ಕಳೆದ ರಾತ್ರಿ ಮತ್ತೆ ಮಹಾಮಳೆ ಸುರಿದಿದೆ. ಪಯಸ್ವಿನಿ ನದಿ ಉಕ್ಕಿ ಹರಿದಿದೆ. ಕಲ್ಲುಗುಂಡಿ, ಸಂಪಾಜೆ , ಗೂನಡ್ಕದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಸಂಪಾಜೆ, ಕಲ್ಲುಗುಂಡಿ, ಗೂನಡ್ಕ ಪ್ರದೇಶ ಎರಡು ದಿನಗಳ ಭಾರೀ ಮಳೆ ತತ್ತರವಾಗಿದೆ.
ಸಂಪಾಜೆ ಕೊಯನಾಡುನಲ್ಲಿ ನೆರೆ ಸೃಷ್ಟಿಯಾಗಿದೆ. ಸಂಪಾಜೆಯ ಮೇಲಿನ ಪ್ರದೇಶದಲ್ಲಿ ಭಾರೀ ಮಳೆಯಾದ್ದರಿಂದ ನೆರೆ ಸೃಷ್ಟಿಯಾಗಿತ್ತು. ಕೆಲವು ಮನೆಗಳ ಸ್ಥಳಾಂತರ ಮಾಡಲಾಗಿದೆ. ಕಲ್ಲುಗುಂಡಿಯ ಕೂಲಿಶೆಡ್ ಬಳಿ ನೀರು ನಿಂತಿರುವುದರಿಂದ ಸುಳ್ಯ-ಮಡಿಕೇರಿ ರಸ್ತೆ ಸಂಚಾರ ಬಂದ್ ಆಗಿದೆ. ಉಳಿದಂತೆ ಕಲ್ಲುಗುಂಡಿ ಪ್ರದೇಶದಲ್ಲಿ ಹಲವು ತೋಟ, ಮನೆಗಳಿಗೂ ನೀರು ನುಗ್ಗಿದೆ. ಸುಳ್ಯದ ಪೆರಾಜೆಯಲ್ಲೂ ನೀರು ಉಕ್ಕಿ ಹರಿದಿದೆ. ಅಲ್ಲಿನ ನಾಲ್ಕು ಕುಟುಂಬ ಸ್ಥಳಾಂತರ ಮಾಡಲಾಗಿದೆ. ಅರಂಬೂರು ಬಳಿ ತೂಗು ಸೇತುವೆಯ ಮೇಲೆ ನೀರು ಹರಿದಿದೆ.
ಕಡಬ ಪ್ರದೇಶದಲ್ಲಿಯೂ ಭಾರೀ ಮಳೆಯಾಗಿದ್ದು, ನೆಟ್ಟಣ, ರೆಂಜಿಲಾಡಿ ಪ್ರದೇಶದಲ್ಲಿ ಹೊಳೆ ಉಕ್ಕಿ ಹರಿದಿದೆ. ಹೀಗಾಗಿ ಹಲವು ಮನೆಗಳಿಗೆ ನೀರು ನುಗ್ಗಿದೆ.ಏಳು ಮಂದಿಯ ರಕ್ಷಣೆ ಮಾಡಲಾಗಿದೆ.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…