ಕಳೆದ ರಾತ್ರಿ ಮತ್ತೆ ಮಹಾಮಳೆ ಸುರಿದಿದೆ. ಪಯಸ್ವಿನಿ ನದಿ ಉಕ್ಕಿ ಹರಿದಿದೆ. ಕಲ್ಲುಗುಂಡಿ, ಸಂಪಾಜೆ , ಗೂನಡ್ಕದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಸಂಪಾಜೆ, ಕಲ್ಲುಗುಂಡಿ, ಗೂನಡ್ಕ ಪ್ರದೇಶ ಎರಡು ದಿನಗಳ ಭಾರೀ ಮಳೆ ತತ್ತರವಾಗಿದೆ.
ಸಂಪಾಜೆ ಕೊಯನಾಡುನಲ್ಲಿ ನೆರೆ ಸೃಷ್ಟಿಯಾಗಿದೆ. ಸಂಪಾಜೆಯ ಮೇಲಿನ ಪ್ರದೇಶದಲ್ಲಿ ಭಾರೀ ಮಳೆಯಾದ್ದರಿಂದ ನೆರೆ ಸೃಷ್ಟಿಯಾಗಿತ್ತು. ಕೆಲವು ಮನೆಗಳ ಸ್ಥಳಾಂತರ ಮಾಡಲಾಗಿದೆ. ಕಲ್ಲುಗುಂಡಿಯ ಕೂಲಿಶೆಡ್ ಬಳಿ ನೀರು ನಿಂತಿರುವುದರಿಂದ ಸುಳ್ಯ-ಮಡಿಕೇರಿ ರಸ್ತೆ ಸಂಚಾರ ಬಂದ್ ಆಗಿದೆ. ಉಳಿದಂತೆ ಕಲ್ಲುಗುಂಡಿ ಪ್ರದೇಶದಲ್ಲಿ ಹಲವು ತೋಟ, ಮನೆಗಳಿಗೂ ನೀರು ನುಗ್ಗಿದೆ. ಸುಳ್ಯದ ಪೆರಾಜೆಯಲ್ಲೂ ನೀರು ಉಕ್ಕಿ ಹರಿದಿದೆ. ಅಲ್ಲಿನ ನಾಲ್ಕು ಕುಟುಂಬ ಸ್ಥಳಾಂತರ ಮಾಡಲಾಗಿದೆ. ಅರಂಬೂರು ಬಳಿ ತೂಗು ಸೇತುವೆಯ ಮೇಲೆ ನೀರು ಹರಿದಿದೆ.
ಕಡಬ ಪ್ರದೇಶದಲ್ಲಿಯೂ ಭಾರೀ ಮಳೆಯಾಗಿದ್ದು, ನೆಟ್ಟಣ, ರೆಂಜಿಲಾಡಿ ಪ್ರದೇಶದಲ್ಲಿ ಹೊಳೆ ಉಕ್ಕಿ ಹರಿದಿದೆ. ಹೀಗಾಗಿ ಹಲವು ಮನೆಗಳಿಗೆ ನೀರು ನುಗ್ಗಿದೆ.ಏಳು ಮಂದಿಯ ರಕ್ಷಣೆ ಮಾಡಲಾಗಿದೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…