ಮಳೆಗಾಲದ ಆರಂಭವಾಗಿದೆ. ಮುಂಗಾರು ಮಳೆ ಚುರುಕಾಗುತ್ತಿದೆ. ಭಾನುವಾರ ಇಡೀ ದಿನ ತುಂತುರು ಮಳೆಯಾಗುತ್ತಲೇ ಇತ್ತು. ಈ ನಡುವೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಚಲಿಸುತ್ತಿದ್ದ ವಾಹನದ ಮೇಲೆ ಮರ ಬಿದ್ದಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಇನ್ನೀಗ ಇಲಾಖೆಗಳು ಎಚ್ಚರಿಕೆ ವಹಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.
ಸುಬ್ರಹ್ಮಣ್ಯ-ಗುಂಡ್ಯ ರಸ್ತೆಯಲ್ಲಿ ಚಲಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು ಮೇಲೆ ಬೃಹತ್ ಗಾತ್ರದ ಮರವೊಂದು ಅನಿಲ ಎಂಬಲ್ಲಿ ಮುರಿದು ಬಿದ್ದಿದೆ. ಸುಬ್ರಹ್ಮಣ್ಯದಿಂದ ಗುಂಡ್ಯ ಮೂಲಕ ಬೆಂಗಳೂರಿಗೆ ಬಸ್ಸು ತೆರಳುತ್ತಿತ್ತು. ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ಸುಬ್ರಹ್ಮಣ್ಯ – ಧರ್ಮಸ್ಥಳ ರಸ್ತೆಯ ಪೆರಿಯಶಾಂತಿ ಎಂಬಲ್ಲಿ ಚಲಿಸುತ್ತಿದ್ದ ಟೆಂಪೋ ಟ್ರಾವೆಲರ್ ಮೇಲೆ ಮರದ ಮುರಿದು ಬಿದ್ದು ವಾಹನ ಜಖಂಗೊಂಡಿದೆ. ಪ್ರಯಾಣಿಕರು ಸಣ್ಣಪುಟ್ಟ ಅಪಾಯದಿಂದ ಪಾರಾಗಿದ್ದಾರೆ.
ಮಳೆಗಾಲದ ಆರಂಭದಲ್ಲಿ ಕಾಡಿನ ನಡುವೆ ಸಂಚರಿಸುವ ವಾಹನಗಳು ಎಚ್ಚರಿಕೆಯಿಂದ ಸಂಚರಿಸಬೇಕಾದ ಸಂದರ್ಭ ಈಗಿದೆ. ಅಪಾಯಕಾರಿ ಮರಗಳನ್ನು ಇಲಾಖೆಗಳು ತೆರವು ಮಾಡುವ ಕೆಲಸ ನಡೆಯಬೇಕಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…