Advertisement
MIRROR FOCUS

ರಕ್ಷಣಾ ವಲಯದಲ್ಲಿ ಭಾರತದ ಸಾಧನೆ | ಫಿಲಿಪೈನ್ಸ್‌ಗೆ ಭಾರತದ ಬ್ರಹ್ಮೋಸ್ ರಫ್ತು| ಬೇರೆ ರಾಷ್ಟ್ರಗಳಿಂದ ಹೆಚ್ಚಿದ ಬೇಡಿಕೆ

Share

ನಮ್ಮ ರಕ್ಷಣಾ ವಲಯಕ್ಕೆ(Military sectoir) ಬೇಕಾದ ಸಾಮಾಗ್ರಿಗಳು, ಶಸ್ತ್ರಾಸ್ತ್ರಗಳು(weapons), ಯುದ್ಧ ವಿಮಾನಗಳು(Fighting jets), ಹೆಲಿಕಾಫ್ಟರ್‌ಗಳು(Helicopters), ನೌಕೆಗಳು(Navy) ಎಲ್ಲವೂ ವಿದೇಶದಿಂದ(Foreign) ಖರೀದಿಸಲಾಗುತ್ತಿತ್ತು. ಆದರೆ ಈ ಚಿತ್ರಣ ಈಗ ಬದಲಾಗಿದೆ. ವಿದೇಶಗಳಿಂದ ಆಮದು(Import) ಮಾಡಿಕೊಳ್ಳುವ ಕಾಲ ಹೋಯ್ತು. ಈಗ ಏನಿದ್ದರೂ ಆತ್ಮನಿರ್ಭರ ಭಾರತ. ಮೇಕ್‌ ಇನ್‌ ಇಂಡಿಯಾ(Make in India) ಯೋಜನೆಯಡಿ ಈಗ ಬಹುತೇಕ ಮಿಲಿಟರಿ ಸಂಬಂಧಿತ ವಸ್ತುಗಳನ್ನು ನಮ್ಮ ದೇಶದಲ್ಲೇ ತಯಾರಿಸಲಾಗುತ್ತಿದೆ. ಅಷ್ಟೆ ಅಲ್ಲದೆ ವಿದೇಶಗಳಿಗೆ ರಫ್ತು(Export) ಕೂಡ ಮಾಡಲಾಗುತ್ತಿದೆ. ಭಾರತ (India) ಹಾಗೂ ಫಿಲಿಪೈನ್ಸ್ ನಡುವೆ ನಡೆದಿದ್ದ ಒಪ್ಪಂದದಂತೆ ಬ್ರಹ್ಮೋಸ್ ಸೂಪರ್‍ಸಾನಿಕ್ ಕ್ರೂಸ್ ಕ್ಷಿಪಣಿಗಳು  (BrahMos missile) ಫಿಲಿಪೈನ್ಸ್‌ಗೆ (Philippines) ರಫ್ತಾಗಿದೆ.

ಜ.2022 ರಲ್ಲಿ, ಎರಡು ದೇಶಗಳು 3,130 ಕೋಟಿ ರೂ. ಒಪ್ಪಂದಕ್ಕೆ ಸಹಿ ಹಾಕಿದ್ದವು. ಒಪ್ಪಂದದ ಅಡಿಯಲ್ಲಿ, ಭಾರತ ಮತ್ತು ರಷ್ಯಾದ ಜಂಟಿ ಉದ್ಯಮವಾದ ಬ್ರಹ್ಮೋಸ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್, ಹೈಸ್ಪೀಡ್ ಬ್ರಹ್ಮೋಸ್ ಕ್ಷಿಪಣಿ ವ್ಯವಸ್ಥೆಯ ಮೂರು ರಫ್ತು ಆವೃತ್ತಿಗಳೊಂದಿಗೆ ಕ್ಷಿಪಣಿಗಳನ್ನು ಪೂರೈಸುತ್ತಿದೆ. ಅಲ್ಲದೇ ಈ ಒಪ್ಪಂದದಲ್ಲಿ ಫಿಲಿಪೈನ್ಸ್‍ಗೆ ಬ್ರಹ್ಮೋಸ್ ನಿರ್ವಹಣೆಗೆ ಬೇಕಾದ ಅಗತ್ಯ ತರಬೇತಿಯನ್ನು ಸಹ ನಿರ್ವಾಹಕರಿಗೆ ನೀಡಲಿದೆ.

ಇದೀಗ ಯುದ್ಧ ಸಾಮಗ್ರಿಗಳ ಮೊದಲ ಬ್ಯಾಚ್ ಅಂತಿಮವಾಗಿ ಫಿಲಿಪೈನ್ಸ್‌ಗೆ ತಲುಪಿದೆ. ಪ್ರತಿ ಘಟಕದಲ್ಲೂ ಎರಡು ಕ್ಷಿಪಣಿ ಉಡಾವಣಾ ವ್ಯವಸ್ಥೆ, ರೆಡಾರ್ ಘಟಕ, ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್‍ನ್ನು ಒಳಗೊಂಡಿದೆ. ಈ ವ್ಯವಸ್ಥೆಯು ಜಲಾಂತರ್ಗಾಮಿ ನೌಕೆಗಳು, ಹಡಗುಗಳು, ವಿಮಾನಗಳು ಅಥವಾ ಭೂಮಿಯಿಂದ 10 ಸೆಕೆಂಡುಗಳ ಅವಧಿಯಲ್ಲಿ ಎರಡು ಕ್ಷಿಪಣಿಗಳನ್ನು ಉಡಾಯಿಸಬಲ್ಲದು. ಭಾರತೀಯ ವಾಯುಪಡೆಯ ಸಿ-17 ಗ್ಲೋಬ್ ಮಾಸ್ಟರ್ ಜೆಟ್ ಮೂಲಕ ಕ್ಷಿಪಣಿಗಳನ್ನು ಭಾರತದಿಂದ ಫಿಲಿಪೈನ್ಸ್‌ಗೆ ಸಾಗಿಸಿದ್ದು, ಇದು ಬ್ರಹ್ಮೋಸ್ ಕ್ಷಿಪಣಿಯನ್ನು ರಫ್ತು ಮಾಡಿದ ಮೊದಲ ನಿದರ್ಶನವಾಗಿದೆ. ಅಜೆರ್ಂಟೀನಾ ಸೇರಿದಂತೆ ಹಲವಾರು ರಾಷ್ಟ್ರಗಳು ಭಾರತದಿಂದ ಬ್ರಹ್ಮೋಸ್ ಕ್ಷಿಪಣಿಗಳನ್ನು ಕೊಂಡುಕೊಳ್ಳಲು ಆಸಕ್ತಿ ತೋರಿಸಿವೆ. ಚೀನಾ ಸಮುದ್ರದಲ್ಲಿ ಹೆಚ್ಚುತ್ತಿರುವ ಮಿಲಿಟರಿ ಚಟುವಟಿಕೆಗಳ ಬಗ್ಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗಳಾಗುತ್ತಿದೆ. ಈ ಹಿನ್ನೆಲೆಯ್ಲಲಿ ಫಿಲಿಪೈನ್ಸ್‌ನೊಂದಿಗೆ ರಕ್ಷಣಾ ಸಹಕಾರವನ್ನು ಬಲಪಡಿಸುವ ಗುರಿಯನ್ನು ಭಾರತ ಹೊಂದಿದೆ. ಬ್ರಹ್ಮೋಸ್ ಕ್ಷಿಪಣಿಯು 2.8 ಮ್ಯಾಕ್ ವೇಗದಲ್ಲಿ ಚಲಿಸುತ್ತದೆ, ಇದು ಶಬ್ದದ ವೇಗಕ್ಕಿಂತ ಮೂರು ಪಟ್ಟು ಹೆಚ್ಚಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

2 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

2 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

18 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

18 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

24 hours ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

2 days ago