ಕಳೆದ ರಾತ್ರಿ ಮತ್ತೆ ಮಹಾಮಳೆ ಸುರಿದಿದೆ. ಪಯಸ್ವಿನಿ ನದಿ ಉಕ್ಕಿ ಹರಿದಿದೆ. ಕಲ್ಲುಗುಂಡಿ, ಸಂಪಾಜೆ , ಗೂನಡ್ಕದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಸಂಪಾಜೆ, ಕಲ್ಲುಗುಂಡಿ, ಗೂನಡ್ಕ ಪ್ರದೇಶ ಎರಡು ದಿನಗಳ ಭಾರೀ ಮಳೆ ತತ್ತರವಾಗಿದೆ.
ಸಂಪಾಜೆ ಕೊಯನಾಡುನಲ್ಲಿ ನೆರೆ ಸೃಷ್ಟಿಯಾಗಿದೆ. ಸಂಪಾಜೆಯ ಮೇಲಿನ ಪ್ರದೇಶದಲ್ಲಿ ಭಾರೀ ಮಳೆಯಾದ್ದರಿಂದ ನೆರೆ ಸೃಷ್ಟಿಯಾಗಿತ್ತು. ಕೆಲವು ಮನೆಗಳ ಸ್ಥಳಾಂತರ ಮಾಡಲಾಗಿದೆ. ಕಲ್ಲುಗುಂಡಿಯ ಕೂಲಿಶೆಡ್ ಬಳಿ ನೀರು ನಿಂತಿರುವುದರಿಂದ ಸುಳ್ಯ-ಮಡಿಕೇರಿ ರಸ್ತೆ ಸಂಚಾರ ಬಂದ್ ಆಗಿದೆ. ಉಳಿದಂತೆ ಕಲ್ಲುಗುಂಡಿ ಪ್ರದೇಶದಲ್ಲಿ ಹಲವು ತೋಟ, ಮನೆಗಳಿಗೂ ನೀರು ನುಗ್ಗಿದೆ. ಸುಳ್ಯದ ಪೆರಾಜೆಯಲ್ಲೂ ನೀರು ಉಕ್ಕಿ ಹರಿದಿದೆ. ಅಲ್ಲಿನ ನಾಲ್ಕು ಕುಟುಂಬ ಸ್ಥಳಾಂತರ ಮಾಡಲಾಗಿದೆ. ಅರಂಬೂರು ಬಳಿ ತೂಗು ಸೇತುವೆಯ ಮೇಲೆ ನೀರು ಹರಿದಿದೆ.
ಕಡಬ ಪ್ರದೇಶದಲ್ಲಿಯೂ ಭಾರೀ ಮಳೆಯಾಗಿದ್ದು, ನೆಟ್ಟಣ, ರೆಂಜಿಲಾಡಿ ಪ್ರದೇಶದಲ್ಲಿ ಹೊಳೆ ಉಕ್ಕಿ ಹರಿದಿದೆ. ಹೀಗಾಗಿ ಹಲವು ಮನೆಗಳಿಗೆ ನೀರು ನುಗ್ಗಿದೆ.ಏಳು ಮಂದಿಯ ರಕ್ಷಣೆ ಮಾಡಲಾಗಿದೆ.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…