MIRROR FOCUS

#HeavyRain | ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪರೀಕ್ಷೆ ಬರೆಯಲು ಮಕ್ಕಳ ಸರ್ಕಸ್….‌ ! | ನದಿ ದಾಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ ತಾಲೂಕು, ಕಡಬ ತಾಲೂಕುಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಇದೇ ವೇಳೆ ಘಟ್ಟ ಪ್ರದೇಶಗಳಲ್ಲೂ ಭಾರೀ ಮಳೆ ಹಿನ್ನೆಲೆಯಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ.  ಹೀಗಾಗಿ  ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿ ಹೆದ್ದಾರಿ ಜಲಾವೃತಗೊಂಡಿದ್ದು ಪದವಿ ವಿದ್ಯಾರ್ಥಿಗಳು ಅಪಾಯಕಾರಿ ಸ್ಥಿತಿಯಲ್ಲಿ ಸಂಚರಿಸಿ ಪರೀಕ್ಷೆಗೆ ಹಾಜರಾಗಬೇಕಾದ ಸ್ಥಿತಿ ಉಂಟಾಗಿತ್ತು.

Advertisement
Advertisement
ಕುಮಾರಧಾರಾ ನದಿ ದಾಟುತ್ತಿರುವ ವಿದ್ಯಾರ್ಥಿಗಳು : Photo Credit : Shiva Bhat

ಮಂಗಳೂರು ಯುನಿವರ್ಸಿಟಿ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು, ಮಳೆ ಕಾರಣ ಪರೀಕ್ಷೆ ಮುಂದೂಡಿಕೆ ಆಗಿರಲಿಲ್ಲ. ಪರಿಣಾಮ ಪಂಜ ಭಾಗದಿಂದ ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿಗೆ ಪರೀಕ್ಷೆ ಹಾಜರಾಗಲು ಬರುವ ವಿದ್ಯಾರ್ಥಿಗಳು ಜಲಾವೃತಗೊಂಡ ರಸ್ತೆಯಲ್ಲೇ ಸಂಚರಿಸಿ ಪರೀಕ್ಷಾ ಕೇಂದ್ರಗಳತ್ತ ಬಂದಿದ್ದಾರೆ.  ಬೆಳಗ್ಗೆ ಹಾಗೂ ಮಧ್ಯಾಹ್ನ ಪರೀಕ್ಷೆಗಳು ನಡೆಯಿತ್ತಿವೆ. ಕೊಡಗು ಜಿಲ್ಲೆಯಲ್ಲಿ ಸೆಮಿಸ್ಟರ್ ಪರೀಕ್ಷೆ ಮುಂದೂಡಲಾಗಿತ್ತು. ಇಲ್ಲಿ ಮುಂದೂಡಿಕೆ ಆಗಿರಲಿಲ್ಲ.

ಕುಮಾರಧಾರಾ ನದಿ ದಾಟುತ್ತಿರುವ ವಿದ್ಯಾರ್ಥಿಗಳು : Photo Credit : Shiva Bhat

 

ಭಾರೀ ಮಳೆ ಹಿನ್ನೆಲೆಯಲ್ಲಿ ಶಾಲೆ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡುತ್ತದೆ. ಆದರೆ ಗ್ರಾಮೀಣ ಭಾಗದ ಪರಿಸ್ಥಿತಿ ಭಾರೀ ಮಳೆಯಾದರೆ ಯಾವತ್ತೂ ಸಂಕಷ್ಟದಲ್ಲಿರುತ್ತದೆ. ಮಳೆಗಾಲ ಸರಿಯಾದ ಸಂಪರ್ಕ ವ್ಯವಸ್ಥೆ ಇರುವುದಿಲ್ಲ, ನದಿ, ಹೊಳೆ ದಾಟಿ ಬರಬೇಕಾದ ಸ್ಥಿತಿ ಇರುತ್ತದೆ. ಆದರೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆಯಾಗಿ ಕುಮಾರಧಾರಾ ನದಿ ಉಕ್ಕಿ ಹರಿಯುವ ವೇಳೆ ಅಪಾಯ ಸಂದರ್ಭದಲ್ಲಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಆಗಮಿಸಿದ್ದು ಈಗ ಚರ್ಚೆಗೆ ಕಾರಣವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಬ್ಬರ್‌ ಆಮದು | ರಬ್ಬರ್‌ ಬೆಳೆಗಾರರಿಗೆ ತರಲಿದೆ ಧಾರಣೆ ಸಂಕಷ್ಟ

ದೇಶದಲ್ಲಿ ರಬ್ಬರ್‌ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್‌ ಆಮದು ನೀತಿಯು ರಬ್ಬರ್‌…

8 hours ago

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣ | ಪಶ್ಚಿಮ ಬಂಗಾಳದಲ್ಲಿ ಅಡಿಕೆ ವ್ಯಾಪಾರಿಯ ಬಂಧನ

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…

8 hours ago

ಸುಳ್ಯದಲ್ಲಿ ಏಕೆ ಇದೆಲ್ಲಾ ಬಗೆಹರಿಯದ ಸಮಸ್ಯೆ…? | ರಸ್ತೆ-ವಿದ್ಯುತ್‌-ಸೇತುವೆಗಳು ಮರೀಚಿಕೆಯೇ..? |

ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…

9 hours ago

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…

17 hours ago

ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ

ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್‌ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…

17 hours ago

ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?

ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…

18 hours ago