Advertisement
ಸುದ್ದಿಗಳು

ಅಬ್ಬರಿಸಿದ ವರುಣ | ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಭಾರೀ ಮಳೆ | ಬೆಂಗಳೂರು ಸೇರಿ ವಿವಿದೆಡೆ ಮಳೆ | ಹೈದರಾಬಾದ್‌ -ತೆಲಂಗಾಣದಲ್ಲಿ ಮಳೆಯಿಂದ ಸಂಕಷ್ಟ |

Share

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಬುಧವಾರ ಭರ್ಜರಿ ಮಳೆಯಾಗಿದೆ. ಸುಳ್ಯ ತಾಲೂಕಿನಲ್ಲಿ  ಮಧ್ಯಾಹ್ನ 2.30 ರಿಂದ ಆರಂಭವಾದ ಮಳೆ ಸಂಜೆಯವರೆಗೆ ಧಾರಾಕಾರವಾಗಿ ಸುರಿಯಿತು. ಸುಳ್ಯ ನಗರದಲ್ಲಿ  56 ಮಿಮೀ ಮಳೆಯಾಗಿದೆ. ಉಳಿದಂತೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿದೆಡೆ ಭಾರೀ ಮಳೆಯಾಗಿದೆ. ಹೈದರಾಬಾದ್‌, ತೆಲಂಗಾಣದಲ್ಲೂ ಭಾರೀ ಮಳೆಯಾಗಿದ್ದು ಮೇಘಸ್ಫೋಟದ ಅನುಭವವಾಗಿದೆ.

Advertisement
Advertisement
Advertisement
Advertisement

ಬುಧವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಸುರಿದ ಭಾರೀ ಮಳೆಗೆ ಕೆಲ ಕಾಲ ಸಂಕಷ್ಟ ತಂದೊಟ್ಟಿತು. ಸುಳ್ಯ ನಗರದಲ್ಲಿ 56 ಮಿಮೀ ಮಳೆಯಾದರೆ ವಿವಿಧ ಕಡೆಗಳಲ್ಲಿ 40 ಮಿಮೀಗಿಂತಲೂ ಅಧಿಕ ಮಳೆಯಾಗಿದೆ. ಪುತ್ತೂರು ಸೇರಿದಂತೆ ಉಳಿದ ತಾಲೂಕಿನಲ್ಲಿ ಮಳೆಯ ಅಬ್ಬರ ಕಡಿಮೆ ಇತ್ತು.

Advertisement

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ ಸುರಿದಿತ್ತು. ಬೆಂಗಳೂರಿನಲ್ಲಿ ಬುಧವಾರ ಸಂಜೆ ಭಾರೀ ಮಳೆಯಾಗಿದೆ. ಮಳೆಯ ಜೊತೆಗೆ ಗುಡುಗಿನ ಆರ್ಭಟವೂ ಹೆಚ್ಚಾಗಿತ್ತು. ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡಿದರು.

Advertisement

ರಾಷ್ಟ್ರ ರಾಜಧಾನಿಯಲ್ಲೂ ಮಳೆ ಸುರಿದು ಇದುವರೆಗಿನ ಬಿಸಿಲಿನ ಬೇಗೆಯಿಂದ ತತ್ತರಿಸಿದ ಜನರಿಗೆ ಕೊಂಚ ನಿರಾಳವಾಯಿತು. ತಾಪಮಾನ ಏರಿಕೆಯಿಂದ ದೆಹಲಿ ತತ್ತರಿಸಿತ್ತು.

ಹೈದರಾಬಾದ್‌ ನಲ್ಲಿ ಮಳೆಯಬ್ಬರ

ಬುಧವಾರ ಮುಂಜಾನೆ ಹೈದರಾಬಾದ್‌ನ ಕೆಲವು ಭಾಗಗಳಲ್ಲಿ ಬಿರುಗಾಳಿ ಮತ್ತು ಮಿಂಚು ಸಹಿತ ಭಾರೀ ಮಳೆ ಸುರಿಯಿತು. ಇದರಿಂದ ಬಿಸಿಲಿನ ತಾಪಕ್ಕೆ ಪರಿಹಾರ ದೊರೆತರೂ ಭಾರೀ ಮಳೆ ಸಂಕಷ್ಟ ತಂದಿತ್ತು. ಹಲವಾರು ತಗ್ಗು ಪ್ರದೇಶಗಳು ಜಲಾವೃತವಾಗಿತ್ತು. ತೆಲಂಗಾಣದಲ್ಲೀ ಭಾರೀ ಮಳೆಯಿಂದ ಸಂಕಷ್ಟವಾಯಿತು.ಮೇಘಸ್ಫೋಟದ ಮಾದರಿಯಲ್ಲಿ ಮಳೆ ಸುರಿದಿತ್ತು.  ತೆಲಂಗಾಣದ  ಸಿದ್ದಿಪುರ ಜಿಲ್ಲೆಯ ಹಬ್ಸಿಪುರದಲ್ಲಿ ಬೆಳಿಗ್ಗೆ 6 ಗಂಟೆಯವರೆಗೆ 108 ಮಿಮೀ  ಮಳೆ ದಾಖಲಿಸಿದೆ. ಹೈದರಾಬಾದ್‌ನಲ್ಲಿ, ಸಿಕಂದರಾಬಾದ್ ಬಳಿಯ ಸೀತಾಫಲಮಂಡಿಯಲ್ಲಿ 72.8 ಮಿಮೀ ಮಳೆಯಾಗಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಲ್ಪಾವಧಿ ಬೆಳೆ ಸಾಲ – ಹಾಗೆಂದರೇನು..? | ರೈತರಿಗೆ ಪ್ರಯೋಜನ ಏನು..?

ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…

3 days ago

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

3 days ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

4 days ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

4 days ago