ಕಳೆದ ರಾತ್ರಿ ಮತ್ತೆ ಮಹಾಮಳೆ ಸುರಿದಿದೆ. ಪಯಸ್ವಿನಿ ನದಿ ಉಕ್ಕಿ ಹರಿದಿದೆ. ಕಲ್ಲುಗುಂಡಿ, ಸಂಪಾಜೆ , ಗೂನಡ್ಕದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಸಂಪಾಜೆ, ಕಲ್ಲುಗುಂಡಿ, ಗೂನಡ್ಕ ಪ್ರದೇಶ ಎರಡು ದಿನಗಳ ಭಾರೀ ಮಳೆ ತತ್ತರವಾಗಿದೆ.
ಸಂಪಾಜೆ ಕೊಯನಾಡುನಲ್ಲಿ ನೆರೆ ಸೃಷ್ಟಿಯಾಗಿದೆ. ಸಂಪಾಜೆಯ ಮೇಲಿನ ಪ್ರದೇಶದಲ್ಲಿ ಭಾರೀ ಮಳೆಯಾದ್ದರಿಂದ ನೆರೆ ಸೃಷ್ಟಿಯಾಗಿತ್ತು. ಕೆಲವು ಮನೆಗಳ ಸ್ಥಳಾಂತರ ಮಾಡಲಾಗಿದೆ. ಕಲ್ಲುಗುಂಡಿಯ ಕೂಲಿಶೆಡ್ ಬಳಿ ನೀರು ನಿಂತಿರುವುದರಿಂದ ಸುಳ್ಯ-ಮಡಿಕೇರಿ ರಸ್ತೆ ಸಂಚಾರ ಬಂದ್ ಆಗಿದೆ. ಉಳಿದಂತೆ ಕಲ್ಲುಗುಂಡಿ ಪ್ರದೇಶದಲ್ಲಿ ಹಲವು ತೋಟ, ಮನೆಗಳಿಗೂ ನೀರು ನುಗ್ಗಿದೆ. ಸುಳ್ಯದ ಪೆರಾಜೆಯಲ್ಲೂ ನೀರು ಉಕ್ಕಿ ಹರಿದಿದೆ. ಅಲ್ಲಿನ ನಾಲ್ಕು ಕುಟುಂಬ ಸ್ಥಳಾಂತರ ಮಾಡಲಾಗಿದೆ. ಅರಂಬೂರು ಬಳಿ ತೂಗು ಸೇತುವೆಯ ಮೇಲೆ ನೀರು ಹರಿದಿದೆ.
ಕಡಬ ಪ್ರದೇಶದಲ್ಲಿಯೂ ಭಾರೀ ಮಳೆಯಾಗಿದ್ದು, ನೆಟ್ಟಣ, ರೆಂಜಿಲಾಡಿ ಪ್ರದೇಶದಲ್ಲಿ ಹೊಳೆ ಉಕ್ಕಿ ಹರಿದಿದೆ. ಹೀಗಾಗಿ ಹಲವು ಮನೆಗಳಿಗೆ ನೀರು ನುಗ್ಗಿದೆ.ಏಳು ಮಂದಿಯ ರಕ್ಷಣೆ ಮಾಡಲಾಗಿದೆ.
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…