Advertisement
ಸುದ್ದಿಗಳು

ಕೊಲ್ಲಮೊಗ್ರ-ಕಲ್ಮಕಾರು | ಭೀಕರ ಮಳೆಯ ನಡುವೆ ನೆಟ್ವರ್ಕ ಸಮಸ್ಯೆ | ಅಧಿಕಾರಿಗಳು ಸಚಿವರು ಬಂದಾಗ ಸಿಗ್ನಲ್ ಆನ್..!‌ ನಂತರ ಆಫ್…!‌ | ಈಗಲೂ ಎಚ್ಚರವಾಗದಿದ್ದರೆ ಇನ್ಯಾವಾಗ ?‌ |

Share

ಸೋಮವಾರ ರಾತ್ರಿ ಕಲ್ಮಕಾರು-ಕೊಲ್ಲಮೊಗ್ರ ಪ್ರದೇಶದಲ್ಲಿ ಮೇಘಸ್ಫೋಟಗೊಂಡು ಭಾರೀ ಮಳೆಯಾಗಿತ್ತು. ಭಾನುವಾರ ಸಂಜೆ ಜಲಸ್ಫೋಟದೊಂದಿಗೆ ಭೂಕುಸಿತ ಸಂಭವಿತ್ತು. ಇದೀಗ ಮಂಗಳವಾರ ರಾತ್ರಿಯೂ ಮಳೆಯಾಗುತ್ತಿದೆ. ಆದರೆ ಈ ಪ್ರದೇಶದಲ್ಲಿ ಮಳೆಯ ಅಬ್ಬರ, ತಕ್ಷಣದ ನೆರವಿಗೆ ಸಂಪರ್ಕ ಮಾಡಲು ಈಗಲೂ ಸೂಕ್ತ ನೆಟ್ವರ್ಕ್‌ ವ್ಯವಸ್ಥೆ ಇಲ್ಲವಾಗಿದೆ. ಸಚಿವರು, ಅಧಿಕಾರಿಗಳು ಬಂದಾಗ ಆನ್‌ ಆಗುವ ಬಿ ಎಸ್‌ ಎನ್‌ ಎಲ್‌ ನೆಟ್ವರ್ಕ್‌ ನಂತರ ಮಾಯವಾಗಿದೆ ಎಂದು ಕಲ್ಮಕಾರು-ಕೊಲ್ಲಮೊಗ್ರ ಜನರು ತಿಳಿಸಿದ್ದಾರೆ. ಜನರಿಗೆ ಅಗತ್ಯ ಸಮಯದಲ್ಲೂ ನೆಟ್ವರ್ಕ್‌ ವ್ಯವಸ್ಥೆಯ ಬಗ್ಗೆ ಎಚ್ಚರವಾಗದೇ ಇದ್ದರೆ ಇನ್ಯಾವಾಗ ? ಎಂಬುದು ಸದ್ಯದ ಪ್ರಶ್ನೆಯಾಗಿದೆ.

ಕಳೆದ ಹಲವು ಸಮಯಗಳಿಂದ ಕಲ್ಮಕಾರು-ಕೊಲ್ಲಮೊಗ್ರ ಪ್ರದೇಶದಲ್ಲಿ ನೆಟ್ವರ್ಕ್‌ ಸಮಸ್ಯೆ ಇದೆ. ವಿದ್ಯುತ ಸಂಪರ್ಕ ಕಡಿತಗೊಂಡ ತಕ್ಷಣವೇ ನೆಟ್ವರ್ಕ್‌ ಆಫ್‌ ಆಗುತ್ತದೆ. ಗ್ರಾಮೀಣ ಭಾಗದಲ್ಲಿ ಬಿ ಎಸ್‌ ಎನ್‌ ಎಲ್‌ ನೆಟ್ವರ್ಕ್‌ ಬಹುಮಂದಿಯನ್ನು ತಲಪುತ್ತದೆ. ಈಚೆಗೆ ಜಿಯೋ ನೆಟ್ವರ್ಕ್‌ ಕೂಡಾ ಕೆಲವು ಕಡೆ ಲಭ್ಯವಿದೆ ಇಲ್ಲಿ, ಆದರೆ ಗ್ರಾಮೀಣ ಭಾಗದಲ್ಲಿ, ಸೋಮವಾರ ತಡರಾತ್ರಿ ಅಪಾಯಕ್ಕೆ ಸಿಲುಕಿದ ಕಡೆಗಳಲ್ಲಿ ಅದೂ ಸಿಗುತ್ತಿಲ್ಲ, ಲಭ್ಯವಾಗುತ್ತಿದ್ದ ಬಿ ಎಸ್‌ ಎನ್‌ ಎಲ್‌ ನೆಟ್ವರ್ಕ್‌ ಆಫ್‌ ಆಗಿತ್ತು. ಆದರೆ ಅಧಿಕಾರಿಗಳು, ಸಚಿವರು ಸ್ಥಳಕ್ಕೆ ಭೇಟಿ ನೀಡುವ ವೇಳೆ ಸಿಗ್ನಲ್‌ ಲಭ್ಯವಾಗಿತ್ತು, ಆದಾದ ಬಳಿಕ ಸಿಗ್ನಲ್‌ ಸಿಗುತ್ತಿಲ್ಲ ಎಂಸು ಸ್ಥಳೀಯರು ಹೇಳಿದ್ದಾರೆ. ಇಂತಹ ಸಂದರ್ಭದಲ್ಲಿ ನೆಟ್ವರ್ಕ್‌ ವ್ಯವಸ್ಥೆಗೆ ಬಿ ಎಸ್‌ ಎನ್‌ ಎಲ್‌ ತಕ್ಷಣವೇ ಕಾರ್ಯಪ್ರವೃತ್ತವಾಗಬೇಕು ಎಂಬುದು ಸ್ಥಳೀಯರ ಒತ್ತಾಯ. ಸೋಮವಾರ ರಾತ್ರಿ ಕೂಡಾ ನೆಟ್ವರ್ಕ್‌ ಲಭ್ಯವಿದ್ದರೆ ಕೆಲವು ಪ್ರದೇಶ ಮನೆಗಳಿಗೆ ರಕ್ಷಣೆ ನೀಡಬಹುದಿತ್ತು ಎನ್ನುವುದು  ಸ್ಥಳೀಯರ ಮಾಹಿತಿ.

ಹೀಗಾಗಿ ಇಲಾಖೆಗಳು ತಕ್ಷಣವೇ ಡೀಸೆಲ್‌ ವ್ಯವಸ್ಥೆ ಒದಗಿಸಿ ಭೀಕರ ಮಳೆಯ ಈ ಅವಧಿಯಲ್ಲೂ ಖಾಸಗಿ ಟವರ್‌ ಸಹಿತ ಬಿ ಎಸ್‌ ಎನ್‌ ಎಲ್‌ ನೆಟ್ವರ್ಕ್‌ ವ್ಯವಸ್ಥೆ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

15 minutes ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

2 hours ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

3 hours ago

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago