Advertisement
ಸುದ್ದಿಗಳು

ಕೊಲ್ಲಮೊಗ್ರ-ಕಲ್ಮಕಾರು | ಭೀಕರ ಮಳೆಯ ನಡುವೆ ನೆಟ್ವರ್ಕ ಸಮಸ್ಯೆ | ಅಧಿಕಾರಿಗಳು ಸಚಿವರು ಬಂದಾಗ ಸಿಗ್ನಲ್ ಆನ್..!‌ ನಂತರ ಆಫ್…!‌ | ಈಗಲೂ ಎಚ್ಚರವಾಗದಿದ್ದರೆ ಇನ್ಯಾವಾಗ ?‌ |

Share

ಸೋಮವಾರ ರಾತ್ರಿ ಕಲ್ಮಕಾರು-ಕೊಲ್ಲಮೊಗ್ರ ಪ್ರದೇಶದಲ್ಲಿ ಮೇಘಸ್ಫೋಟಗೊಂಡು ಭಾರೀ ಮಳೆಯಾಗಿತ್ತು. ಭಾನುವಾರ ಸಂಜೆ ಜಲಸ್ಫೋಟದೊಂದಿಗೆ ಭೂಕುಸಿತ ಸಂಭವಿತ್ತು. ಇದೀಗ ಮಂಗಳವಾರ ರಾತ್ರಿಯೂ ಮಳೆಯಾಗುತ್ತಿದೆ. ಆದರೆ ಈ ಪ್ರದೇಶದಲ್ಲಿ ಮಳೆಯ ಅಬ್ಬರ, ತಕ್ಷಣದ ನೆರವಿಗೆ ಸಂಪರ್ಕ ಮಾಡಲು ಈಗಲೂ ಸೂಕ್ತ ನೆಟ್ವರ್ಕ್‌ ವ್ಯವಸ್ಥೆ ಇಲ್ಲವಾಗಿದೆ. ಸಚಿವರು, ಅಧಿಕಾರಿಗಳು ಬಂದಾಗ ಆನ್‌ ಆಗುವ ಬಿ ಎಸ್‌ ಎನ್‌ ಎಲ್‌ ನೆಟ್ವರ್ಕ್‌ ನಂತರ ಮಾಯವಾಗಿದೆ ಎಂದು ಕಲ್ಮಕಾರು-ಕೊಲ್ಲಮೊಗ್ರ ಜನರು ತಿಳಿಸಿದ್ದಾರೆ. ಜನರಿಗೆ ಅಗತ್ಯ ಸಮಯದಲ್ಲೂ ನೆಟ್ವರ್ಕ್‌ ವ್ಯವಸ್ಥೆಯ ಬಗ್ಗೆ ಎಚ್ಚರವಾಗದೇ ಇದ್ದರೆ ಇನ್ಯಾವಾಗ ? ಎಂಬುದು ಸದ್ಯದ ಪ್ರಶ್ನೆಯಾಗಿದೆ.

Advertisement
Advertisement

ಕಳೆದ ಹಲವು ಸಮಯಗಳಿಂದ ಕಲ್ಮಕಾರು-ಕೊಲ್ಲಮೊಗ್ರ ಪ್ರದೇಶದಲ್ಲಿ ನೆಟ್ವರ್ಕ್‌ ಸಮಸ್ಯೆ ಇದೆ. ವಿದ್ಯುತ ಸಂಪರ್ಕ ಕಡಿತಗೊಂಡ ತಕ್ಷಣವೇ ನೆಟ್ವರ್ಕ್‌ ಆಫ್‌ ಆಗುತ್ತದೆ. ಗ್ರಾಮೀಣ ಭಾಗದಲ್ಲಿ ಬಿ ಎಸ್‌ ಎನ್‌ ಎಲ್‌ ನೆಟ್ವರ್ಕ್‌ ಬಹುಮಂದಿಯನ್ನು ತಲಪುತ್ತದೆ. ಈಚೆಗೆ ಜಿಯೋ ನೆಟ್ವರ್ಕ್‌ ಕೂಡಾ ಕೆಲವು ಕಡೆ ಲಭ್ಯವಿದೆ ಇಲ್ಲಿ, ಆದರೆ ಗ್ರಾಮೀಣ ಭಾಗದಲ್ಲಿ, ಸೋಮವಾರ ತಡರಾತ್ರಿ ಅಪಾಯಕ್ಕೆ ಸಿಲುಕಿದ ಕಡೆಗಳಲ್ಲಿ ಅದೂ ಸಿಗುತ್ತಿಲ್ಲ, ಲಭ್ಯವಾಗುತ್ತಿದ್ದ ಬಿ ಎಸ್‌ ಎನ್‌ ಎಲ್‌ ನೆಟ್ವರ್ಕ್‌ ಆಫ್‌ ಆಗಿತ್ತು. ಆದರೆ ಅಧಿಕಾರಿಗಳು, ಸಚಿವರು ಸ್ಥಳಕ್ಕೆ ಭೇಟಿ ನೀಡುವ ವೇಳೆ ಸಿಗ್ನಲ್‌ ಲಭ್ಯವಾಗಿತ್ತು, ಆದಾದ ಬಳಿಕ ಸಿಗ್ನಲ್‌ ಸಿಗುತ್ತಿಲ್ಲ ಎಂಸು ಸ್ಥಳೀಯರು ಹೇಳಿದ್ದಾರೆ. ಇಂತಹ ಸಂದರ್ಭದಲ್ಲಿ ನೆಟ್ವರ್ಕ್‌ ವ್ಯವಸ್ಥೆಗೆ ಬಿ ಎಸ್‌ ಎನ್‌ ಎಲ್‌ ತಕ್ಷಣವೇ ಕಾರ್ಯಪ್ರವೃತ್ತವಾಗಬೇಕು ಎಂಬುದು ಸ್ಥಳೀಯರ ಒತ್ತಾಯ. ಸೋಮವಾರ ರಾತ್ರಿ ಕೂಡಾ ನೆಟ್ವರ್ಕ್‌ ಲಭ್ಯವಿದ್ದರೆ ಕೆಲವು ಪ್ರದೇಶ ಮನೆಗಳಿಗೆ ರಕ್ಷಣೆ ನೀಡಬಹುದಿತ್ತು ಎನ್ನುವುದು  ಸ್ಥಳೀಯರ ಮಾಹಿತಿ.

Advertisement

ಹೀಗಾಗಿ ಇಲಾಖೆಗಳು ತಕ್ಷಣವೇ ಡೀಸೆಲ್‌ ವ್ಯವಸ್ಥೆ ಒದಗಿಸಿ ಭೀಕರ ಮಳೆಯ ಈ ಅವಧಿಯಲ್ಲೂ ಖಾಸಗಿ ಟವರ್‌ ಸಹಿತ ಬಿ ಎಸ್‌ ಎನ್‌ ಎಲ್‌ ನೆಟ್ವರ್ಕ್‌ ವ್ಯವಸ್ಥೆ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇವರು ಎಲ್ಲಾ ಕುಂದುಕೊರತೆಗಳ ನಡುವೆಯೂ ಮತದಾನ ಮಾಡ್ತಾರೆ…! | ಅವರು ಎಲ್ಲಾ ಸೌಕರ್ಯ ಇದ್ದರೂ ಮತದಾನ ಮಾಡಲಾರರು..!

ನಗರದಲ್ಲಿ ಮತದಾನ ಕಡಿಮೆಯಾಗಿರುವ ಬಗ್ಗೆ ಹಾಗೂ ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ಪ್ರಬಂಧ…

35 mins ago

Karnataka Weather | 29-04-2024 | ರಾಜ್ಯದ ಹಲವು ಕಡೆ ಅಧಿಕ ತಾಪಮಾನ | ಮಲೆನಾಡು ಭಾಗದ ಕೆಲವು ಕಡೆ ಮಳೆ ನಿರೀಕ್ಷೆ |

ಈಗಿನಂತೆ ಅಧಿಕ ತಾಪಮಾನದ ವಾತಾವರಣದ ಇನ್ನೂ 3 ರಿಂದ 4 ದಿನಗಳ ಕಾಲ…

2 hours ago

ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ನಾಯಕ | ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ…

2 hours ago

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

17 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

17 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

22 hours ago