ಕಳೆದ ರಾತ್ರಿ ಮತ್ತೆ ಮಹಾಮಳೆ ಸುರಿದಿದೆ. ಪಯಸ್ವಿನಿ ನದಿ ಉಕ್ಕಿ ಹರಿದಿದೆ. ಕಲ್ಲುಗುಂಡಿ, ಸಂಪಾಜೆ , ಗೂನಡ್ಕದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಸಂಪಾಜೆ, ಕಲ್ಲುಗುಂಡಿ, ಗೂನಡ್ಕ ಪ್ರದೇಶ ಎರಡು ದಿನಗಳ ಭಾರೀ ಮಳೆ ತತ್ತರವಾಗಿದೆ.
ಸಂಪಾಜೆ ಕೊಯನಾಡುನಲ್ಲಿ ನೆರೆ ಸೃಷ್ಟಿಯಾಗಿದೆ. ಸಂಪಾಜೆಯ ಮೇಲಿನ ಪ್ರದೇಶದಲ್ಲಿ ಭಾರೀ ಮಳೆಯಾದ್ದರಿಂದ ನೆರೆ ಸೃಷ್ಟಿಯಾಗಿತ್ತು. ಕೆಲವು ಮನೆಗಳ ಸ್ಥಳಾಂತರ ಮಾಡಲಾಗಿದೆ. ಕಲ್ಲುಗುಂಡಿಯ ಕೂಲಿಶೆಡ್ ಬಳಿ ನೀರು ನಿಂತಿರುವುದರಿಂದ ಸುಳ್ಯ-ಮಡಿಕೇರಿ ರಸ್ತೆ ಸಂಚಾರ ಬಂದ್ ಆಗಿದೆ. ಉಳಿದಂತೆ ಕಲ್ಲುಗುಂಡಿ ಪ್ರದೇಶದಲ್ಲಿ ಹಲವು ತೋಟ, ಮನೆಗಳಿಗೂ ನೀರು ನುಗ್ಗಿದೆ. ಸುಳ್ಯದ ಪೆರಾಜೆಯಲ್ಲೂ ನೀರು ಉಕ್ಕಿ ಹರಿದಿದೆ. ಅಲ್ಲಿನ ನಾಲ್ಕು ಕುಟುಂಬ ಸ್ಥಳಾಂತರ ಮಾಡಲಾಗಿದೆ. ಅರಂಬೂರು ಬಳಿ ತೂಗು ಸೇತುವೆಯ ಮೇಲೆ ನೀರು ಹರಿದಿದೆ.
ಕಡಬ ಪ್ರದೇಶದಲ್ಲಿಯೂ ಭಾರೀ ಮಳೆಯಾಗಿದ್ದು, ನೆಟ್ಟಣ, ರೆಂಜಿಲಾಡಿ ಪ್ರದೇಶದಲ್ಲಿ ಹೊಳೆ ಉಕ್ಕಿ ಹರಿದಿದೆ. ಹೀಗಾಗಿ ಹಲವು ಮನೆಗಳಿಗೆ ನೀರು ನುಗ್ಗಿದೆ.ಏಳು ಮಂದಿಯ ರಕ್ಷಣೆ ಮಾಡಲಾಗಿದೆ.
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…