Advertisement
MIRROR FOCUS

ರಕ್ಷಣಾ ವಲಯದಲ್ಲಿ ಭಾರತದ ಸಾಧನೆ | ಫಿಲಿಪೈನ್ಸ್‌ಗೆ ಭಾರತದ ಬ್ರಹ್ಮೋಸ್ ರಫ್ತು| ಬೇರೆ ರಾಷ್ಟ್ರಗಳಿಂದ ಹೆಚ್ಚಿದ ಬೇಡಿಕೆ

Share

ನಮ್ಮ ರಕ್ಷಣಾ ವಲಯಕ್ಕೆ(Military sectoir) ಬೇಕಾದ ಸಾಮಾಗ್ರಿಗಳು, ಶಸ್ತ್ರಾಸ್ತ್ರಗಳು(weapons), ಯುದ್ಧ ವಿಮಾನಗಳು(Fighting jets), ಹೆಲಿಕಾಫ್ಟರ್‌ಗಳು(Helicopters), ನೌಕೆಗಳು(Navy) ಎಲ್ಲವೂ ವಿದೇಶದಿಂದ(Foreign) ಖರೀದಿಸಲಾಗುತ್ತಿತ್ತು. ಆದರೆ ಈ ಚಿತ್ರಣ ಈಗ ಬದಲಾಗಿದೆ. ವಿದೇಶಗಳಿಂದ ಆಮದು(Import) ಮಾಡಿಕೊಳ್ಳುವ ಕಾಲ ಹೋಯ್ತು. ಈಗ ಏನಿದ್ದರೂ ಆತ್ಮನಿರ್ಭರ ಭಾರತ. ಮೇಕ್‌ ಇನ್‌ ಇಂಡಿಯಾ(Make in India) ಯೋಜನೆಯಡಿ ಈಗ ಬಹುತೇಕ ಮಿಲಿಟರಿ ಸಂಬಂಧಿತ ವಸ್ತುಗಳನ್ನು ನಮ್ಮ ದೇಶದಲ್ಲೇ ತಯಾರಿಸಲಾಗುತ್ತಿದೆ. ಅಷ್ಟೆ ಅಲ್ಲದೆ ವಿದೇಶಗಳಿಗೆ ರಫ್ತು(Export) ಕೂಡ ಮಾಡಲಾಗುತ್ತಿದೆ. ಭಾರತ (India) ಹಾಗೂ ಫಿಲಿಪೈನ್ಸ್ ನಡುವೆ ನಡೆದಿದ್ದ ಒಪ್ಪಂದದಂತೆ ಬ್ರಹ್ಮೋಸ್ ಸೂಪರ್‍ಸಾನಿಕ್ ಕ್ರೂಸ್ ಕ್ಷಿಪಣಿಗಳು  (BrahMos missile) ಫಿಲಿಪೈನ್ಸ್‌ಗೆ (Philippines) ರಫ್ತಾಗಿದೆ.

ಜ.2022 ರಲ್ಲಿ, ಎರಡು ದೇಶಗಳು 3,130 ಕೋಟಿ ರೂ. ಒಪ್ಪಂದಕ್ಕೆ ಸಹಿ ಹಾಕಿದ್ದವು. ಒಪ್ಪಂದದ ಅಡಿಯಲ್ಲಿ, ಭಾರತ ಮತ್ತು ರಷ್ಯಾದ ಜಂಟಿ ಉದ್ಯಮವಾದ ಬ್ರಹ್ಮೋಸ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್, ಹೈಸ್ಪೀಡ್ ಬ್ರಹ್ಮೋಸ್ ಕ್ಷಿಪಣಿ ವ್ಯವಸ್ಥೆಯ ಮೂರು ರಫ್ತು ಆವೃತ್ತಿಗಳೊಂದಿಗೆ ಕ್ಷಿಪಣಿಗಳನ್ನು ಪೂರೈಸುತ್ತಿದೆ. ಅಲ್ಲದೇ ಈ ಒಪ್ಪಂದದಲ್ಲಿ ಫಿಲಿಪೈನ್ಸ್‍ಗೆ ಬ್ರಹ್ಮೋಸ್ ನಿರ್ವಹಣೆಗೆ ಬೇಕಾದ ಅಗತ್ಯ ತರಬೇತಿಯನ್ನು ಸಹ ನಿರ್ವಾಹಕರಿಗೆ ನೀಡಲಿದೆ.

ಇದೀಗ ಯುದ್ಧ ಸಾಮಗ್ರಿಗಳ ಮೊದಲ ಬ್ಯಾಚ್ ಅಂತಿಮವಾಗಿ ಫಿಲಿಪೈನ್ಸ್‌ಗೆ ತಲುಪಿದೆ. ಪ್ರತಿ ಘಟಕದಲ್ಲೂ ಎರಡು ಕ್ಷಿಪಣಿ ಉಡಾವಣಾ ವ್ಯವಸ್ಥೆ, ರೆಡಾರ್ ಘಟಕ, ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್‍ನ್ನು ಒಳಗೊಂಡಿದೆ. ಈ ವ್ಯವಸ್ಥೆಯು ಜಲಾಂತರ್ಗಾಮಿ ನೌಕೆಗಳು, ಹಡಗುಗಳು, ವಿಮಾನಗಳು ಅಥವಾ ಭೂಮಿಯಿಂದ 10 ಸೆಕೆಂಡುಗಳ ಅವಧಿಯಲ್ಲಿ ಎರಡು ಕ್ಷಿಪಣಿಗಳನ್ನು ಉಡಾಯಿಸಬಲ್ಲದು. ಭಾರತೀಯ ವಾಯುಪಡೆಯ ಸಿ-17 ಗ್ಲೋಬ್ ಮಾಸ್ಟರ್ ಜೆಟ್ ಮೂಲಕ ಕ್ಷಿಪಣಿಗಳನ್ನು ಭಾರತದಿಂದ ಫಿಲಿಪೈನ್ಸ್‌ಗೆ ಸಾಗಿಸಿದ್ದು, ಇದು ಬ್ರಹ್ಮೋಸ್ ಕ್ಷಿಪಣಿಯನ್ನು ರಫ್ತು ಮಾಡಿದ ಮೊದಲ ನಿದರ್ಶನವಾಗಿದೆ. ಅಜೆರ್ಂಟೀನಾ ಸೇರಿದಂತೆ ಹಲವಾರು ರಾಷ್ಟ್ರಗಳು ಭಾರತದಿಂದ ಬ್ರಹ್ಮೋಸ್ ಕ್ಷಿಪಣಿಗಳನ್ನು ಕೊಂಡುಕೊಳ್ಳಲು ಆಸಕ್ತಿ ತೋರಿಸಿವೆ. ಚೀನಾ ಸಮುದ್ರದಲ್ಲಿ ಹೆಚ್ಚುತ್ತಿರುವ ಮಿಲಿಟರಿ ಚಟುವಟಿಕೆಗಳ ಬಗ್ಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗಳಾಗುತ್ತಿದೆ. ಈ ಹಿನ್ನೆಲೆಯ್ಲಲಿ ಫಿಲಿಪೈನ್ಸ್‌ನೊಂದಿಗೆ ರಕ್ಷಣಾ ಸಹಕಾರವನ್ನು ಬಲಪಡಿಸುವ ಗುರಿಯನ್ನು ಭಾರತ ಹೊಂದಿದೆ. ಬ್ರಹ್ಮೋಸ್ ಕ್ಷಿಪಣಿಯು 2.8 ಮ್ಯಾಕ್ ವೇಗದಲ್ಲಿ ಚಲಿಸುತ್ತದೆ, ಇದು ಶಬ್ದದ ವೇಗಕ್ಕಿಂತ ಮೂರು ಪಟ್ಟು ಹೆಚ್ಚಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

11 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

11 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

11 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

11 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

11 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

19 hours ago