ಕಳೆದ ರಾತ್ರಿ ಮತ್ತೆ ಮಹಾಮಳೆ ಸುರಿದಿದೆ. ಪಯಸ್ವಿನಿ ನದಿ ಉಕ್ಕಿ ಹರಿದಿದೆ. ಕಲ್ಲುಗುಂಡಿ, ಸಂಪಾಜೆ , ಗೂನಡ್ಕದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಸಂಪಾಜೆ, ಕಲ್ಲುಗುಂಡಿ, ಗೂನಡ್ಕ ಪ್ರದೇಶ ಎರಡು ದಿನಗಳ ಭಾರೀ ಮಳೆ ತತ್ತರವಾಗಿದೆ.
ಸಂಪಾಜೆ ಕೊಯನಾಡುನಲ್ಲಿ ನೆರೆ ಸೃಷ್ಟಿಯಾಗಿದೆ. ಸಂಪಾಜೆಯ ಮೇಲಿನ ಪ್ರದೇಶದಲ್ಲಿ ಭಾರೀ ಮಳೆಯಾದ್ದರಿಂದ ನೆರೆ ಸೃಷ್ಟಿಯಾಗಿತ್ತು. ಕೆಲವು ಮನೆಗಳ ಸ್ಥಳಾಂತರ ಮಾಡಲಾಗಿದೆ. ಕಲ್ಲುಗುಂಡಿಯ ಕೂಲಿಶೆಡ್ ಬಳಿ ನೀರು ನಿಂತಿರುವುದರಿಂದ ಸುಳ್ಯ-ಮಡಿಕೇರಿ ರಸ್ತೆ ಸಂಚಾರ ಬಂದ್ ಆಗಿದೆ. ಉಳಿದಂತೆ ಕಲ್ಲುಗುಂಡಿ ಪ್ರದೇಶದಲ್ಲಿ ಹಲವು ತೋಟ, ಮನೆಗಳಿಗೂ ನೀರು ನುಗ್ಗಿದೆ. ಸುಳ್ಯದ ಪೆರಾಜೆಯಲ್ಲೂ ನೀರು ಉಕ್ಕಿ ಹರಿದಿದೆ. ಅಲ್ಲಿನ ನಾಲ್ಕು ಕುಟುಂಬ ಸ್ಥಳಾಂತರ ಮಾಡಲಾಗಿದೆ. ಅರಂಬೂರು ಬಳಿ ತೂಗು ಸೇತುವೆಯ ಮೇಲೆ ನೀರು ಹರಿದಿದೆ.
ಕಡಬ ಪ್ರದೇಶದಲ್ಲಿಯೂ ಭಾರೀ ಮಳೆಯಾಗಿದ್ದು, ನೆಟ್ಟಣ, ರೆಂಜಿಲಾಡಿ ಪ್ರದೇಶದಲ್ಲಿ ಹೊಳೆ ಉಕ್ಕಿ ಹರಿದಿದೆ. ಹೀಗಾಗಿ ಹಲವು ಮನೆಗಳಿಗೆ ನೀರು ನುಗ್ಗಿದೆ.ಏಳು ಮಂದಿಯ ರಕ್ಷಣೆ ಮಾಡಲಾಗಿದೆ.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…