ಕಳೆದ ರಾತ್ರಿ ಮತ್ತೆ ಮಹಾಮಳೆ ಸುರಿದಿದೆ. ಪಯಸ್ವಿನಿ ನದಿ ಉಕ್ಕಿ ಹರಿದಿದೆ. ಕಲ್ಲುಗುಂಡಿ, ಸಂಪಾಜೆ , ಗೂನಡ್ಕದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಸಂಪಾಜೆ, ಕಲ್ಲುಗುಂಡಿ, ಗೂನಡ್ಕ ಪ್ರದೇಶ ಎರಡು ದಿನಗಳ ಭಾರೀ ಮಳೆ ತತ್ತರವಾಗಿದೆ.
ಸಂಪಾಜೆ ಕೊಯನಾಡುನಲ್ಲಿ ನೆರೆ ಸೃಷ್ಟಿಯಾಗಿದೆ. ಸಂಪಾಜೆಯ ಮೇಲಿನ ಪ್ರದೇಶದಲ್ಲಿ ಭಾರೀ ಮಳೆಯಾದ್ದರಿಂದ ನೆರೆ ಸೃಷ್ಟಿಯಾಗಿತ್ತು. ಕೆಲವು ಮನೆಗಳ ಸ್ಥಳಾಂತರ ಮಾಡಲಾಗಿದೆ. ಕಲ್ಲುಗುಂಡಿಯ ಕೂಲಿಶೆಡ್ ಬಳಿ ನೀರು ನಿಂತಿರುವುದರಿಂದ ಸುಳ್ಯ-ಮಡಿಕೇರಿ ರಸ್ತೆ ಸಂಚಾರ ಬಂದ್ ಆಗಿದೆ. ಉಳಿದಂತೆ ಕಲ್ಲುಗುಂಡಿ ಪ್ರದೇಶದಲ್ಲಿ ಹಲವು ತೋಟ, ಮನೆಗಳಿಗೂ ನೀರು ನುಗ್ಗಿದೆ. ಸುಳ್ಯದ ಪೆರಾಜೆಯಲ್ಲೂ ನೀರು ಉಕ್ಕಿ ಹರಿದಿದೆ. ಅಲ್ಲಿನ ನಾಲ್ಕು ಕುಟುಂಬ ಸ್ಥಳಾಂತರ ಮಾಡಲಾಗಿದೆ. ಅರಂಬೂರು ಬಳಿ ತೂಗು ಸೇತುವೆಯ ಮೇಲೆ ನೀರು ಹರಿದಿದೆ.
ಕಡಬ ಪ್ರದೇಶದಲ್ಲಿಯೂ ಭಾರೀ ಮಳೆಯಾಗಿದ್ದು, ನೆಟ್ಟಣ, ರೆಂಜಿಲಾಡಿ ಪ್ರದೇಶದಲ್ಲಿ ಹೊಳೆ ಉಕ್ಕಿ ಹರಿದಿದೆ. ಹೀಗಾಗಿ ಹಲವು ಮನೆಗಳಿಗೆ ನೀರು ನುಗ್ಗಿದೆ.ಏಳು ಮಂದಿಯ ರಕ್ಷಣೆ ಮಾಡಲಾಗಿದೆ.
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…
ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…