ಕಾವೇರಿ ಜಲಾನಯನ(Cauvery belt) ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ (Rain) ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆಎರ್ಎಸ್ (KRS) ಡ್ಯಾಂ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ಒಂದೇ ವಾರದಲ್ಲಿ 11 ಅಡಿಯಷ್ಟು ಡ್ಯಾಂ ಭರ್ತಿಯಾಗಿದ್ದು, ಕೆಆರ್ಎಸ್ ನೀರಿನ ಮಟ್ಟ (Water Level) 98 ಅಡಿಗೆ ತಲುಪಿದೆ.
ವಾರದ ಹಿಂದಷ್ಟೇ ಕೆಆರ್ಎಸ್ ಡ್ಯಾಂನ ನೀರಿನ ಮಟ್ಟ 87 ಅಡಿಗೆ ಕುಸಿದಿತ್ತು. ಪ್ರಸ್ತುತ ನಿರಂತರ ಮಳೆಯಿಂದಾಗಿ ಕೆಆರ್ಎಸ್ಗೆ ನೀರು ಹರಿದು ಬರುತ್ತಿದೆ. ಮಳೆ ಮತ್ತಷ್ಟು ಜೋರಾದರೆ ಕೆಲವೇ ದಿನದಲ್ಲಿ ಡ್ಯಾಂ ಸಂಪೂರ್ಣ ಭರ್ತಿಯಾಗುವ ಸಾಧ್ಯತೆಯಿದೆ. ಸದ್ಯ ಡ್ಯಾಂನಲ್ಲಿ ಸುಮಾರು 21.987 ಟಿಎಂಸಿ ನೀರು ಸಂಗ್ರಹವಾಗಿದೆ. ಒಂದು ವಾರದಲ್ಲಿ 6 ಟಿಎಂಸಿಯಷ್ಟು ನೀರು ಸಂಗ್ರಹವಾಗಿದ್ದು, ದಿನೇ ದಿನೇ ನೀರಿನ ಮಟ್ಟ ಹೆಚ್ಚಳದಿಂದ ರೈತರಲ್ಲಿ ಸಂತಸ ಮನೆ ಮಾಡಿದೆ. ಅಲ್ಲದೇ ಅನ್ನದಾತ ಶೀಘ್ರವೇ ನಾಲೆಗಳಿಗೆ ನೀರು ಬಿಡುವ ನಿರೀಕ್ಷೆಯಲ್ಲಿದ್ದಾರೆ.
ಮುಂದಿನ ಒಂದು ವಾರ ಕರಾವಳಿಯ (Coastal Karnataka) ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಳಿಗೆ ಇಂದು ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದ್ದು, ಹವಾಮಾನ ಇಲಾಖೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಿದೆ.
ಭಾರತದಾದ್ಯಂತ ಮುಂಗಾರು ಸಕ್ರಿಯವಾಗಿದೆ. ಈ ಬಾರಿ ಉತ್ತಮ ಮುಂಗಾರು ಮಳೆಯಾಗುತ್ತಿದೆ. ಸದ್ಯ ಸಾಮಾನ್ಯ…
ಬೆಳೆಗಳಿಗೆ ಔಷಧಿ ಸಿಂಪಡಣೆ ವೇಳೆ ಹೆಚ್ಚಿನ ದಕ್ಷತೆ ಹಾಗೂ ಪರಿಣಾಮಕಾರಿಯಾಗುವ ಉದ್ದೇಶದಿಂದ ವಿವಿಧ…
ಆರೋಗ್ಯವು ಜೀವನದ ಪ್ರಮುಖ ಅಂಗವಾಗಿದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನವು…
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…
ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…