ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಬುಧವಾರ ಭರ್ಜರಿ ಮಳೆಯಾಗಿದೆ. ಸುಳ್ಯ ತಾಲೂಕಿನಲ್ಲಿ ಮಧ್ಯಾಹ್ನ 2.30 ರಿಂದ ಆರಂಭವಾದ ಮಳೆ ಸಂಜೆಯವರೆಗೆ ಧಾರಾಕಾರವಾಗಿ ಸುರಿಯಿತು. ಸುಳ್ಯ ನಗರದಲ್ಲಿ 56 ಮಿಮೀ ಮಳೆಯಾಗಿದೆ. ಉಳಿದಂತೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿದೆಡೆ ಭಾರೀ ಮಳೆಯಾಗಿದೆ. ಹೈದರಾಬಾದ್, ತೆಲಂಗಾಣದಲ್ಲೂ ಭಾರೀ ಮಳೆಯಾಗಿದ್ದು ಮೇಘಸ್ಫೋಟದ ಅನುಭವವಾಗಿದೆ.
ಬುಧವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಸುರಿದ ಭಾರೀ ಮಳೆಗೆ ಕೆಲ ಕಾಲ ಸಂಕಷ್ಟ ತಂದೊಟ್ಟಿತು. ಸುಳ್ಯ ನಗರದಲ್ಲಿ 56 ಮಿಮೀ ಮಳೆಯಾದರೆ ವಿವಿಧ ಕಡೆಗಳಲ್ಲಿ 40 ಮಿಮೀಗಿಂತಲೂ ಅಧಿಕ ಮಳೆಯಾಗಿದೆ. ಪುತ್ತೂರು ಸೇರಿದಂತೆ ಉಳಿದ ತಾಲೂಕಿನಲ್ಲಿ ಮಳೆಯ ಅಬ್ಬರ ಕಡಿಮೆ ಇತ್ತು.
ಚಿಕ್ಕಮಗಳೂರಿನಲ್ಲಿ ಭಾರೀ ಮಳೆ ಸುರಿದಿತ್ತು. ಬೆಂಗಳೂರಿನಲ್ಲಿ ಬುಧವಾರ ಸಂಜೆ ಭಾರೀ ಮಳೆಯಾಗಿದೆ. ಮಳೆಯ ಜೊತೆಗೆ ಗುಡುಗಿನ ಆರ್ಭಟವೂ ಹೆಚ್ಚಾಗಿತ್ತು. ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡಿದರು.
ರಾಷ್ಟ್ರ ರಾಜಧಾನಿಯಲ್ಲೂ ಮಳೆ ಸುರಿದು ಇದುವರೆಗಿನ ಬಿಸಿಲಿನ ಬೇಗೆಯಿಂದ ತತ್ತರಿಸಿದ ಜನರಿಗೆ ಕೊಂಚ ನಿರಾಳವಾಯಿತು. ತಾಪಮಾನ ಏರಿಕೆಯಿಂದ ದೆಹಲಿ ತತ್ತರಿಸಿತ್ತು.
ಬುಧವಾರ ಮುಂಜಾನೆ ಹೈದರಾಬಾದ್ನ ಕೆಲವು ಭಾಗಗಳಲ್ಲಿ ಬಿರುಗಾಳಿ ಮತ್ತು ಮಿಂಚು ಸಹಿತ ಭಾರೀ ಮಳೆ ಸುರಿಯಿತು. ಇದರಿಂದ ಬಿಸಿಲಿನ ತಾಪಕ್ಕೆ ಪರಿಹಾರ ದೊರೆತರೂ ಭಾರೀ ಮಳೆ ಸಂಕಷ್ಟ ತಂದಿತ್ತು. ಹಲವಾರು ತಗ್ಗು ಪ್ರದೇಶಗಳು ಜಲಾವೃತವಾಗಿತ್ತು. ತೆಲಂಗಾಣದಲ್ಲೀ ಭಾರೀ ಮಳೆಯಿಂದ ಸಂಕಷ್ಟವಾಯಿತು.ಮೇಘಸ್ಫೋಟದ ಮಾದರಿಯಲ್ಲಿ ಮಳೆ ಸುರಿದಿತ್ತು. ತೆಲಂಗಾಣದ ಸಿದ್ದಿಪುರ ಜಿಲ್ಲೆಯ ಹಬ್ಸಿಪುರದಲ್ಲಿ ಬೆಳಿಗ್ಗೆ 6 ಗಂಟೆಯವರೆಗೆ 108 ಮಿಮೀ ಮಳೆ ದಾಖಲಿಸಿದೆ. ಹೈದರಾಬಾದ್ನಲ್ಲಿ, ಸಿಕಂದರಾಬಾದ್ ಬಳಿಯ ಸೀತಾಫಲಮಂಡಿಯಲ್ಲಿ 72.8 ಮಿಮೀ ಮಳೆಯಾಗಿದೆ.
ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ…
ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…
ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…
ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…
ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…
ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…