ಬೀದರ್ ಜಿಲ್ಲೆಯಲ್ಲಿ ಮಳೆಯಿಂದ ಭಾರೀ ಬೆಳೆ ಹಾನಿ | ಸ್ಥಳಕ್ಕೆ ಸಚಿವ ಈಶ್ವರ ಬಿ.ಖಂಡ್ರೆ ಭೇಟಿ, ಪರಿಶೀಲನೆ

August 28, 2025
6:50 AM

ಮಳೆಯಿಂದ ಹಾನಿಗೊಳಗಾದ ಬೀದರ್ ಜಿಲ್ಲೆಯ ಹಲವು ಗ್ರಾಮಗಳಿಗೆ  ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಬಿ. ಖಂಡ್ರೆ  ಭೇಟಿ ಪರಿಶೀಲನೆ ನಡೆಸಿದರು. ಬಳಿಕ ಸ್ಥಳೀಯ ನಾಗರಿಕರಿಂದ ಸಮಸ್ಯೆ ಆಲಿಸಿದರು. ಕಳೆದ ಹಲವು ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದಾಗಿ  ಜಿಲ್ಲೆಯ ಕಮಲಾನಗರ, ಔರಾದ್ ತಾಲೂಕಿನ ಅಕನಾಪೂರ, ಬಾವಲಗಾಂವ, ಹಂಗರಗಾ, ಸಾವರಗಾಂವ, ಬೋಂತಿಗಾಮಾನಾಯಕ ತಾಂಡದಲ್ಲಿ ಬೆಳೆ ಹಾನಿ ಸಂಭವಿಸಿದ್ದು,ಸೇತುವೆ, ಕೆರೆ ಕಟ್ಟೆಗಳು ಕೊಚ್ಚಿ ಹೋಗಿವೆ.

ರೈತರು ಮತ್ತು ಸಂತ್ರಸ್ತ ನಾಗರಿಕರ ಸಮಸ್ಯೆಗಳನ್ನು ಆಲಿಸಿದ್ದೇನೆ. ಎಲ್ಲಾ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಪುನರ್ವಸತಿ, ಪುನರ್ ನಿರ್ಮಾಣ ಕಾರ್ಯ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಔರಾದ್ ತಾಲೂಕಿನಲ್ಲಿ ದಾಖಲೆಯ 300 ಮಿಲಿ ಮೀಟರ್ ಮಳೆಯಾಗಿರುವುದರಿಂದ ಅಕನಾಪೂರ ಗ್ರಾಮದ ಕೆರೆ ಒಡೆದು ಬಹಳಷ್ಟು ಹಾನಿಯಾಗಿದೆ. ಬೆಳೆ ಹಾನಿ ಬಗ್ಗೆ ಅಧಿಕಾರಿಗಳು ಸಮೀಕ್ಷೆಯ ಬಳಿಕ ಸರ್ಕಾರದಿಂದ ಪರಿಹಾರ ನೀಡಲಾಗುವುದು. ಹೆಚ್ಚಿನ ಪರಿಹಾರಕ್ಕೆ ಸಚಿವ ಸಂಪುಟದಲ್ಲಿ ಚರ್ಚಿಸಿ, ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.

ಈ ಸಂದರ್ಭದಲ್ಲಿ ಪೌರಾಡಳಿತ ಹಾಗೂ ಹಜ್‍ ಖಾತೆ ಸಚಿವ ರಹೀಂಖಾನ್, ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಗಿರೀಶ್ ಬದೋಲೆ, ಬೀದರ ಸಹಾಯಕ ಆಯುಕ್ತ ಮೊಹಮದ್ ಶಕೀಲ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ
2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು
May 3, 2026
8:17 AM
by: ದ ರೂರಲ್ ಮಿರರ್.ಕಾಂ
ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ
May 3, 2026
7:10 AM
by: ಮಿರರ್‌ ಡೆಸ್ಕ್
ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ
May 3, 2026
7:02 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror