ಕೊಲ್ಲಮೊಗ್ರ-ಕಲ್ಮಕಾರು | ಭೀಕರ ಮಳೆಯ ನಡುವೆ ನೆಟ್ವರ್ಕ ಸಮಸ್ಯೆ | ಅಧಿಕಾರಿಗಳು ಸಚಿವರು ಬಂದಾಗ ಸಿಗ್ನಲ್ ಆನ್..!‌ ನಂತರ ಆಫ್…!‌ | ಈಗಲೂ ಎಚ್ಚರವಾಗದಿದ್ದರೆ ಇನ್ಯಾವಾಗ ?‌ |

August 2, 2022
8:19 PM

ಸೋಮವಾರ ರಾತ್ರಿ ಕಲ್ಮಕಾರು-ಕೊಲ್ಲಮೊಗ್ರ ಪ್ರದೇಶದಲ್ಲಿ ಮೇಘಸ್ಫೋಟಗೊಂಡು ಭಾರೀ ಮಳೆಯಾಗಿತ್ತು. ಭಾನುವಾರ ಸಂಜೆ ಜಲಸ್ಫೋಟದೊಂದಿಗೆ ಭೂಕುಸಿತ ಸಂಭವಿತ್ತು. ಇದೀಗ ಮಂಗಳವಾರ ರಾತ್ರಿಯೂ ಮಳೆಯಾಗುತ್ತಿದೆ. ಆದರೆ ಈ ಪ್ರದೇಶದಲ್ಲಿ ಮಳೆಯ ಅಬ್ಬರ, ತಕ್ಷಣದ ನೆರವಿಗೆ ಸಂಪರ್ಕ ಮಾಡಲು ಈಗಲೂ ಸೂಕ್ತ ನೆಟ್ವರ್ಕ್‌ ವ್ಯವಸ್ಥೆ ಇಲ್ಲವಾಗಿದೆ. ಸಚಿವರು, ಅಧಿಕಾರಿಗಳು ಬಂದಾಗ ಆನ್‌ ಆಗುವ ಬಿ ಎಸ್‌ ಎನ್‌ ಎಲ್‌ ನೆಟ್ವರ್ಕ್‌ ನಂತರ ಮಾಯವಾಗಿದೆ ಎಂದು ಕಲ್ಮಕಾರು-ಕೊಲ್ಲಮೊಗ್ರ ಜನರು ತಿಳಿಸಿದ್ದಾರೆ. ಜನರಿಗೆ ಅಗತ್ಯ ಸಮಯದಲ್ಲೂ ನೆಟ್ವರ್ಕ್‌ ವ್ಯವಸ್ಥೆಯ ಬಗ್ಗೆ ಎಚ್ಚರವಾಗದೇ ಇದ್ದರೆ ಇನ್ಯಾವಾಗ ? ಎಂಬುದು ಸದ್ಯದ ಪ್ರಶ್ನೆಯಾಗಿದೆ.

ಕಳೆದ ಹಲವು ಸಮಯಗಳಿಂದ ಕಲ್ಮಕಾರು-ಕೊಲ್ಲಮೊಗ್ರ ಪ್ರದೇಶದಲ್ಲಿ ನೆಟ್ವರ್ಕ್‌ ಸಮಸ್ಯೆ ಇದೆ. ವಿದ್ಯುತ ಸಂಪರ್ಕ ಕಡಿತಗೊಂಡ ತಕ್ಷಣವೇ ನೆಟ್ವರ್ಕ್‌ ಆಫ್‌ ಆಗುತ್ತದೆ. ಗ್ರಾಮೀಣ ಭಾಗದಲ್ಲಿ ಬಿ ಎಸ್‌ ಎನ್‌ ಎಲ್‌ ನೆಟ್ವರ್ಕ್‌ ಬಹುಮಂದಿಯನ್ನು ತಲಪುತ್ತದೆ. ಈಚೆಗೆ ಜಿಯೋ ನೆಟ್ವರ್ಕ್‌ ಕೂಡಾ ಕೆಲವು ಕಡೆ ಲಭ್ಯವಿದೆ ಇಲ್ಲಿ, ಆದರೆ ಗ್ರಾಮೀಣ ಭಾಗದಲ್ಲಿ, ಸೋಮವಾರ ತಡರಾತ್ರಿ ಅಪಾಯಕ್ಕೆ ಸಿಲುಕಿದ ಕಡೆಗಳಲ್ಲಿ ಅದೂ ಸಿಗುತ್ತಿಲ್ಲ, ಲಭ್ಯವಾಗುತ್ತಿದ್ದ ಬಿ ಎಸ್‌ ಎನ್‌ ಎಲ್‌ ನೆಟ್ವರ್ಕ್‌ ಆಫ್‌ ಆಗಿತ್ತು. ಆದರೆ ಅಧಿಕಾರಿಗಳು, ಸಚಿವರು ಸ್ಥಳಕ್ಕೆ ಭೇಟಿ ನೀಡುವ ವೇಳೆ ಸಿಗ್ನಲ್‌ ಲಭ್ಯವಾಗಿತ್ತು, ಆದಾದ ಬಳಿಕ ಸಿಗ್ನಲ್‌ ಸಿಗುತ್ತಿಲ್ಲ ಎಂಸು ಸ್ಥಳೀಯರು ಹೇಳಿದ್ದಾರೆ. ಇಂತಹ ಸಂದರ್ಭದಲ್ಲಿ ನೆಟ್ವರ್ಕ್‌ ವ್ಯವಸ್ಥೆಗೆ ಬಿ ಎಸ್‌ ಎನ್‌ ಎಲ್‌ ತಕ್ಷಣವೇ ಕಾರ್ಯಪ್ರವೃತ್ತವಾಗಬೇಕು ಎಂಬುದು ಸ್ಥಳೀಯರ ಒತ್ತಾಯ. ಸೋಮವಾರ ರಾತ್ರಿ ಕೂಡಾ ನೆಟ್ವರ್ಕ್‌ ಲಭ್ಯವಿದ್ದರೆ ಕೆಲವು ಪ್ರದೇಶ ಮನೆಗಳಿಗೆ ರಕ್ಷಣೆ ನೀಡಬಹುದಿತ್ತು ಎನ್ನುವುದು  ಸ್ಥಳೀಯರ ಮಾಹಿತಿ.

ಹೀಗಾಗಿ ಇಲಾಖೆಗಳು ತಕ್ಷಣವೇ ಡೀಸೆಲ್‌ ವ್ಯವಸ್ಥೆ ಒದಗಿಸಿ ಭೀಕರ ಮಳೆಯ ಈ ಅವಧಿಯಲ್ಲೂ ಖಾಸಗಿ ಟವರ್‌ ಸಹಿತ ಬಿ ಎಸ್‌ ಎನ್‌ ಎಲ್‌ ನೆಟ್ವರ್ಕ್‌ ವ್ಯವಸ್ಥೆ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ
ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು
July 28, 2026
12:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ
July 28, 2026
12:32 PM
by: ಸಾಯಿಶೇಖರ್ ಕರಿಕಳ
ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror