ಮಳೆಗಾಲದ ಆರಂಭವಾಗಿದೆ. ಮುಂಗಾರು ಮಳೆ ಚುರುಕಾಗುತ್ತಿದೆ. ಭಾನುವಾರ ಇಡೀ ದಿನ ತುಂತುರು ಮಳೆಯಾಗುತ್ತಲೇ ಇತ್ತು. ಈ ನಡುವೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಚಲಿಸುತ್ತಿದ್ದ ವಾಹನದ ಮೇಲೆ ಮರ ಬಿದ್ದಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಇನ್ನೀಗ ಇಲಾಖೆಗಳು ಎಚ್ಚರಿಕೆ ವಹಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.
ಸುಬ್ರಹ್ಮಣ್ಯ-ಗುಂಡ್ಯ ರಸ್ತೆಯಲ್ಲಿ ಚಲಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು ಮೇಲೆ ಬೃಹತ್ ಗಾತ್ರದ ಮರವೊಂದು ಅನಿಲ ಎಂಬಲ್ಲಿ ಮುರಿದು ಬಿದ್ದಿದೆ. ಸುಬ್ರಹ್ಮಣ್ಯದಿಂದ ಗುಂಡ್ಯ ಮೂಲಕ ಬೆಂಗಳೂರಿಗೆ ಬಸ್ಸು ತೆರಳುತ್ತಿತ್ತು. ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ಸುಬ್ರಹ್ಮಣ್ಯ – ಧರ್ಮಸ್ಥಳ ರಸ್ತೆಯ ಪೆರಿಯಶಾಂತಿ ಎಂಬಲ್ಲಿ ಚಲಿಸುತ್ತಿದ್ದ ಟೆಂಪೋ ಟ್ರಾವೆಲರ್ ಮೇಲೆ ಮರದ ಮುರಿದು ಬಿದ್ದು ವಾಹನ ಜಖಂಗೊಂಡಿದೆ. ಪ್ರಯಾಣಿಕರು ಸಣ್ಣಪುಟ್ಟ ಅಪಾಯದಿಂದ ಪಾರಾಗಿದ್ದಾರೆ.
ಮಳೆಗಾಲದ ಆರಂಭದಲ್ಲಿ ಕಾಡಿನ ನಡುವೆ ಸಂಚರಿಸುವ ವಾಹನಗಳು ಎಚ್ಚರಿಕೆಯಿಂದ ಸಂಚರಿಸಬೇಕಾದ ಸಂದರ್ಭ ಈಗಿದೆ. ಅಪಾಯಕಾರಿ ಮರಗಳನ್ನು ಇಲಾಖೆಗಳು ತೆರವು ಮಾಡುವ ಕೆಲಸ ನಡೆಯಬೇಕಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…