MIRROR FOCUS

#HeavyRain | ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪರೀಕ್ಷೆ ಬರೆಯಲು ಮಕ್ಕಳ ಸರ್ಕಸ್….‌ ! | ನದಿ ದಾಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ ತಾಲೂಕು, ಕಡಬ ತಾಲೂಕುಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಇದೇ ವೇಳೆ ಘಟ್ಟ ಪ್ರದೇಶಗಳಲ್ಲೂ ಭಾರೀ ಮಳೆ ಹಿನ್ನೆಲೆಯಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ.  ಹೀಗಾಗಿ  ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿ ಹೆದ್ದಾರಿ ಜಲಾವೃತಗೊಂಡಿದ್ದು ಪದವಿ ವಿದ್ಯಾರ್ಥಿಗಳು ಅಪಾಯಕಾರಿ ಸ್ಥಿತಿಯಲ್ಲಿ ಸಂಚರಿಸಿ ಪರೀಕ್ಷೆಗೆ ಹಾಜರಾಗಬೇಕಾದ ಸ್ಥಿತಿ ಉಂಟಾಗಿತ್ತು.

Advertisement
ಕುಮಾರಧಾರಾ ನದಿ ದಾಟುತ್ತಿರುವ ವಿದ್ಯಾರ್ಥಿಗಳು : Photo Credit : Shiva Bhat

ಮಂಗಳೂರು ಯುನಿವರ್ಸಿಟಿ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು, ಮಳೆ ಕಾರಣ ಪರೀಕ್ಷೆ ಮುಂದೂಡಿಕೆ ಆಗಿರಲಿಲ್ಲ. ಪರಿಣಾಮ ಪಂಜ ಭಾಗದಿಂದ ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿಗೆ ಪರೀಕ್ಷೆ ಹಾಜರಾಗಲು ಬರುವ ವಿದ್ಯಾರ್ಥಿಗಳು ಜಲಾವೃತಗೊಂಡ ರಸ್ತೆಯಲ್ಲೇ ಸಂಚರಿಸಿ ಪರೀಕ್ಷಾ ಕೇಂದ್ರಗಳತ್ತ ಬಂದಿದ್ದಾರೆ.  ಬೆಳಗ್ಗೆ ಹಾಗೂ ಮಧ್ಯಾಹ್ನ ಪರೀಕ್ಷೆಗಳು ನಡೆಯಿತ್ತಿವೆ. ಕೊಡಗು ಜಿಲ್ಲೆಯಲ್ಲಿ ಸೆಮಿಸ್ಟರ್ ಪರೀಕ್ಷೆ ಮುಂದೂಡಲಾಗಿತ್ತು. ಇಲ್ಲಿ ಮುಂದೂಡಿಕೆ ಆಗಿರಲಿಲ್ಲ.

ಕುಮಾರಧಾರಾ ನದಿ ದಾಟುತ್ತಿರುವ ವಿದ್ಯಾರ್ಥಿಗಳು : Photo Credit : Shiva Bhat

 

ಭಾರೀ ಮಳೆ ಹಿನ್ನೆಲೆಯಲ್ಲಿ ಶಾಲೆ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡುತ್ತದೆ. ಆದರೆ ಗ್ರಾಮೀಣ ಭಾಗದ ಪರಿಸ್ಥಿತಿ ಭಾರೀ ಮಳೆಯಾದರೆ ಯಾವತ್ತೂ ಸಂಕಷ್ಟದಲ್ಲಿರುತ್ತದೆ. ಮಳೆಗಾಲ ಸರಿಯಾದ ಸಂಪರ್ಕ ವ್ಯವಸ್ಥೆ ಇರುವುದಿಲ್ಲ, ನದಿ, ಹೊಳೆ ದಾಟಿ ಬರಬೇಕಾದ ಸ್ಥಿತಿ ಇರುತ್ತದೆ. ಆದರೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆಯಾಗಿ ಕುಮಾರಧಾರಾ ನದಿ ಉಕ್ಕಿ ಹರಿಯುವ ವೇಳೆ ಅಪಾಯ ಸಂದರ್ಭದಲ್ಲಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಆಗಮಿಸಿದ್ದು ಈಗ ಚರ್ಚೆಗೆ ಕಾರಣವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…

2 hours ago

ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

3 hours ago

ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ

ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…

3 hours ago

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ

ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…

11 hours ago

ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…

22 hours ago

ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…

22 hours ago