ಸೋಮವಾರ ರಾತ್ರಿ ಕಲ್ಮಕಾರು-ಕೊಲ್ಲಮೊಗ್ರ ಪ್ರದೇಶದಲ್ಲಿ ಮೇಘಸ್ಫೋಟಗೊಂಡು ಭಾರೀ ಮಳೆಯಾಗಿತ್ತು. ಭಾನುವಾರ ಸಂಜೆ ಜಲಸ್ಫೋಟದೊಂದಿಗೆ ಭೂಕುಸಿತ ಸಂಭವಿತ್ತು. ಇದೀಗ ಮಂಗಳವಾರ ರಾತ್ರಿಯೂ ಮಳೆಯಾಗುತ್ತಿದೆ. ಆದರೆ ಈ ಪ್ರದೇಶದಲ್ಲಿ ಮಳೆಯ ಅಬ್ಬರ, ತಕ್ಷಣದ ನೆರವಿಗೆ ಸಂಪರ್ಕ ಮಾಡಲು ಈಗಲೂ ಸೂಕ್ತ ನೆಟ್ವರ್ಕ್ ವ್ಯವಸ್ಥೆ ಇಲ್ಲವಾಗಿದೆ. ಸಚಿವರು, ಅಧಿಕಾರಿಗಳು ಬಂದಾಗ ಆನ್ ಆಗುವ ಬಿ ಎಸ್ ಎನ್ ಎಲ್ ನೆಟ್ವರ್ಕ್ ನಂತರ ಮಾಯವಾಗಿದೆ ಎಂದು ಕಲ್ಮಕಾರು-ಕೊಲ್ಲಮೊಗ್ರ ಜನರು ತಿಳಿಸಿದ್ದಾರೆ. ಜನರಿಗೆ ಅಗತ್ಯ ಸಮಯದಲ್ಲೂ ನೆಟ್ವರ್ಕ್ ವ್ಯವಸ್ಥೆಯ ಬಗ್ಗೆ ಎಚ್ಚರವಾಗದೇ ಇದ್ದರೆ ಇನ್ಯಾವಾಗ ? ಎಂಬುದು ಸದ್ಯದ ಪ್ರಶ್ನೆಯಾಗಿದೆ.
ಕಳೆದ ಹಲವು ಸಮಯಗಳಿಂದ ಕಲ್ಮಕಾರು-ಕೊಲ್ಲಮೊಗ್ರ ಪ್ರದೇಶದಲ್ಲಿ ನೆಟ್ವರ್ಕ್ ಸಮಸ್ಯೆ ಇದೆ. ವಿದ್ಯುತ ಸಂಪರ್ಕ ಕಡಿತಗೊಂಡ ತಕ್ಷಣವೇ ನೆಟ್ವರ್ಕ್ ಆಫ್ ಆಗುತ್ತದೆ. ಗ್ರಾಮೀಣ ಭಾಗದಲ್ಲಿ ಬಿ ಎಸ್ ಎನ್ ಎಲ್ ನೆಟ್ವರ್ಕ್ ಬಹುಮಂದಿಯನ್ನು ತಲಪುತ್ತದೆ. ಈಚೆಗೆ ಜಿಯೋ ನೆಟ್ವರ್ಕ್ ಕೂಡಾ ಕೆಲವು ಕಡೆ ಲಭ್ಯವಿದೆ ಇಲ್ಲಿ, ಆದರೆ ಗ್ರಾಮೀಣ ಭಾಗದಲ್ಲಿ, ಸೋಮವಾರ ತಡರಾತ್ರಿ ಅಪಾಯಕ್ಕೆ ಸಿಲುಕಿದ ಕಡೆಗಳಲ್ಲಿ ಅದೂ ಸಿಗುತ್ತಿಲ್ಲ, ಲಭ್ಯವಾಗುತ್ತಿದ್ದ ಬಿ ಎಸ್ ಎನ್ ಎಲ್ ನೆಟ್ವರ್ಕ್ ಆಫ್ ಆಗಿತ್ತು. ಆದರೆ ಅಧಿಕಾರಿಗಳು, ಸಚಿವರು ಸ್ಥಳಕ್ಕೆ ಭೇಟಿ ನೀಡುವ ವೇಳೆ ಸಿಗ್ನಲ್ ಲಭ್ಯವಾಗಿತ್ತು, ಆದಾದ ಬಳಿಕ ಸಿಗ್ನಲ್ ಸಿಗುತ್ತಿಲ್ಲ ಎಂಸು ಸ್ಥಳೀಯರು ಹೇಳಿದ್ದಾರೆ. ಇಂತಹ ಸಂದರ್ಭದಲ್ಲಿ ನೆಟ್ವರ್ಕ್ ವ್ಯವಸ್ಥೆಗೆ ಬಿ ಎಸ್ ಎನ್ ಎಲ್ ತಕ್ಷಣವೇ ಕಾರ್ಯಪ್ರವೃತ್ತವಾಗಬೇಕು ಎಂಬುದು ಸ್ಥಳೀಯರ ಒತ್ತಾಯ. ಸೋಮವಾರ ರಾತ್ರಿ ಕೂಡಾ ನೆಟ್ವರ್ಕ್ ಲಭ್ಯವಿದ್ದರೆ ಕೆಲವು ಪ್ರದೇಶ ಮನೆಗಳಿಗೆ ರಕ್ಷಣೆ ನೀಡಬಹುದಿತ್ತು ಎನ್ನುವುದು ಸ್ಥಳೀಯರ ಮಾಹಿತಿ.
ಹೀಗಾಗಿ ಇಲಾಖೆಗಳು ತಕ್ಷಣವೇ ಡೀಸೆಲ್ ವ್ಯವಸ್ಥೆ ಒದಗಿಸಿ ಭೀಕರ ಮಳೆಯ ಈ ಅವಧಿಯಲ್ಲೂ ಖಾಸಗಿ ಟವರ್ ಸಹಿತ ಬಿ ಎಸ್ ಎನ್ ಎಲ್ ನೆಟ್ವರ್ಕ್ ವ್ಯವಸ್ಥೆ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…