ಸೋಮವಾರ ರಾತ್ರಿ ಕಲ್ಮಕಾರು-ಕೊಲ್ಲಮೊಗ್ರ ಪ್ರದೇಶದಲ್ಲಿ ಮೇಘಸ್ಫೋಟಗೊಂಡು ಭಾರೀ ಮಳೆಯಾಗಿತ್ತು. ಭಾನುವಾರ ಸಂಜೆ ಜಲಸ್ಫೋಟದೊಂದಿಗೆ ಭೂಕುಸಿತ ಸಂಭವಿತ್ತು. ಇದೀಗ ಮಂಗಳವಾರ ರಾತ್ರಿಯೂ ಮಳೆಯಾಗುತ್ತಿದೆ. ಆದರೆ ಈ ಪ್ರದೇಶದಲ್ಲಿ ಮಳೆಯ ಅಬ್ಬರ, ತಕ್ಷಣದ ನೆರವಿಗೆ ಸಂಪರ್ಕ ಮಾಡಲು ಈಗಲೂ ಸೂಕ್ತ ನೆಟ್ವರ್ಕ್ ವ್ಯವಸ್ಥೆ ಇಲ್ಲವಾಗಿದೆ. ಸಚಿವರು, ಅಧಿಕಾರಿಗಳು ಬಂದಾಗ ಆನ್ ಆಗುವ ಬಿ ಎಸ್ ಎನ್ ಎಲ್ ನೆಟ್ವರ್ಕ್ ನಂತರ ಮಾಯವಾಗಿದೆ ಎಂದು ಕಲ್ಮಕಾರು-ಕೊಲ್ಲಮೊಗ್ರ ಜನರು ತಿಳಿಸಿದ್ದಾರೆ. ಜನರಿಗೆ ಅಗತ್ಯ ಸಮಯದಲ್ಲೂ ನೆಟ್ವರ್ಕ್ ವ್ಯವಸ್ಥೆಯ ಬಗ್ಗೆ ಎಚ್ಚರವಾಗದೇ ಇದ್ದರೆ ಇನ್ಯಾವಾಗ ? ಎಂಬುದು ಸದ್ಯದ ಪ್ರಶ್ನೆಯಾಗಿದೆ.
ಕಳೆದ ಹಲವು ಸಮಯಗಳಿಂದ ಕಲ್ಮಕಾರು-ಕೊಲ್ಲಮೊಗ್ರ ಪ್ರದೇಶದಲ್ಲಿ ನೆಟ್ವರ್ಕ್ ಸಮಸ್ಯೆ ಇದೆ. ವಿದ್ಯುತ ಸಂಪರ್ಕ ಕಡಿತಗೊಂಡ ತಕ್ಷಣವೇ ನೆಟ್ವರ್ಕ್ ಆಫ್ ಆಗುತ್ತದೆ. ಗ್ರಾಮೀಣ ಭಾಗದಲ್ಲಿ ಬಿ ಎಸ್ ಎನ್ ಎಲ್ ನೆಟ್ವರ್ಕ್ ಬಹುಮಂದಿಯನ್ನು ತಲಪುತ್ತದೆ. ಈಚೆಗೆ ಜಿಯೋ ನೆಟ್ವರ್ಕ್ ಕೂಡಾ ಕೆಲವು ಕಡೆ ಲಭ್ಯವಿದೆ ಇಲ್ಲಿ, ಆದರೆ ಗ್ರಾಮೀಣ ಭಾಗದಲ್ಲಿ, ಸೋಮವಾರ ತಡರಾತ್ರಿ ಅಪಾಯಕ್ಕೆ ಸಿಲುಕಿದ ಕಡೆಗಳಲ್ಲಿ ಅದೂ ಸಿಗುತ್ತಿಲ್ಲ, ಲಭ್ಯವಾಗುತ್ತಿದ್ದ ಬಿ ಎಸ್ ಎನ್ ಎಲ್ ನೆಟ್ವರ್ಕ್ ಆಫ್ ಆಗಿತ್ತು. ಆದರೆ ಅಧಿಕಾರಿಗಳು, ಸಚಿವರು ಸ್ಥಳಕ್ಕೆ ಭೇಟಿ ನೀಡುವ ವೇಳೆ ಸಿಗ್ನಲ್ ಲಭ್ಯವಾಗಿತ್ತು, ಆದಾದ ಬಳಿಕ ಸಿಗ್ನಲ್ ಸಿಗುತ್ತಿಲ್ಲ ಎಂಸು ಸ್ಥಳೀಯರು ಹೇಳಿದ್ದಾರೆ. ಇಂತಹ ಸಂದರ್ಭದಲ್ಲಿ ನೆಟ್ವರ್ಕ್ ವ್ಯವಸ್ಥೆಗೆ ಬಿ ಎಸ್ ಎನ್ ಎಲ್ ತಕ್ಷಣವೇ ಕಾರ್ಯಪ್ರವೃತ್ತವಾಗಬೇಕು ಎಂಬುದು ಸ್ಥಳೀಯರ ಒತ್ತಾಯ. ಸೋಮವಾರ ರಾತ್ರಿ ಕೂಡಾ ನೆಟ್ವರ್ಕ್ ಲಭ್ಯವಿದ್ದರೆ ಕೆಲವು ಪ್ರದೇಶ ಮನೆಗಳಿಗೆ ರಕ್ಷಣೆ ನೀಡಬಹುದಿತ್ತು ಎನ್ನುವುದು ಸ್ಥಳೀಯರ ಮಾಹಿತಿ.
ಹೀಗಾಗಿ ಇಲಾಖೆಗಳು ತಕ್ಷಣವೇ ಡೀಸೆಲ್ ವ್ಯವಸ್ಥೆ ಒದಗಿಸಿ ಭೀಕರ ಮಳೆಯ ಈ ಅವಧಿಯಲ್ಲೂ ಖಾಸಗಿ ಟವರ್ ಸಹಿತ ಬಿ ಎಸ್ ಎನ್ ಎಲ್ ನೆಟ್ವರ್ಕ್ ವ್ಯವಸ್ಥೆ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…