬೃಹತ್‌ ಗಾತ್ರದ ಮರವೊಂದು ಅನಿಲ ಎಂಬಲ್ಲಿ ಮುರಿದು ಬಿದ್ದಿದೆ. ಸುಬ್ರಹ್ಮಣ್ಯದಿಂದ ಗುಂಡ್ಯ ಮೂಲಕ ಬೆಂಗಳೂರಿಗೆ ಬಸ್ಸು ತೆರಳುತ್ತಿತ್ತು. ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ  ಸುಬ್ರಹ್ಮಣ್ಯ – ಧರ್ಮಸ್ಥಳ ರಸ್ತೆಯ ಪೆರಿಯಶಾಂತಿ ಎಂಬಲ್ಲಿ ಚಲಿಸುತ್ತಿದ್ದ ಟೆಂಪೋ ಟ್ರಾವೆಲರ್‌ ಮೇಲೆ ಮರದ ಮುರಿದು ಬಿದ್ದು ವಾಹನ ಜಖಂಗೊಂಡಿದೆ. ಪ್ರಯಾಣಿಕರು ಸಣ್ಣಪುಟ್ಟ ಅಪಾಯದಿಂದ ಪಾರಾಗಿದ್ದಾರೆ.

ಮಳೆಗಾಲದ ಆರಂಭದಲ್ಲಿ ಕಾಡಿನ ನಡುವೆ ಸಂಚರಿಸುವ ವಾಹನಗಳು ಎಚ್ಚರಿಕೆಯಿಂದ ಸಂಚರಿಸಬೇಕಾದ ಸಂದರ್ಭ ಈಗಿದೆ. ಅಪಾಯಕಾರಿ ಮರಗಳನ್ನು ಇಲಾಖೆಗಳು ತೆರವು ಮಾಡುವ ಕೆಲಸ ನಡೆಯಬೇಕಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ

ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…

56 minutes ago

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…

2 hours ago

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

4 hours ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

4 hours ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

12 hours ago